Homeಮುಖಪುಟಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

- Advertisement -
- Advertisement -

ಇತ್ತೀಚೆಗೆ ವಿವಾದಕ್ಕೆ ಸಿಲುಕಿರುವ ಸ್ಟಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಅಧಿಕಾರಿಗಳ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ, ಅವರ ಮನವಿಯನ್ನು ಮುಂಬೈ ಪೊಲೀಸರು ತಿರಸ್ಕರಿಸಿದ್ದಾರೆ.

ಕಮ್ರಾ ಅವರ ವಕೀಲರು ಮುಂಬೈನ ಖಾರ್ ಪೊಲೀಸ್ ಠಾಣೆಗೆ ವೈಯಕ್ತಿಕವಾಗಿ ಮೇಲ್ಮನವಿ ಹಾಗೂ ಉತ್ತರ ಸಲ್ಲಿಸಿದರು. ಆದರೂ, ಪೊಲೀಸರು ಅವರ ವಿನಂತಿಯನ್ನು ತಿರಸ್ಕರಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 35 ರ ಅಡಿಯಲ್ಲಿ ಖಾರ್ ಪೊಲೀಸರು ಇಂದು ಕುನಾಲ್ ಕಮ್ರಾ ಅವರಿಗೆ ಎರಡನೇ ಸಮನ್ಸ್ ಜಾರಿ ಮಾಡಲಿದ್ದಾರೆ.

ಇದಕ್ಕೂ ಮೊದಲು, ಮುಂಬೈ ಪೊಲೀಸರು ಮಂಗಳವಾರ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸ್ಟ್ಯಾಂಡ್-ಅಪ್ ಕಲಾವಿದರಿಗೆ ಸಮನ್ಸ್ ಕಳುಹಿಸಿದ್ದರು.

ಸ್ಟ್ಯಾಂಡ್-ಅಪ್ ಹಾಸ್ಯ ಕಾರ್ಯಕ್ರಮದ ಸಂದರ್ಭದಲ್ಲಿ ಕಮ್ರಾ ಅವರ ಹೇಳಿಕೆಗಳಿಗಾಗಿ ಎಂಐಡಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದರು. ನಂತರ. ಅದನ್ನು ಹೆಚ್ಚಿನ ತನಿಖೆಗಾಗಿ ಖಾರ್ ಪೊಲೀಸರಿಗೆ ವರ್ಗಾಯಿಸಲಾಯಿತು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿರಿಸಿಕೊಂಡು ಕಮ್ರಾ ತಮ್ಮ ವಿವಾದಾತ್ಮಕ ‘ಗದ್ದರ್’ (ದೇಶದ್ರೋಹಿ) ಜೋಕ್‌ನೊಂದಿಗೆ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದರು.

ಸ್ಟ್ಯಾಂಡ್-ಅಪ್ ಪ್ರದರ್ಶನದಲ್ಲಿ ಕಮ್ರಾ ಅವರ ಹೇಳಿಕೆಯನ್ನು ಹಲವಾರು ರಾಜಕೀಯ ನಾಯಕರು ಖಂಡಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆದರೂ, ಮಂಗಳವಾರ ಕಮ್ರಾ ಅವರು ಮುಂಬೈನ ದಿ ಹ್ಯಾಬಿಟ್ಯಾಟ್ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡರು, ಅಲ್ಲಿ ಅವರು ಈ ಹಿಂದೆ ಪ್ರದರ್ಶನ ನೀಡಿದ್ದರು.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, “ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರ್ಕಾರದ ಪರವಾಗಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಮ್ಮ ಮುಖ್ಯಮಂತ್ರಿ ಹೇಳಿದ್ದಾರೆ” ಎಂದರು.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಏಕನಾಥ್ ಶಿಂಧೆ ವಿರುದ್ಧ ಮಾಡಿದ ಆಪಾದಿತ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, “ನಾವು ಹಾಸ್ಯ ಮತ್ತು ವಿಡಂಬನೆಯನ್ನು ಪ್ರಶಂಸಿಸುತ್ತೇವೆ. ನಾವು ರಾಜಕೀಯ ವಿಡಂಬನೆಯನ್ನು ಸ್ವೀಕರಿಸುತ್ತೇವೆ. ಆದರೆ, ಅದು ದಬ್ಬಾಳಿಕೆಗೆ ಕಾರಣವಾದರೆ ನಾವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದರು.

“ಈ ಕಲಾವಿದ ಪ್ರಧಾನಿ, ಮುಖ್ಯ ನ್ಯಾಯಾಧೀಶರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ; ಅವರು ವಿವಾದ ಸೃಷ್ಟಿಸುವ ಮೂಲಕ ಖ್ಯಾತಿ ಗಳಿಸಲು ಬಯಸುತ್ತಾರೆ. ಅವರು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಕಳಪೆ ಗುಣಮಟ್ಟದ ಹಾಸ್ಯ ಪ್ರದರ್ಶಿಸಿದರು” ಎಂದು ಮುಖ್ಯಮಂತ್ರಿ ಹೇಳಿದರು.

ಸ್ಕ್ರ್ಯಾಪಿಂಗ್ ನೀತಿಯಿಂದ ವಾಹನ ಬಿಡಿಭಾಗಗಳ ಬೆಲೆ ಶೇ.30 ರಷ್ಟು ಕಡಿಮೆಯಾಗುತ್ತದೆ: ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...