Homeಮುಖಪುಟಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

- Advertisement -
- Advertisement -

ಕೇಂದ್ರ ತನಿಖಾ ದಳ (ಸಿಬಿಐ) ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ, ವಲಯಾರ್‌ನಲ್ಲಿ ಮೃತಪಟ್ಟ ಬಾಲಕಿಯರ ಪೋಷಕರು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಬಾಲಕಿಯರ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಸಿಬಿಐಗೆ ನೋಟಿಸ್ ನೀಡಿದೆ.

ಸಿಬಿಐ ನಡೆಸಿದ ಹೆಚ್ಚಿನ ತನಿಖೆಯಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಪಕ್ಷಪಾತದ ಮತ್ತು ಕೇವಲ ಬಾಹ್ಯ ಪರಿಗಣನೆಯ ತನಿಖೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಸಿಬಿಐಗೆ ಸ್ಪಷ್ಟತೆಯಿಲ್ಲ ಎಂದು ಹೇಳಿದ್ದಾರೆ.

ಆರೋಪಿಗಳಾದ ಪ್ರದೀಪ್, ಮಧು ಅಲಿಯಾಸ್ ಕುಟ್ಟಿ ಮಧು ಮತ್ತು ಶಂಕಿತ ಜಾನ್ ಪ್ರವೀಣ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆಯೂ ಯಾವುದೇ ತನಿಖೆ ನಡೆದಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಜಾನ್ ಪ್ರವೀಣ್ ಅವರ ಮರಣೋತ್ತರ ಪರೀಕ್ಷೆಯಲ್ಲಿ ದೇಹದ ಪ್ರಮುಖ ಭಾಗಗಳಲ್ಲಿ ಗಂಭೀರವಾದ ಗಾಯಗಳು ಕಂಡುಬಂದಿವೆ, ಅದರಲ್ಲಿ ಛೇದಿತ ಗಾಯಗಳೂ ಸೇರಿವೆ ಎಂದಿದ್ದಾರೆ.

ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ, ತಾರ್ಕಿಕ ಆಧಾರದ ಮೇಲೆ ಅಲ್ಲ. ಕೆಲವು ಸಾಕ್ಷಿಗಳ ಹೇಳಿಕೆಗಳು ವಿಶ್ವಾಸಾರ್ಹತೆ ಇಲ್ಲದ ಕಾರಣ, ತನಿಖಾಧಿಕಾರಿಯು ಅರ್ಜಿದಾರೇ ಅಪರಾಧಗಳು ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಅರ್ಜಿದಾರರು ಮತ್ತು ಆರೋಪಿಗಳ ನಡುವೆ ಸಂಬಂಧ ಕಲ್ಪಿಸಲಾಗಿದೆ. ಸಿಬಿಐ ಈ ಘೋರ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಿ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ತನಿಖೆ ವೇಳೆ ಕೆಲವೊಂದು ಅಂಶಗಳನ್ನು ಉಲ್ಲೇಖಿಸಿದೆ ಎಂದು ಹೇಳಿದ್ದಾರೆ.

ಏನಿದು ವಲಯಾರ್ ಸಹೋದರಿಯರ ಸಾವು?

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್ ಪ್ರದೇಶದ 13 ಮತ್ತು 9 ವರ್ಷದ ಇಬ್ಬರು ಆದಿವಾಸಿ ಸಹೋದರಿಯರ ಅನುಮಾನಾಸ್ಪದ ಸಾವು ಪ್ರಕರಣವನ್ನು ‘ವಲಯಾರ್ ಸಹೋದರಿಯರ ಸಾವು’ ಎಂದು ಹೇಳಲಾಗುತ್ತದೆ.

