Homeಕರ್ನಾಟಕಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ...

ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

- Advertisement -
- Advertisement -

ಶೇಕಡ 100 ಫಲಿತಾಂಶ ಸಾಧಿಸಬೇಕು ಎಂಬ ಕಾರಣಕ್ಕೆ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವ ಮೂಲಕ ಶಿಕ್ಷಕರು ಮಹಾ ಅನ್ಯಾಯವೆಸಗಿದ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿನಿಯರು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಪರೀಕ್ಷೆ ಬರೆದು ಫೇಲ್ ಆದರೆ ಶಾಲೆಗೆ 100 ಶೇಕಡ ಫಲಿತಾಂಶ ಬರುವುದಿಲ್ಲ ಎಂಬ ಕಾರಣಕ್ಕೆ, ಅವರಿಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯುವ ಅವಕಾಶ ತಪ್ಪಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯ್ದಿನ್ ಕುಟ್ಟಿ, “ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನಲಾದ ಸುಮಾರು 6 ಮಕ್ಕಳ ಪೋಷಕರನ್ನು ಎರಡು ತಿಂಗಳ ಹಿಂದೆ ಶಾಲೆಗೆ ಕರೆಸಿದ್ದ ಶಿಕ್ಷಕರು “ನಿಮ್ಮ ಮಕ್ಕಳು ಕಲಿಕೆಯಲ್ಲಿ ಹಿಂದೆ ಇದ್ದಾರೆ. ಪರೀಕ್ಷೆ ಬರೆದರೆ ಫೇಲ್ ಆಗುವ ಸಾಧ್ಯತೆ ಇದೆ. ಅವರನ್ನು ಮುಂದಿನ ಏಪ್ರಿಲ್‌ನಲ್ಲಿ ಪರೀಕ್ಷೆಗೆ ಕೂರಿಸುತ್ತೇವೆ” ಎಂದು ಹೇಳಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ವಿದ್ಯಾರ್ಥಿಗಳ ಪೋಷಕರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ, ಇಬ್ಬರನ್ನು ಹೊರತುಪಡಿಸಿ ನಾಲ್ವರು ವಿದ್ಯಾರ್ಥಿಗಳು ಕಡೆ ಕ್ಷಣದಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಮಾತ್ರ ಶಿಕ್ಷಕರ ಮಾತು ಕೇಳಿಕೊಂಡು ಪರೀಕ್ಷೆ ಬರೆದಿಲ್ಲ. ಅವರಿಗೆ ಹಾಲ್‌ ಟಿಕೆಟ್ ಕೂಡ ಕೊಟ್ಟಿಲ್ಲ ಎನ್ನಲಾಗ್ತಿದೆ. ಪೋಷಕರು ಹಾಲ್‌ ಟಿಕೆಟ್ ಬಗ್ಗೆ ಕೇಳಿದಾಗ, “ಅದು ಬಂದಿಲ್ಲ” ಎಂಬ ಸಬೂಬು ನೀಡಿದ್ದಾರಂತೆ. ಈ ಮೂಲಕ ವಿದ್ಯಾರ್ಥಿನಿಯರು ಮಹತ್ವದ ಪರೀಕ್ಷೆ ಬರೆಯುವ ಅವಕಾಶವನ್ನು ಶಿಕ್ಷಕರು ತಪ್ಪಿಸಿದ್ದಾರೆ. ಇದು ಘೋರ ಅನ್ಯಾಯ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಖಾಸಗಿ ಶಾಲೆಗಳು ಶೇಕಡ 100 ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಿವೆ. ಸರ್ಕಾರಿ ಶಾಲೆಗಳು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆಯಬೇಕು. ಆದರೆ, ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವೃಂದ 100 ಶೇಕಡ ಫಲಿತಾಂಶದ ಗೀಳಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದಿರುವುದು ಅಕ್ಷಮ್ಯ ಅಪರಾಧವಾಗಿದೆ.

ಇದರ ಬಗ್ಗೆ ಖುದ್ದು ಅವಕಾಶ ವಂಚಿತರಾಗಿರುವ ಹೆಣ್ಣು ಮಕ್ಕಳು ಮಕ್ಕಳ ಹಕ್ಕುಗಳ ಆಯೋಗ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕರಿಗೆ ಪತ್ರ ಬರೆದಿದ್ದಾರೆ. ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ತಪ್ಪಿತಸ್ಥ ಶಿಕ್ಷಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ, ಆ ಮಕ್ಕಳಿಗೆ ಇನ್ನುಳಿದ ಪರೀಕ್ಷೆಗಳನ್ನು ಬರೆಯಲು ಕೂಡಲೇ ವ್ಯವಸ್ಥೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಪರೀಕ್ಷೆ ವಂಚಿತರಾದ ವಿದ್ಯಾರ್ಥಿನಿಯರು ಅಧಿಕಾರಿಗಳಿಗೆ ಬರೆದಿರುವ ಪತ್ರ ನಮಗೆ ದೊರೆತಿದ್ದು, ಅದರಲ್ಲಿ ಇಬ್ಬರೂ ಕೂಡ “ನಮ್ಮ ಅನುಮತಿ ಪಡೆಯದೆ, ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಿಕ್ಷಕರು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ನಮ್ಮನ್ನು ಶಿಕ್ಷಣದಿಂದ ವಂಚಿತರಾಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ನಮಗೆ ಈ ಶೈಕ್ಷಣಿಕ ವರ್ಷದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಮತ್ತು ಈ ಬಗ್ಗೆ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...