Homeಮುಖಪುಟಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

ಉಪವಾಸ ನಿರತ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಿಂದೂ ಮಹಿಳೆಗೆ ರಕ್ತದಾನ

- Advertisement -
- Advertisement -

ಮಾನವೀಯತೆಯ ಅಸಾಧಾರಣ ಕಾರ್ಯವೊಂದರಲ್ಲಿ 27 ವರ್ಷದ ಮುಸ್ಲಿಂ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ತೀವ್ರ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಹಿಂದೂ ಮಹಿಳೆ ಸಂಗೀತಾ ಘೋಷ್‌ಗಾಗಿ ರಂಜಾನ್ ಉಪವಾಸ ಆಚರಿಸುವಾಗ ರಕ್ತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಜವಾಹರಲಾಲ್ ನೆಹರು ಆಸ್ಪತ್ರೆಯಲ್ಲಿ ನಡೆದ ಈ ಘಟನೆಯು ಕೋಮು ವಿಭಜನೆಗಳು ಆಳವಾಗುತ್ತಿರುವ ಸಮಯದಲ್ಲಿ ಭರವಸೆಯ ಸಂಕೇತವಾಗಿದೆ.

ನಾಡಿಯಾ ಜಿಲ್ಲೆಯ ಮಜ್ದಿಯಾದ ಸಂಗೀತಾ ಘೋಷ್ 8 ವರ್ಷಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾರ್ಚ್ 16ರಂದು ಅವರ ಆರೋಗ್ಯವು ಗಂಭೀರ ತಿರುವು ಪಡೆದುಕೊಂಡಿತು ಮತ್ತು ವೈದ್ಯರು ತುರ್ತಾಗಿ ರಕ್ತದಾನ ಮಾಡುವವರು ಬೇಕೆಂದು ಕೋರಿದರು. ಅವರ ಮಗ ಸಂಜು ಘೋಷ್ ಸಹಾಯಕ್ಕಾಗಿ ಸ್ಥಳೀಯ ಸ್ವಯಂಸೇವಕ ಗುಂಪು ತುರ್ತು ರಕ್ತ ಸೇವೆಯನ್ನು ಶೀಘ್ರವೇ ತಲುಪಿದರು. ನಿಯಮಿತ ದಾನಿ ನಸೀಮ್ ಮಲಿತಾ ಹಿಂಜರಿಕೆಯಿಲ್ಲದೆ ಕರೆಗೆ ಉತ್ತರಿಸಿದರು.

ಅವರ ಸ್ಥಿತಿಯ ಬಗ್ಗೆ ಕೇಳಿದಾಗ ನಾನು ಉಪವಾಸ ಮಾಡುತ್ತಿದ್ದೆ. ಆದರೆ ಒಂದು ಜೀವ ಉಳಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ತಕ್ಷಣವೇ ನಾನು ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿದೆ ಎಂದು ನಸೀಮ್ ಹೇಳುತ್ತಾರೆ.

ನಸೀಮ್‌ಗೆ ಇದು ಒಂದು ದೊಡ್ಡ ಕಾರ್ಯವಾಗಿರಲಿಲ್ಲ. ವರ್ಷಗಳಲ್ಲಿ ಹಲವು ಭಾರೀ ಇತರರಿಗೆ ಸಹಾಯ ಮಾಡುವ ಅವರ ಕಾರ್ಯಗಳಲ್ಲಿ ಇದು ಒಂದು. “ನಾನು ಹಲವು ಬಾರಿ ರಕ್ತದಾನ ಮಾಡಿದ್ದೇನೆ. ಇದು ದೊಡ್ಡ ವಿಷಯವಲ್ಲ; ಇದು ನನ್ನ ಬಯಕೆ” ಎಂದು ನಸೀಮ್ ಹೇಳಿದ್ದಾರೆ.

ಘೋಷ್ ಕುಟುಂಬವು ನಸೀಮ್ ಅವರ ನಿಸ್ವಾರ್ಥತೆಯಿಂದ ಭಾವುಕವಾಯಿತು. “ನಾವು ಹತಾಶರಾಗಿದ್ದೆವು. ರಕ್ತ ಬ್ಯಾಂಕಿನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ” ಎಂದು ಸಂಜು ಹೇಳಿದರು. “ನಸೀಮ್ ಹಿಂಜರಿಯಲಿಲ್ಲ. ಅವರು ತಕ್ಷಣ ತಮ್ಮ ಸ್ನೇಹಿತರೊಂದಿಗೆ ಬಂದರು. ನನಗೆ ಯಾವುದೇ ಜೀವಗಳನ್ನು ಉಳಿಸುವುದೇ ಒಬ್ಬ ವ್ಯಕ್ತಿಗೆ ಶ್ರೇಷ್ಠ ಧರ್ಮ” ಎಂದು ಸಂಜು ಅಭಿಪ್ರಾಯಿಸಿದ್ದಾರೆ.

ಈ ಕಥೆ ತ್ವರಿತವಾಗಿ ಆನ್‌ಲೈನ್‌ನಲ್ಲಿ ಹರಡಿತು. ರಾಜಕಾರಣಿಗಳು ಮತ್ತು ನಾಗರಿಕರಿಂದ ಪ್ರಶಂಸೆ ಗಳಿಸಿತು. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಸರ್ನಾಟೆ ಟ್ವೀಟ್ ಮಾಡಿದ್ದಾರೆ, “ಈ ಧಾರ್ಮಿಕ ದ್ವೇಷದ ವಾತಾವರಣದಲ್ಲಿ ನಸೀಮ್ ಪ್ರೀತಿಯ ಶಕ್ತಿಯನ್ನು ತೋರಿಸಿದ್ದಾರೆ. ಇದು ನಾನು ನಂಬುವ ಭಾರತ.” ಎಂಬ ಸುಪ್ರಿಯಾ ಅವರ ಪ್ರತಿಕ್ರಿಯೆಯಿಂದ ವಿನಮ್ರರಾದ ನಸೀಮ್ ಫೇಸ್‌ಬುಕ್‌ನಲ್ಲಿ ಬೆಂಬಲದ ಸಂದೇಶಗಳನ್ನು ಹಂಚಿಕೊಂಡರು, “ಇತರರಿಗೆ ಸಹಾಯ ಮಾಡುವುದು ದೇವರಿಗೆ ಮಾಡುವ ಶ್ರೇಷ್ಠ ಸೇವೆ” ಎಂದು ಬರೆದುಕೊಂಡರು.

ಕಲ್ಯಾಣಿಯಲ್ಲಿ ಈಗ ಕಲಿಯುತ್ತಿರುವ ಮುರ್ಷಿದಾಬಾದ್ ನಿವಾಸಿ ನಸೀಮ್, ತಮ್ಮ ಇಂತಹ ಕೆಲಸವು ಇತರರಿಗೆ ಸ್ಫೂರ್ತಿ ನೀಡಲಿ ಎಂದು ಆಶಿಸುತ್ತಿದ್ದಾರೆ. “ಜೀವಗಳು ಅಪಾಯದಲ್ಲಿರುವಾಗ ನಾವು ಅಡೆತಡೆಗಳನ್ನು ಮುರಿಯಬೇಕು” ಎಂದು ಅವರು ಹೇಳಿದ್ದಾರೆ.

ಬಾವಿ ಮೇಲೆ ಸಂಭಾಲ್ ಮಸೀದಿ ಸಮಿತಿಯ ಹಕ್ಕನ್ನು ತಿರಸ್ಕರಿಸಿದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...