ಈ ಪ್ರಕರಣದಲ್ಲಿ 13 ವರ್ಷದ ಬಾಲಕಿ ಜನವರಿ 13, 2017 ರಂದು ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದಾಗಿ ಎರಡು ತಿಂಗಳ ಬಳಿಕ, ಅಂದರೆ ಮಾರ್ಚ್ 14ರಂದು 9 ವರ್ಷದ ಆಕೆಯ ತಂಗಿ ಕೂಡ ಅದೇ ಜಾಗದಲ್ಲಿ, ಅದೇ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಶವಪರೀಕ್ಷೆಯ ವರದಿಗಳು ಇಬ್ಬರೂ ಹುಡುಗಿಯರು ಸಾಯುವ ಮುನ್ನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ದೃಢಪಡಿಸಿತ್ತು. ಈ ವಿಷಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ಬಾಲಕಿಯರಿಗೆ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆಗಳು ನಡೆದಿತ್ತು.

ಆರಂಭದಲ್ಲಿ, ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿ, ದೀರ್ಘಕಾಲದ ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಂಡ ನಂತರ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು.

ಒಬ್ಬ ಬಾಲಾಪರಾಧಿ ಸೇರಿದಂತೆ ಐವರ ಮೇಲೆ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಿದ್ದರು.

ಆದಾಗ್ಯೂ, 2019 ರಲ್ಲಿ, ಪಾಲಕ್ಕಾಡ್‌ನ ವಿಶೇಷ ಪೋಕ್ಸೊ ನ್ಯಾಯಾಲಯವು ಸಾಕಷ್ಟು ಸಾಕ್ಷ್ಯಗಳು ಇಲ್ಲ ಎಂದು ಉಲ್ಲೇಖಿಸಿ, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದು ಸಾರ್ವಜನಿಕರಲ್ಲಿ ಮತ್ತೆ ಆಕ್ರೋಶ ಭುಗಿಲೇಳುವಂತೆ ಮಾಡಿತ್ತು.

ಸಾರ್ವಜನಿಕರ ಆಕ್ರೋಶ, ಸಂತ್ರಸ್ತ ಬಾಲಕಿಯರ ತಾಯಿ ಮತ್ತು ಕೇರಳ ಸರ್ಕಾರದ ಮೇಲ್ಮನವಿಗಳ ಕಾರಣ, ಕೇರಳ ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಿತ್ತು. ಜನವರಿ 2021ರಲ್ಲಿ, ಪ್ರಕರಣದ ಮರುವಿಚಾರಣೆಗೆ ಆದೇಶಿಸಿತ್ತು. ನಂತರ ಮಾರ್ಚ್ 2021ರಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಳ್ಳುವಂತೆ ನಿರ್ದೇಶಿಸಿತ್ತು.

ಸಿಬಿಐನ ಆರಂಭಿಕ ತನಿಖೆಯು ಪೊಲೀಸರು ಹೇಳಿದ್ದನ್ನೇ ಹೇಳಿತ್ತು. ಡಿಸೆಂಬರ್ 2021ರಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಹುಡುಗಿಯರು ದೀರ್ಘಕಾಲದ ಲೈಂಗಿಕ ದೌರ್ಜನ್ಯ ಎದುರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿತ್ತು. ಆದಾಗ್ಯೂ, ಸಂತ್ರಸ್ತರ ತಾಯಿ ಇದನ್ನು ಪ್ರಶ್ನಿಸಿದ್ದರು. ಕೊಲೆ ಆರೋಪ ಮಾಡಿದ್ದರು. ಆಗಸ್ಟ್ 2022ರಲ್ಲಿ, ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯ ಸಿಬಿಐನ ಆರೋಪಪಟ್ಟಿಯನ್ನು ತಿರಸ್ಕರಿಸಿ, ಮರುತನಿಖೆಗೆ ಆದೇಶಿಸಿತ್ತು.

ಪ್ರಕರಣದ ಪ್ರಸ್ತುತ ಸ್ಥಿತಿ (ಮಾರ್ಚ್ 25, 2025 ರಂತೆ) 

ಜನವರಿ 2025 : ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು. ಗಮನಾರ್ಹವಾಗಿ ಬಾಲಕಿಯರ ಪೋಷಕರನ್ನೇ ಆರೋಪಿಗಳೆಂದು ಹೆಸರಿಸಿತ್ತು. ಅವರ ಮೇಲೆ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಲೈಂಗಿಕ ದೌರ್ಜನ್ಯಗಳನ್ನು ಮರೆಮಾಚಿದ ಆರೋಪ ಹೊರಿಸಿ ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ನಂತರ ಸಿಬಿಐ ಕೋರಿಕೆಯ ಮೇರೆಗೆ ಪ್ರಕರಣವನ್ನು 2024ರಲ್ಲಿ ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯದಿಂದ ವರ್ಗಾಯಿಸಲಾಯಿತು.

