Homeದಲಿತ್ ಫೈಲ್ಸ್ಸಾಮಾನ್ಯ ವಿಭಾಗದಲ್ಲಿ 2ನೇ ರ‍್ಯಾಂಕ್ ಪಡೆದಿದ್ದರೂ ಪ್ರವೇಶ ನಿರಾಕರಿಸಿದ ಬಿಎಚ್‌ಯು; ದಲಿತ ವಿದ್ಯಾರ್ಥಿಯಿಂದ ಧರಣಿ

ಸಾಮಾನ್ಯ ವಿಭಾಗದಲ್ಲಿ 2ನೇ ರ‍್ಯಾಂಕ್ ಪಡೆದಿದ್ದರೂ ಪ್ರವೇಶ ನಿರಾಕರಿಸಿದ ಬಿಎಚ್‌ಯು; ದಲಿತ ವಿದ್ಯಾರ್ಥಿಯಿಂದ ಧರಣಿ

- Advertisement -
- Advertisement -

ಸಾಮಾನ್ಯ ವಿಭಾಗದಲ್ಲಿ ಪ್ರವೇಶ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರೂ ಪಿಎಚ್‌ಡಿ ಮಾಡಲು ಪ್ರವೇಶ ನಿರಾಕರಿಸಿದ್ದಕ್ಕಾಗಿ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ (ಬಿಎಚ್‌ಯು) ದಲಿತ ವಿದ್ಯಾರ್ಥಿಯೊಬ್ಬರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿವಂ ಸೋಂಕರ್ ಪ್ರವೇಶ ಪಡೆಯಲು ಮಾಡಿದ ಎಲ್ಲ ಪ್ರಯತ್ನಗಳು ವಿಫಲವಾದಾಗ ಉಪಕುಲಪತಿಗಳ ನಿವಾಸದ ಹೊರಗೆ ಧರಣಿ ಕುಳಿತಿದ್ದಾರೆ. ವಿದ್ಯಾರ್ಥಿಗಳು ಮತ್ತು ರಾಜಕಾರಣಿಗಳು ಸಹ ಶಿವಂ ಬೆಂಬಲ ಸೂಚಿಸಿದ್ದಾರೆ.

ಮಾಳವೀಯ ಸೆಂಟರ್ ಫಾರ್ ಪೀಸ್ ರಿಸರ್ಚ್‌ನಲ್ಲಿ ಪಿಎಚ್‌ಡಿ ಪ್ರವೇಶಕ್ಕಾಗಿ ಸೋಂಕರ್ ಪರೀಕ್ಷೆ ಬರೆದಿದ್ದರು. ಎರಡನೇ ರ‍್ಯಾಂಕ್ ಪಡೆದಿದ್ದರೂ ಅವರಿಗೆ ಪ್ರವೇಶ ಸಿಗಲಿಲ್ಲ. ವಿಭಾಗದಲ್ಲಿ ಒಟ್ಟು ಏಳು ಸೀಟುಗಳಿವೆ. ಆದರೆ, ಕೇವಲ ನಾಲ್ಕು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಸೋಂಕರ್ ಅವರನ್ನು ಬೆಂಬಲಿಸಲು ಕ್ಯಾಂಪಸ್ ತಲುಪಿದ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಜಯ್ ರೈ, ವಿಶ್ವವಿದ್ಯಾಲಯವು ಶಿಕ್ಷಣದ ದೇವಾಲಯವಾಗಿ ಸ್ಥಾಪಿಸಲ್ಪಟ್ಟಿದ್ದರೂ, ಅದು ಈಗ ತಾರತಮ್ಯ ಮತ್ತು ಅನ್ಯಾಯದ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಪ್ರಧಾನಿಯವರ ಕ್ಷೇತ್ರದಲ್ಲಿ ಈ ರೀತಿ ನಡೆಯುತ್ತಿರುವುದು ‘ನಾಚಿಕೆಗೇಡಿನ’ ಸಂಗತಿ ಎಂದರು.

ಮೀಸಲಾತಿ ಅಥವಾ ಮೀಸಲಾತಿ ಇಲ್ಲದ ವರ್ಗಕ್ಕೆ ಸೇರುವ ಸೀಟುಗಳ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯನ್ನು ಕೌನ್ಸೆಲಿಂಗ್ ಅವಧಿಗೆ ಮಾತ್ರ ಮಾಡಬಹುದು ಎಂದು ವಿಶ್ವವಿದ್ಯಾಲಯದ ವಿವರಣೆಯಾಗಿದೆ. ಮೀಸಲಾತಿ ಸೀಟುಗಳಿಗೆ ಸೂಕ್ತ ಅರ್ಜಿಗಳು ಬರದ ಕಾರಣ ಖಾಲಿ ಉಳಿದಿವೆ. ಸೋಂಕರ್ ಸಾಮಾನ್ಯ ವಿಭಾಗದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರಿಂದ ಅವರನ್ನು ಸಾಮಾನ್ಯ ವರ್ಗದ ಸ್ಥಾನಕ್ಕೆ ಸೇರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ವಿವಿ ಸಮರ್ಥಿಸಿಕೊಂಡಿದೆ.

ಸಮಾಜವಾದಿ ಪಕ್ಷದ ಎಂಎಲ್‌ಸಿ ಅಶುತೋಷ್ ಸಿನ್ಹಾ ಅವರು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದು, ಸೋಂಕರ್ ಅವರ ಪರಿಸ್ಥಿತಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಹಾದಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುವುದಕ್ಕೆ ಉದಾಹರಣೆಯಾಗಿದೆ ಎಂದು ಆರೋಪಿಸಿದ್ದಾರೆ.

ಭೀಮ್ ಸೇನೆಯ ಮುಖ್ಯಸ್ಥ ಮತ್ತು ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಅವರು ಸೋಂಕರ್ ಅವರ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈ ಇಡೀ ಪ್ರಕರಣವು ವಿಶ್ವವಿದ್ಯಾಲಯವು ಅಳವಡಿಸಿಕೊಂಡ ಪ್ರವೇಶ ಪ್ರಕ್ರಿಯೆಗಳ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಸೋಂಕರ್ ಅವರ ಸಮಸ್ಯೆ ಪರಿಹರಿಸದಿದ್ದರೆ ಆಂದೋಲನ ಪ್ರಾರಂಭಿಸುವುದಾಗಿ ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು ಈಗಾಗಲೇ ಕುಲಪತಿಯ ಪ್ರತಿಕೃತಿಯನ್ನು ಸುಟ್ಟು ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.

ಈ ಮಧ್ಯೆ, ಸೋಂಕರ್, ಬಿಎಚ್‌ಯು ಸಂಸ್ಥಾಪಕ ಮದನ್ ಮೋಹನ್ ಮಾಳವೀಯ, ಭೀಮ್ ರಾವ್ ಅಂಬೇಡ್ಕರ್ ಮತ್ತು ಭಗವಾನ್ ರಾಮನ ಚಿತ್ರಗಳೊಂದಿಗೆ ಧರಣಿ ಕುಳಿತಿದ್ದಾರೆ.

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...