Homeಮುಖಪುಟಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಮುಂದಾದ ಮಹಾರಾಷ್ಟ್ರ ಸರ್ಕಾರ

ಶಿಂಧೆ ವಿರುದ್ಧ ಹೇಳಿಕೆ | ಕುನಾಲ್ ಬ್ಯಾಂಕ್ ಖಾತೆ ಸ್ಥಗಿತಕ್ಕೆ ಮುಂದಾದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉಲ್ಲೆಖಿಸಿ “ದೇಶದ್ರೋಹಿ” ಎಂದು ಕರೆದಿರುವ ಸ್ಟ್ಯಾಂಡ್-ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಸರ್ಕಾರ ಎಚ್ಚರಿಸಿದ್ದು, ಅಧಿಕಾರಿಗಳು ಕುನಾಲ್ ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಮ್ರಾ ಅವರ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಶಿಂಧೆ ಅವರನ್ನು ಅವಮಾನಿಸಿದ್ದಕ್ಕಾಗಿ ಕುನಾಲ್ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಶಿಂಧೆ ವಿರುದ್ಧ ಹೇಳಿಕೆ

“ಕುನಾಲ್ ಕಮ್ರಾ ಸಂವಿಧಾನ ಪುಸ್ತಕವನ್ನು ತೋರಿಸಿ ತನಗೆ ಮಾತನಾಡುವ ಹಕ್ಕಿದೆ ಎಂದು ಹೇಳಿದ್ದಾರೆ. ಆದರೆ ಕುನಾಲ್ ಅವರು ಸಂವಿಧಾನವನ್ನು ಓದಬೇಕು, ಅಲ್ಲಿ ನಿಮಗೆ ವಾಕ್ ಮತ್ತು ಬರವಣಿಗೆಯ ಸ್ವಾತಂತ್ರ್ಯವಿದೆ ಎಂದು ಉಲ್ಲೇಖಿಸಲಾಗಿದೆ, ಆದರೆ ಅದು ಯಾರನ್ನೂ ಅವಮಾನಿಸುವವರೆಗೆ ವಿಸ್ತರಿಸಬಾರದು. ಅವರು ಯಾರ ಸ್ವಾತಂತ್ರ್ಯವನ್ನೂ ಅತಿಕ್ರಮಿಸಲು ಸಾಧ್ಯವಿಲ್ಲ. ಆದ್ದರಿಂದ, ನಾವು ಕುನಾಲ್ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇವೆ,” ಎಂದು ಫಡ್ನವೀಸ್ ಹೇಳಿದ್ದಾರೆ.

ಖಾರ್‌ನ ಕಾಂಟಿನೆಂಟಲ್ ಹೋಟೆಲ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ನಡೆದ ಪ್ರದರ್ಶನದಲ್ಲಿ, ಕುನಾಲ್ ಅವರು ಶಿಂಧೆ ಅವರ ಬಗ್ಗೆ ಎರಡು ನಿಮಿಷಗಳ ವಿಡಂಬನಾತ್ಮಕ ಹಾಡನ್ನು ಒಳಗೊಂಡಂತೆ ಸುಮಾರು 50 ನಿಮಿಷಗಳ ಸೆಟ್ ಅನ್ನು ಪ್ರದರ್ಶಿಸಿದ್ದರು. ಶಿಂಧೆ ವಿರುದ್ಧ ಹೇಳಿಕೆ

ಉದ್ಧವ್ ಠಾಕ್ರೆ ವಿರುದ್ಧ 2022 ರಲ್ಲಿ ದಂಗೆಯೆದ್ದ ಶಿಂಧೆ ಅವರನ್ನು ಅಣಕಿಸಲು ಅವರು ಬಾಲಿವುಡ್ ಚಲನಚಿತ್ರ ದಿಲ್ ತೋ ಪಾಗಲ್ ಹೈ ಹಾಡನ್ನು ಮಾರ್ಪಡಿಸಿದ ಆವೃತ್ತಿಯನ್ನು ಬಳಸಿದ್ದಾರೆ. ಈ ವೇಳೆ ಕುನಾಲ್ ಅವರು ವಿವಿಧ ಉದ್ಯಮಿಗಳು ಮತ್ತು ರಾಜಕಾರಣಿಗಳ ಬಗ್ಗೆಯೂ ವಿಡಂಬನಾತ್ಮಕ ಟೀಕೆಗಳನ್ನು ಮಾಡಿದ್ದಾರೆ.