ಫೆಬ್ರವರಿ 2025 : ಸಿಬಿಐನ ಹಿಂದಿನ ತನಿಖಾ ವರದಿಯು ಬಾಲಕಿಯರ ಸಾವು ಆತ್ಮಹತ್ಯೆ ಎಂಬುವುದನ್ನು ಸಮರ್ಥಿಸಿಕೊಂಡಿತ್ತು. ಬಾಲಕಿಯರ ಶವ ದೊರೆತ ಸ್ಥಳದ ಪರಿಶೀಲನೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಕೊಲೆ ಆರೋಪ ತಳ್ಳಿಹಾಕಿತ್ತು. ವೈದ್ಯಕೀಯ ಮಂಡಳಿ ಮತ್ತು ವಿಧಿವಿಜ್ಞಾನ ತಜ್ಞರು ಇದನ್ನು ಬೆಂಬಲಿಸಿದ್ದರು. ಆದಾಗ್ಯೂ, ಈ ವರದಿಯನ್ನು ಬಾಲಕಿಯ ಪೋಷಕರು ಮತ್ತು ಹೋರಾಟಗಾರರು ವಿರೋಧಿಸಿದ್ದಾರೆ.

ಪ್ರಸ್ತುತ ಪ್ರಕರಣವು ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಪೋಷಕರನ್ನು ಆರೋಪಿಗಳಾಗಿ ಹೆಸರಿಸಿರುವುದು ಪ್ರಕರಣದ ಸಂಕೀರ್ಣತೆಯನ್ನು ಹೆಚ್ಚಿಸಿದೆ ಮತ್ತು 2022ರಲ್ಲಿ ಆದೇಶಿಸಲಾದ ಮರುತನಿಖೆ ಇನ್ನೂ ಪ್ರಗತಿಯಲ್ಲಿದೆ.

ಸಂತ್ರಸ್ತರ ತಾಯಿ ಸೇರಿದಂತೆ ನ್ಯಾಯಕ್ಕಾಗಿ ಹೋರಾಡುತ್ತಿರುವ ‘ವಲಯಾರ್ ನೀದಿ ಸಮರ ಸಮಿದಿ’ 2019 ಮತ್ತು 2023 ರ ನಡುವೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವ್ಯಕ್ತಿಗಳ (ಇಬ್ಬರು ಆರೋಪಿಗಳು ಮತ್ತು ಒಬ್ಬ ಶಂಕಿತ) ಅನುಮಾನಾಸ್ಪದ ಸಾವುಗಳನ್ನು ಗಮನದಲ್ಲಿಟ್ಟುಕೊಂಡು, ಸಮಗ್ರ ತನಿಖೆಗೆ ಒತ್ತಾಯಿಸುತ್ತಲೇ ಇದೆ. ಇವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಇಂದಿನವರೆಗೆ, ಅಂದರೆ ಮಾರ್ಚ್ 25, 2025ರವರೆಗೂ ಈ ಪ್ರಕರಣ ಇತ್ಯರ್ಥವಾಗದೆ ಉಳಿದಿದೆ. ಸಿಬಿಐನ ಮರುತನಿಖೆ ಮುಂದುವರೆದಿದ್ದು, ನ್ಯಾಯಾಲಯ ಇನ್ನೂ ಅಂತಿಮ ತೀರ್ಪು ನೀಡಿಲ್ಲ. ವ್ಯವಸ್ಥಿತ ವೈಫಲ್ಯಗಳು ಮತ್ತು ಮುಚ್ಚಿಹಾಕುವಿಕೆಯ ಆರೋಪಗಳ ನಡುವೆಯೂ, ಪ್ರಕರಣದ ಸತ್ಯ ಬಹಿರಂಗವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಜನರು ಆಗ್ರಹಿಸುತ್ತಲೇ ಇದ್ದಾರೆ.

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...