Homeಮುಖಪುಟಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

- Advertisement -
- Advertisement -

ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಸಹ ಸುರಕ್ಷಿತವಾಗಿರಲಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ ಅವರು, ತಾನೊಬ್ಬ ಯೋಗಿಯಾಗಿ ನಾನು ಎಲ್ಲರ ಸಂತೋಷವನ್ನು ಬಯಸುತ್ತೇನೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐಯ ಪಾಡ್‌ಕಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರು ಹಿಂದೂ ಕುಟುಂಬಗಳು ಇರುವ ಜಾಗದಲ್ಲಿ ಒಂದು ಮುಸ್ಲಿಂ ಕುಟುಂಬವು ಸುರಕ್ಷಿತವಾಗಿರುತ್ತದೆ. ಆದಾಗ್ಯೂ, ನೂರು ಮುಸ್ಲಿಂ ಕುಟುಂಬಗಳು ಇರುವಲ್ಲಿ 50 ಹಿಂದೂ ಕುಟುಂಬಗಳು ಸುರಕ್ಷಿತವಾಗಿರುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಹಿಂದೂಗಳು ಸುರಕ್ಷಿತರಾಗಿದ್ದರೆ

ಅದಾಗ್ಯೂ, ಮುಖ್ಯಮಂತ್ರಿಯ ಈ ಹೇಳಿಕೆಗೆ ಯಾವುದೆ ಆಧಾರವಿಲ್ಲ. ಹಿಂದೂ ಬಾಹುಳ್ಯವಿರುವ ದೇಶದ ಹಲವಾರು ಭಾಗಗಳಲ್ಲಿ ಸಾವಿರಾರು ಮುಸ್ಲಿಮರ ಹತ್ಯೆಯಾಗಿರುವ ಹಲವಾರು ಉದಾಹರಣೆಗಳು ಇವೆ.

“ನೂರು ಹಿಂದೂ ಕುಟುಂಬಗಳಲ್ಲಿ ಒಂದು ಮುಸ್ಲಿಂ ಕುಟುಂಬವು ಅತ್ಯಂತ ಸುರಕ್ಷಿತವಾಗಿರುತ್ತದೆ. ಅವರು ತಮ್ಮ ಎಲ್ಲಾ ಧಾರ್ಮಿಕ ಕಾರ್ಯಗಳನ್ನು ಆಚರಿಸಲು ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಆದರೆ 100 ಮುಸ್ಲಿಂ ಕುಟುಂಬಗಳು ಇದ್ದಲ್ಲಿ 50 ಹಿಂದೂಗಳು ಸುರಕ್ಷಿತವಾಗಿರಬಹುದೇ? ಇಲ್ಲ. ಇದಕ್ಕೆ ಬಾಂಗ್ಲಾದೇಶವು ಒಂದು ಉದಾಹರಣೆಯಾಗಿದೆ.” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತರು ಎಂದು ಸಿಎಂ ಆದಿತ್ಯನಾಥ್ ಪುನರುಚ್ಚರಿಸಿದ್ದು, 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೋಮು ಗಲಭೆಗಳು ನಿಂತಿವೆ ಎಂದು ಒತ್ತಿ ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲಿ, ಮುಸ್ಲಿಮರು ಅತ್ಯಂತ ಸುರಕ್ಷಿತರು. ಹಿಂದೂಗಳು ಸುರಕ್ಷಿತರಾಗಿದ್ದರೆ, ಅವರು ಸಹ ಸುರಕ್ಷಿತರು. 2017 ಕ್ಕಿಂತ ಮೊದಲು ಯುಪಿಯಲ್ಲಿ ಗಲಭೆಗಳಾಗಿದ್ದರೆ, ಹಿಂದೂ ಅಂಗಡಿಗಳು ಉರಿಯುತ್ತಿದ್ದರೆ, ಮುಸ್ಲಿಂ ಅಂಗಡಿಗಳು ಸಹ ಉರಿಯುತ್ತಿದ್ದವು. ಹಿಂದೂ ಮನೆಗಳು ಉರಿಯುತ್ತಿದ್ದರೆ, ಮುಸ್ಲಿಂ ಮನೆಗಳು ಸಹ ಉರಿಯುತ್ತಿದ್ದವು. ಮತ್ತು 2017 ರ ನಂತರ, ಗಲಭೆಗಳು ನಿಂತುಹೋದವು” ಎಂದು ಅವರು ಹೇಳಿದ್ದಾರೆ.

“ನಾನು ಒಬ್ಬ ಸಾಮಾನ್ಯ ನಾಗರಿಕ, ಉತ್ತರ ಪ್ರದೇಶದ ನಾಗರಿಕ. ಮತ್ತು ನಾನು ಎಲ್ಲರ ಸಂತೋಷವನ್ನು ಬಯಸುವ ಯೋಗಿ. ಎಲ್ಲರ ಬೆಂಬಲ ಮತ್ತು ಅಭಿವೃದ್ಧಿಯಲ್ಲಿ ನಾನು ನಂಬಿಕೆ ಇಡುತ್ತೇನೆ” ಎಂದು ಯುಪಿ ಸಿಎಂ ಹೇಳಿದ್ದಾರೆ. ಸನಾತನ ಧರ್ಮವನ್ನು ವಿಶ್ವದ ಅತ್ಯಂತ ಪ್ರಾಚೀನ ಧರ್ಮ ಎಂದು ಅವರು ಹೇಳಿದ ಅವರು, ಹಿಂದೂ ಆಡಳಿತಗಾರರು ತಮ್ಮ ಸ್ವಂತ ಶಕ್ತಿಯನ್ನು ಬಳಸಿಕೊಂಡು ಇತರರ ಮೇಲೆ ಪ್ರಾಬಲ್ಯ ಸಾಧಿಸಿದ ಉದಾಹರಣೆಗಳಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...