Homeಅಂತರಾಷ್ಟ್ರೀಯ'ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ': ಮತ್ತೆ ಆರೋಪಿಸಿದ ಕೆನಡಾ

‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

- Advertisement -
- Advertisement -

ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಸೋಮವಾರ (ಮಾ.25) ಹೇಳಿದೆ.

ಭಾರತ ಮತ್ತು ಚೀನಾ ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಕೃತಕ ಬುದ್ಧಿಮತ್ತೆಯನ್ನು ಹೆಚ್ಚಾಗಿ ಬಳಸುತ್ತಿವೆ ಎಂದು ಚುನಾವಣೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಕೆನಡಾದ ಭದ್ರತಾ ಗುಪ್ತಚರ ಸೇವೆಯ (CSIS)ಕಾರ್ಯಾಚರಣೆಗಳ ಉಪ ನಿರ್ದೇಶಕಿ ವನೆಸ್ಸಾ ಲಾಯ್ಡ್ ಆರೋಪಿಸಿದ್ದಾರೆ.

ಭಾನುವಾರ (ಮಾ.23) ಪ್ರಧಾನಿ ಮಾರ್ಕ್ ಕಾರ್ನಿ ಅವರು ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಗಂಭೀರ ಆರೋಪ ಕೇಳಿ ಬಂದಿದೆ.

ಭಾರತ ಸರ್ಕಾರವು ತನ್ನ ಭೌಗೋಳಿಕ ರಾಜಕೀಯ ಪ್ರಭಾವವನ್ನು ಹೆಚ್ಚಿಸಲು ಕೆನಡಾದ ಸಮುದಾಯಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಮತ್ತು ಸಾಮರ್ಥ್ಯವನ್ನು ಹೊಂದಿದೆ ಎಂದು ಲಾಯ್ಡ್ ಹೇಳಿದ್ದಾರೆ.

ಈ ಚುನಾವಣೆಯ ಸಮಯದಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಚೀನಾ, ವಿಶೇಷವಾಗಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ (PRC)ಎಐ-ಚಾಲಿತ ಸಾಧನಗಳನ್ನು ಬಳಸುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಲಾಯ್ಡ್ ಪ್ರಕಾರ, ಚೀನಾ ತನ್ನ ಹಿತಾಸಕ್ತಿಗಳಿಗೆ ಹೊಂದಿಕೆಯಾಗುವ ನರೇಟಿವ್‌ಗಳನ್ನು ಉತ್ತೇಜಿಸಲು ಸಾಮಾಜಿಕ ಮಾಧ್ಯಮವನ್ನು ಬಳಸುವ ಸಾಧ್ಯತೆಯಿದೆ. ಕೆನಡಾದಲ್ಲಿರುವ ಚೀನೀ ಜನಾಂಗೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಮುದಾಯಗಳನ್ನು ‘ರಹಸ್ಯ ಮತ್ತು ವಂಚನೆಯ ತಂತ್ರಗಳೊಂದಿಗೆ ಚೀನಾ ಗುರಿಯಾಗಿಸಬಹುದು.

ಭಾರತ ಮತ್ತು ಚೀನಾ ಎರಡೂ ಕೆನಡಾ ಈ ಹಿಂದೆ ಮಾಡಿದ್ದ ಇದೇ ರೀತಿಯ ಆರೋಪವನ್ನು ನಿರಾಕರಿಸಿತ್ತು. ಆದರೆ, ಇತ್ತೀಚಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ.

ವಿದೇಶಿ ಸರ್ಕಾರಗಳು ನಮ್ಮ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಆರೋಪಿಸಿ ಕೆನಡಾ ಆಯೋಗ ನೀಡಿದ್ದ ವರದಿಯ ಆರೋಪಗಳನ್ನು ಭಾರತ ಈ ವರ್ಷದ ಜನವರಿಯಲ್ಲಿ ತಿರಸ್ಕರಿಸಿತ್ತು.

ವಿದೇಶಾಂಗ ಸಚಿವಾಲಯ (MEA)ಹೇಳಿಕೆ ನೀಡಿ, ಕೆನಡಾದ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾ ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿತ್ತು.

ಕೆನಡಾದ ಪತ್ರಿಕೆಯಾದ ಗ್ಲೋಬ್ ಅಂಡ್ ಮೇಲ್, ಫೆಡರಲ್ ಚುನಾವಣೆಯ ಸಮಯದಲ್ಲಿ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ರಹಸ್ಯ ಹಣಕಾಸು ಬೆಂಬಲ ಒದಗಿಸಲು ಭಾರತವು ಪ್ರಾಕ್ಸಿ ಏಜೆಂಟ್‌ಗಳನ್ನು ಬಳಸಿಕೊಂಡಿರಬಹುದು ಎಂದು ವರದಿ ಮಾಡಿತ್ತು.

ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ರಷ್ಯಾ ಮತ್ತು ಪಾಕಿಸ್ತಾನ ಕೂಡ ಹಸ್ತಕ್ಷೇಪ ಮಾಡಲು ಪ್ರಯತ್ನಿಸಬಹುದು ಎಂದು ಲಾಯ್ಡ್ ಎಚ್ಚರಿಸಿದ್ದಾರೆ.

ಕ್ರೆಮ್ಲಿನ್ (ರಷ್ಯಾ) ಚರ್ಚಾ ಅಂಶಗಳನ್ನು ಉತ್ತೇಜಿಸುವ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ವೆಬ್‌ಸೈಟ್‌ಗಳಲ್ಲಿ ‘ಪ್ರಸರಣ ಜಾಲಗಳನ್ನು’ ರಚಿಸಲು ರಷ್ಯಾ ಕೆಲಸ ಮಾಡಿದೆ ಎಂದು ಲಾಯ್ಡ್ ಆರೋಪಿಸಿದ್ದು, ಕೆನಡಿಯನ್ನರನ್ನು ಗುರಿಯಾಗಿಸಿಕೊಂಡು ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ರಷ್ಯಾ ಈ ಆನ್‌ಲೈನ್ ನೆಟ್‌ವರ್ಕ್‌ಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಭಾರತದ ಜಾಗತಿಕ ಶಕ್ತಿಯಾಗಿ ಬೆಳೆಯುವಾಗ, ಅದನ್ನು ಎದುರಿಸಿ ರಾಜಕೀಯ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುವ ತನ್ನ ಕಾರ್ಯತಂತ್ರವನ್ನು ಸಾಧಿಸಲು ಪಾಕಿಸ್ತಾನ ವಿದೇಶಿ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಕಾರ್ಯ ಮಾಡಬಹುದು ಎಂದು ಲಾಯ್ಡ್ ಹೇಳಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 2023ರಲ್ಲಿ ಆರೋಪಿಸಿದ್ದರು. ನಂತರ ಭಾರತ ಮತ್ತು ಕೆನಡಾ ನಡುವೆ ಈ ವಿಚಾರವಾಗಿ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಭಾರತ ತನ್ನ ಮೇಲಿನ ಆರೋಪವನ್ನು ಬಲವಾಗಿ ನಿರಾಕರಿಸಿತ್ತು.

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....