ಶಿಂಧೆ ವಿರುದ್ಧದ ಹಾಸ್ಯಕ್ಕೆ ಉದ್ರಿಕ್ತರಾಗಿರುವ ಶಿವಸೇನೆ ಕಾರ್ಯಕರ್ತರು ಮತ್ತೊಬ್ಬ ಹಾಸ್ಯನಟ ರಜತ್ ಸೂದ್ ಅದೇ ಸ್ಥಳದಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಸ್ಥಳಕ್ಕೆ ನುಗ್ಗಿದ್ದಾರೆ. ಶಿಂಧೆ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ಅವರು, ಕುನಾಲ್ ಪ್ರದರ್ಶನ ನೀಡಿದ ಸ್ಟುಡಿಯೋವನ್ನು ಧ್ವಂಸ ಮಾಡಿದ್ದಾರೆ. ಇದರ ನಂತರ ಮುಂಬೈ ಪೊಲೀಸರು ರಾಹುಲ್ ಕನಾಲ್ ಸೇರಿದಂತೆ ಹನ್ನೊಂದು ಶಿವಸೇನಾ ಕಾರ್ಯಕರ್ತರನ್ನು ವಿಧ್ವಂಸಕ ಕೃತ್ಯಕ್ಕಾಗಿ ಬಂಧಿಸಿದ್ದಾರೆ. ಅವರನ್ನು ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ರಾಜ್ಯ ಗೃಹ ಸಚಿವ ಯೋಗೇಶ್ ಕದಮ್ ಅವರು ಪ್ರತಿಕ್ರಿಯಿಸಿ, ಅಧಿಕಾರಿಗಳು ಕುನಾಲ್ ಅವರ ಫೋನ್ ದಾಖಲೆಗಳನ್ನು ತನಿಖೆ ಮಾಡಿ ಅವರ ಸ್ಥಳವನ್ನು ಪತ್ತೆಹಚ್ಚುತ್ತಾರೆ ಎಂದು ಹೇಳಿದ್ದಾರೆ. “ಶಿವಸೇನೆ ಕಾರ್ಯಕರ್ತರ ಕೋಪವನ್ನು ನಾವು ಅರ್ಥಮಾಡಿಕೊಳ್ಳಬೇಕು. ನಾನು ವಿಧ್ವಂಸಕ ಕೃತ್ಯವನ್ನು ಬೆಂಬಲಿಸುವುದಿಲ್ಲ, ಆದರೆ ಡಿಸಿಎಂ ಶಿಂಧೆ ವಿರುದ್ಧ ಕುನಾಲ್ ಅವರ ಅವಹೇಳನಕಾರಿ ಹೇಳಿಕೆಗಳನ್ನು ಹಾಗೆ ಬಿಟ್ಟು ಬಿಡಲಾಗುವುದಿಲ್ಲ ಅಥವಾ ಸಹಿಸಲಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಕುನಾಲ್ ಅವರ ಪ್ರದರ್ಶನದ ನಂತರದ ಉಂಟಾದ ಗೊಂದಲದ ಬಳಿಕ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಹೋಟೆಲ್ ವಿರುದ್ಧ ತ್ವರಿತ ಕ್ರಮ ಕೈಗೊಂಡಿದೆ. ಕೆಲವೇ ತಿಂಗಳುಗಳ ಹಿಂದೆ ಕಾನೂನುಬದ್ಧಗೊಳಿಸಿದ್ದ ಕೆಲವು ಕಟ್ಟಡಗಳನ್ನು ಕೆಡವಲು ತಕ್ಷಣದ ನೋಟಿಸ್ ನೀಡಿದೆ. ಜೊತೆಗೆ ಶಿವಸೇನೆಯು ಕುನಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) 2023 ಮತ್ತು ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಬಹು ವಿಭಾಗಗಳ ಅಡಿಯಲ್ಲಿ ಪೊಲೀಸ್ ಪ್ರಕರಣ ದಾಖಲಿಸಿದೆ.

