Homeಕರ್ನಾಟಕಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಕರ್ನಾಟಕದಾದ್ಯಂತ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿ ಖಜಾಂಜಿ ಹುದ್ದೆ ಮತ್ತು ಒಟ್ಟು ಹುದ್ದೆಗಳಲ್ಲಿ ಶೇ.30ರಷ್ಟು ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ (ಮಾ.24) ಆದೇಶಿಸಿದೆ.

ಬೆಂಗಳೂರಿನ ವಕೀಲರ ಸಂಘದ (ಎಎಬಿ) ಪ್ರಕರಣದಲ್ಲಿ ನೀಡಲಾದ ನಿರ್ದೇಶನವು ಕರ್ನಾಟಕದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಇಂತಹ ನಿರ್ದೇಶನ ನೀಡಿತ್ತು. ಅಲ್ಲದೆ, ಈ ವರ್ಷದ ಜನವರಿ 24 ರಂದು ಹೊರಡಿಸಿದ ಆದೇಶದಲ್ಲಿ, ಖಜಾಂಚಿ (ಕೋಶಾಧಿಕಾರಿ) ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆಂದೇ ಮೀಸಲಿಡಬೇಕೆಂದು ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಎಎಬಿ ಚುನಾವಣೆ ನಡೆದಿರುವ ಬಗ್ಗೆ ಎರಡು ದಿನಗಳ ಹಿಂದೆ ಪೀಠದ ಗಮನಕ್ಕೆ ತರಲಾಗಿತ್ತು. ಜನವರಿ 28ರಂದು ಎಎಬಿ ಆಡಳಿತ ಮಂಡಳಿಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಮೀಸಲಾತಿ ಜಾರಿಗೆ ತಂದಿರುವುದಾಗಿ ತಿಳಿಸಲಾಗಿತ್ತು.

ರಾಜ್ಯದ ಎಲ್ಲಾ ವಕೀಲರ ಸಂಘಗಳ ಚುನಾವಣೆಗಳಲ್ಲಿ ಮಹಿಳಾ ವಕೀಲರಿಗೆ ಶೇಖಡ 30ರಷ್ಟು ಮೀಸಲಾತಿ ನಿಗದಿಪಡಿಸಿ ನಿರ್ದೇಶನ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಕೋರಿದ್ದರು.

ವಿವಿಧ ಜಿಲ್ಲಾ ವಕೀಲರ ಸಂಘಗಳಿಗೆ ಚುನಾವಣೆಗಳು ಬಾಕಿ ಉಳಿದಿರುವುದನ್ನು ಗಮನಿಸಿದ ನ್ಯಾಯಾಲಯ, ಎಎಬಿಗೆ ನೀಡಿದ್ದ ಮಹಿಳಾ ಮೀಸಲಾತಿಯ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘದ ಚುನಾವಣೆಗಳಿಗೂ ಅನ್ವಯಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದ ಎಲ್ಲಾ ಜಿಲ್ಲಾ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ ಖಜಾಂಚಿ ಹುದ್ದೆ ಮತ್ತು ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿ ಹುದ್ದೆಗಳ ಶೇಖಡ 30ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ನಿರ್ದೇಶಿಸಿದೆ.

ಎಎಬಿಯಂತೆ ರಾಜ್ಯದ ಎಲ್ಲಾ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಕೂಡ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿತ್ತು.

ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ​​(ಟಿಬಿಎ) ಮಹಿಳಾ ವಕೀಲರಿಗೆ ಶೇ. 33ರಷ್ಟು ಮೀಸಲಾತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಏಪ್ರಿಲ್ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಿಳೆಯರಿಗೆ ಜಂಟಿ ಕಾರ್ಯದರ್ಶಿ ಹುದ್ದೆ ಮತ್ತು ಎರಡು ಕಾರ್ಯಕಾರಿ ಮಂಡಳಿ ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಸಂಘ ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನಂತರ ಆದೇಶ ಹೊರಡಿಸಿದೆ.

