Homeಮುಖಪುಟಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

ಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಗಳವಾರ ನಗರದ ಜವಾಹರ್ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ 17 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಜನವರಿ 2025 ರಿಂದ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ಒಂಬತ್ತನೇ ಪ್ರಕರಣ ಇದಾಗಿದೆ. ಮೃತನನ್ನು ಹರ್ಷರಾಜ್ ಶಂಕರ್ ಎಂದು ಗುರುತಿಸಲಾಗಿದೆ. ಇವರು ಬಿಹಾರದ ನಳಂದ ಜಿಲ್ಲೆಯವರು. ಕಳೆದ ವರ್ಷ ಏಪ್ರಿಲ್‌ನಿಂದ ಇಲ್ಲಿನ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಅವರು ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಬಾಲಕ ಒಳಗಿನಿಂದ ಬಾಗಿಲು ಹಾಕಿದ್ದಾನೆ; ಪ್ರತಿಕ್ರಿಯಿಸುತ್ತಿಲ್ಲ ಎಂದು ಹಾಸ್ಟೆಲ್ ಕೇರ್‌ಟೇಕರ್‌ಗೆ ಸಹಪಾಠಿಗಳು ತಿಳಿಸಿದ್ದರು. ನಂತರ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿತು. ಜವಾಹರ್ ನಗರ ಎಸ್‌ಎಚ್‌ಒ ರಾಮ್ಲಕ್ಷ್ಮಣ್ ತಂಡವು ಕೋಣೆಯ ಬಾಗಿಲು ಒಡೆದಾಗ ಬಾಲಕ ಕಬ್ಬಿಣದ ರಾಡ್‌ಗೆ ನೇತಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಹಾಸ್ಟೆಲ್ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ನಲ್ಲಿ ‘ಆತ್ಮಹತ್ಯೆ ವಿರೋಧಿ ಸಾಧನ’ ಅಳವಡಿಸಲಾಗಿತ್ತು. ಆದ್ದರಿಂದ, ನೀಟ್ ಆಕಾಂಕ್ಷಿ ನೇಣು ಬಿಗಿದುಕೊಳ್ಳಲು ಕಬ್ಬಿಣದ ರಾಡ್ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ಯಾವುದೇ ಆತ್ಮಹತ್ಯಾ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಅವರ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

ವರ್ಷದಲ್ಲಿ 9ನೇ ಆತ್ಮಹತ್ಯೆ ಪ್ರಕರಣ

ಕೋಚಿಂಗ್ ಹಬ್ ಎಂದು ಪ್ರಸಿದ್ಧವಾಗಿರುವ ನಗರದಲ್ಲಿ ಈ ವರ್ಷ ನಡೆದ ಒಂಬತ್ತನೇ ವಿದ್ಯಾರ್ಥಿ ಆತ್ಮಹತ್ಯೆ ಇದಾಗಿದೆ ಎಂಬುದನ್ನು ಇಲ್ಲಿ ಗಮನಿಸಬೇಕು. ಆರು ಜನ ಕೋಚಿಂಗ್ ವಿದ್ಯಾರ್ಥಿಗಳು, ಐದು ಜನ ಜೆಇಇ, ಒಬ್ಬ ನೀಟ್ ವಿದ್ಯಾರ್ಥಿ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. 2024 ರಲ್ಲಿ ಕೋಟಾದ ತರಬೇತಿ ಪಡೆಯುತ್ತಿದ್ದ  17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು.

ವೈದ್ಯಕೀಯ, ಎಂಜಿನಿಯರಿಂಗ್ ಆಕಾಂಕ್ಷಿಗಳ ಕೇಂದ್ರ

ಜಿಲ್ಲಾಡಳಿತ ಅಧಿಕಾರಿಗಳ ಪ್ರಕಾರ, ವಾರ್ಷಿಕವಾಗಿ ಅಂದಾಜು 10,000 ಕೋಟಿ ರೂ. ಮೌಲ್ಯದ ಪರೀಕ್ಷಾ-ಪೂರ್ವಸಿದ್ಧತಾ ಉದ್ಯಮದ ಕೇಂದ್ರಬಿಂದುವಾಗಿ ಕೋಟಾ ತನ್ನನ್ನು ತಾನು ದೃಢವಾಗಿ ಸ್ಥಾಪಿಸಿಕೊಂಡಿದೆ. ಪ್ರತಿ ವರ್ಷ, ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಹತ್ತನೇ ತರಗತಿ ಮುಗಿಸಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಈ ಕೋಚಿಂಗ್ ಹಬ್‌ಗೆ ಸೇರುತ್ತಾರೆ. ಅವರು ನಗರದ ಪ್ರಾಬಲ್ಯ ಹೊಂದಿರುವ ವಸತಿ ತರಬೇತಿ ಸಂಸ್ಥೆಗಳಲ್ಲಿ ದಾಖಲಾಗುತ್ತಾರೆ. ಕಠಿಣ ತಯಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...