Homeಮುಖಪುಟ'ಅವರು ಓಡಿ ಹೋದರು' | ಲೋಕಸಭಾ ಸ್ಪೀಕರ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

‘ಅವರು ಓಡಿ ಹೋದರು’ | ಲೋಕಸಭಾ ಸ್ಪೀಕರ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದ್ದು, ಕಳೆದ ಹಲವು ದಿನಗಳಿಂದ ಸದನದಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ನಡೆಯುತ್ತಿರುವ ಗೊಂದಲಗಳು ಮತ್ತು ಬಿಸಿ ವಾಗ್ವಾದಗಳ ಮಧ್ಯೆ ಅವರು ಈ ಹೇಳಿಕೆ ನೀಡಿದ್ದಾರೆ. ಅವರು ಓಡಿ ಹೋದರು

“ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ… ನನಗೆ ಮಾತನಾಡಲು ಅವಕಾಶ ನೀಡುವಂತೆ ನಾನು ಅವರನ್ನು ವಿನಂತಿಸಿದೆ. ಆದರೆ ಅವರು (ಸ್ಪೀಕರ್) ಓಡಿಹೋದರು. ಸದನವನ್ನು ನಡೆಸುವ ಸರಿಯಾದ ಮಾರ್ಗ ಇದಲ್ಲ. ಸ್ಪೀಕರ್ ಅಲ್ಲಿಂದ ಹೊರಟುಹೋಗಿದ್ದು, ಅವರು ನನಗೆ ಮಾತನಾಡಲು ಬಿಡಲಿಲ್ಲ… ಅವರು ನನ್ನ ಬಗ್ಗೆ ಆಧಾರರಹಿತ ವಾದ ಮಾಡುತ್ತಿದ್ದಾರೆ… ಅವರು ಸದನವನ್ನು ಮುಂದೂಡಿದ್ದು, ಆದರೆ ಅದರ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಅವರು ಓಡಿ ಹೋದರು

“ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡುವ ನಿಯಮವಿದೆ. ಆದಾಗ್ಯೂ, ನಾನು ಮಾತನಾಡಲು ನಿಂತಾಗಲೆಲ್ಲಾ ನನಗೆ ಅವಕಾಶ ನೀಡಲಾಗುತ್ತಿಲ್ಲ. ಸದನ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂದು ನನಗೆ ತಿಳಿದಿಲ್ಲ. ನಮಗೆ ಬೇಕಾದುದನ್ನು ಹೇಳಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಪ್ರಜಾಪ್ರಭುತ್ವದ ಮನೋಭಾವದ ಜೊತೆಗೆ ಸಂಪೂರ್ಣ ರಾಜಿ ಮಾಡಿಕೊಳ್ಳಲಾಗುತ್ತಿದೆ. ನಾನು ಮೌನವಾಗಿ ಕುಳಿತಿದ್ದೇನೆ, ಆದರೆ ನನಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ. ಸದನದಲ್ಲಿ ವಿರೋಧ ಪಕ್ಷಗಳಿಗೆ ಸ್ಥಳವಿಲ್ಲ… ಸರ್ಕಾರಕ್ಕೆ ಮಾತ್ರ ಅವಕಾಶ ಸಿಗುತ್ತಿದೆ. ಪ್ರಧಾನಿ ಕುಂಭಮೇಳದ ಬಗ್ಗೆ ಮಾತನಾಡಿದರು, ನನಗೂ ಮಾತನಾಡಲು ಇಷ್ಟವಿತ್ತು ಆದರೆ ಅವಕಾಶ ನಿರಾಕರಿಸಲಾಯಿತು.” ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ ಸಭ್ಯತೆಯನ್ನು ಕಾಪಾಡಿಕೊಳ್ಳುವ ಮತ್ತು ಕಾರ್ಯವಿಧಾನದ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆ ಹೇಳಿದ್ದಾರೆ. ಅದಾಗ್ಯೂ, ಸ್ಪೀಕರ್ ಈ ಅಭಿಪ್ರಾಯವನ್ನು ನೀಡಲು ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ಪಿಟಿಐ ವರದಿ ಮಾಡಿದೆ.

“ಸದಸ್ಯರ ನಡವಳಿಕೆಯು ಸದನದಲ್ಲಿ ನಿರೀಕ್ಷಿಸಲಾದ ಉನ್ನತ ಗುಣಮಟ್ಟಕ್ಕೆ ಅನುಗುಣವಾಗಿಲ್ಲದ ಹಲವಾರು ನಿದರ್ಶನಗಳು ನನ್ನ ಗಮನಕ್ಕೆ ಬಂದಿವೆ” ಎಂದು ಸ್ಪೀಕರ್ ಹೇಳಿದ್ದಾರೆ.

ಸದಸ್ಯರು ಪಾಲಿಸಬೇಕಾದ ನಿಯಮಗಳನ್ನು ವಿವರಿಸುವ ನಿಯಮ 349 ಅನ್ನು ಅವರು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದು, “ಈ ಸದನದಲ್ಲಿ, ತಂದೆ ಮತ್ತು ಮಗಳು, ತಾಯಿ ಮತ್ತು ಮಗಳು, ಗಂಡ ಮತ್ತು ಹೆಂಡತಿ ಸದಸ್ಯರಾಗಿದ್ದಾರೆ. ಈ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮಗಳಿಗೆ ಅನುಸಾರವಾಗಿ ವರ್ತಿಸುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...