ಸಿಎಂ ಫಡ್ನವೀಸ್ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಕುನಾಲ್ ಕಮ್ರಾಗೆ ಹಾಸ್ಯ ಮಾಡಲು ಸಂಪೂರ್ಣ ಹಕ್ಕು ಮತ್ತು ಸ್ವಾತಂತ್ರ್ಯವಿದೆ. ಆದರೆ ಅವರು ಮಿತಿಗಳು ಮತ್ತು ಸಾಂವಿಧಾನಿಕ ಚೌಕಟ್ಟಿನೊಳಗೆ ಅದನ್ನು ಮಾಡಬೇಕು. ಜನರು ಅಧಿಕಾರಕ್ಕೆ ಮರಳಲು ಜನಾದೇಶವನ್ನು ನೀಡಿರುವ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅವರು ಅವಮಾನಿಸುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಉದ್ಧವ್ ಠಾಕ್ರೆ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿದ್ದು, “ಕುನಾಲ್ ಏನು ತಪ್ಪು ಮಾತನಾಡಿದ್ದಾರೆ? ಶಿಂಧೆ ನಮಗೆ ದ್ರೋಹ ಬಗೆದರು, ನನ್ನ ಸರ್ಕಾರವನ್ನು ಉರುಳಿಸಿದರು ಮತ್ತು ಬಿಜೆಪಿಯೊಂದಿಗೆ ಸೇರಿ ಸರ್ಕಾರವನ್ನು ರಚಿಸಿದರು. ಅವರನ್ನು ದೇಶದ್ರೋಹಿ ಎಂದು ಕರೆಯುವುದು ಸಮರ್ಥನೀಯ.” ಎಂದು ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಕೂಡ ಕಾಮಿಡಿ ಕ್ಲಬ್ ಮೇಲಿನ ದಾಳಿಯನ್ನು ಟೀಕಿಸಿದ್ದು,”ಅಸುರಕ್ಷಿತ ಹೇಡಿ ಮಾತ್ರ ಯಾರಾದರೊಬ್ಬರ ಹಾಡಿಗೆ ಪ್ರತಿಕ್ರಿಯಿಸುತ್ತಾನೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇದೆಯೆ?” ಎಂದು ಪ್ರಶ್ನಿಸಿದ್ದಾರೆ. ಕುನಾಲ್ ಅವರು ತಮ್ಮ ಪ್ರದರ್ಶನದಲ್ಲಿ ಶಿಂಧೆ ಅವರ ಹೆಸರನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ ಎಂದು ಅವರು ಹೇಳಿದ್ದು, “ಹಾಗಾದರೆ ಶಿಂಧೆ ಮತ್ತು ಅವರ ಜನರು ‘ದೇಶದ್ರೋಹಿ’ ಎಂಬ ಪದವು ಅವರಿಗೆ ಉದ್ದೇಶಿಸಲಾಗಿದೆ ಎಂದು ಹೇಗೆ ಖಚಿತವಾಗಿ ತಿಳಿಯುತ್ತಾರೆ? ಶಿಂಧೆ ‘ದೇಶದ್ರೋಹಿ’ ಎಂಬ ಪದಕ್ಕೆ ಹೆದರುತ್ತಾರೆ ಎಂದು ಇದು ತೋರಿಸುತ್ತದೆ” ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ.

ಈ ನಡುವೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿವಾದದಿಂದ ಅಂತರ ಕಾಪಾಡಿದ್ದು, “ಪೊಲೀಸರ ಮೇಲೆ ಒತ್ತಡ ಇರಬಾರದು” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...