ಮುಂಬರುವ ಚುನಾವಣೆಗಳು ಪೂರ್ಣಗೊಂಡ ನಂತರ ಈ ಬದಲಾವಣೆಗಳನ್ನು ಅಳವಡಿಸಲು ಸಂಘದ ಬೈಲಾಗಳನ್ನು ಸಹ ತಿದ್ದುಪಡಿ ಮಾಡಲಾಗುವುದು ಎಂದು ಟಿಬಿಎ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ್ದಾರೆ.

ಆದೇಶ ನೀಡುವ ವೇಳೆ, ಈಗ ಮೀಸಲಾತಿ ಜಾರಿ ಮಾಡಲಿಲ್ಲ ಎಂದರೆ ಯಾವಾಗ ಮಾಡುವಿರಿ? ಎಂದು ಪ್ರಶ್ನಿಸಿದ್ದ ನ್ಯಾ. ನಾಗಪ್ರಸನ್ನ ಅವರು “ವಕೀಲರ ಸಂಘಗಳನ್ನು ಬಾಯ್ಸ್‌ ಕ್ಲಬ್‌ ಆಗಿರಲು ಬಿಡಲಾಗದು” ಎಂದಿದ್ದರು.

ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಖಜಾಂಜಿ ಹುದ್ದೆ ಮತ್ತು ಶೇಖಡ 33ರಷ್ಟು ಮೀಸಲಾತಿ ನೀಡುವಂತೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘಗಳಿಗೆ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೂಲ ಅರ್ಜಿಯಲ್ಲಿ ಕೋರಲಾಗಿತ್ತು. ಮಹಿಳಾ ವಕೀಲರಿಗೆ ಮೀಸಲಾತಿ ನೀಡುವಲ್ಲಿ ಯಾವುದೇ ಕಾನೂನು ಅಡಚಣೆ ಇಲ್ಲ ಎಂದು ಹೇಳಲಾಗತ್ತು.

ದೆಹಲಿ ಮಾರಾಟ ತೆರಿಗೆ ವಕೀಲರ ಸಂಘ ​​ಮತ್ತು ದೆಹಲಿ ತೆರಿಗೆ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿಯಲ್ಲಿ ಖಜಾಂಚಿ ಹುದ್ದೆ ಮತ್ತು ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಸ್ಥಾನಗಳನ್ನು ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶಿಸಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಕೀಲರ ಸಂಘದ ​​ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 33ರಷ್ಟು ಸ್ಥಾನಗಳನ್ನು ಮೀಸಲಿಡಬೇಕು ಎಂದು ಈ ವರ್ಷದ ಜನವರಿ 20ರಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ದೆಹಲಿ ಹೈಕೋರ್ಟ್ ವಕೀಲರ ಸಂಘದ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಮೂರು ಹುದ್ದೆಗಳನ್ನು ಕಾಯ್ದಿರಿಸುವಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಜಿಲ್ಲಾ ವಕೀಲರ ​ಸಂಘಗಳ ​ಚುನಾವಣೆಯಲ್ಲಿ, ಖಜಾಂಚಿ ಹುದ್ದೆ ಮತ್ತು ಇತರ ಕಾರ್ಯಕಾರಿ ಸಮಿತಿ ಹುದ್ದೆಗಳಲ್ಲಿ ಶೇ. 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ (ಈಗಾಗಲೇ ಮಹಿಳೆಯರಿಗೆ ಮೀಸಲಿಟ್ಟ ಹುದ್ದೆಗಳನ್ನು ಒಳಗೊಂಡಂತೆ) ಮೀಸಲಿಡಬೇಕು ಎಂದು ಹೇಳಿತ್ತು.

ಕಳೆದ ವರ್ಷ ಸೆಪ್ಟೆಂಬರ್ 26 ರಂದು, ಸುಪ್ರೀಂ ಕೋರ್ಟ್ DHCBA ಗೆ ಐದು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಮತ್ತೊಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ನಿರ್ದೇಶನ ನೀಡಿತು.

ಐವರು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಒಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ವಕೀಲರ ಸಂಘಕ್ಕೆ ನಿರ್ದೇಶನ ನೀಡಿತ್ತು.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...