Homeಮುಖಪುಟನಮ್ಮದು ರಾಜಕೀಯ ಗಲಭೆಯಲ್ಲ; ಘನತೆಗಾಗಿ ನಡೆಯುತ್ತಿರುವ ಹೋರಾಟ: ಆದಿತ್ಯನಾಥ್‌ಗೆ ಸ್ಟಾಲಿನ್ ತಿರುಗೇಟು

ನಮ್ಮದು ರಾಜಕೀಯ ಗಲಭೆಯಲ್ಲ; ಘನತೆಗಾಗಿ ನಡೆಯುತ್ತಿರುವ ಹೋರಾಟ: ಆದಿತ್ಯನಾಥ್‌ಗೆ ಸ್ಟಾಲಿನ್ ತಿರುಗೇಟು

- Advertisement -
- Advertisement -

ಕ್ಷೇತ್ರ ವಿಂಗಡನೆ ಮತ್ತು ತ್ರಿಭಾಷಾ ನೀತಿ ವಿಚಾರದ ಬಗ್ಗೆ ಮಾತನಾಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಧರ್ಮದ ಆಧಾರದ ಮೇಲೆ ವಿಭಜನೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ತಿರುಗೇಟು ನೀಡಿರುವ ಸ್ಟಾಲಿನ್, “ಇದು ಮತಕ್ಕಾಗಿ ನಡೆಸುವ ರಾಜಕೀಯ ಗಲಭೆಯಲ್ಲ, ಘನತೆ ಮತ್ತು ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟ” ಎಂದು ಹೇಳಿದ್ದಾರೆ. ನಮ್ಮದು ರಾಜಕೀಯ ಗಲಭೆಯಲ್ಲ

ಆದಿತ್ಯನಾಥ್‌ ಅವರ ಹೇಳಿಕೆಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಸ್ಟಾಲಿನ್, ದ್ವಿಭಾಷಾ ನೀತಿ ಮತ್ತು ನ್ಯಾಯಯುತ ಕ್ಷೇತ್ರ ಪುನರ್ವಿಂಗಡನೆ ಕುರಿತ ತಮಿಳುನಾಡಿನ ಗಟ್ಟಿಯಾದ ಧ್ವನಿ ಬಿಜೆಪಿಯನ್ನು ‘ಕಿರಿಕಿರಿಗೊಳಿಸಿದೆ’. ಬಿಜೆಪಿಯ ನಾಯಕರ ಸಂದರ್ಶನ ನೋಡಿದರೆ ಇದು ತಿಳಿಯುತ್ತದೆ ಎಂದು ಹೇಳಿದ್ದಾರೆ. ನಮ್ಮದು ರಾಜಕೀಯ ಗಲಭೆಯಲ್ಲ

“ಮತ್ತು, ಈಗ ಗೌರವಾನ್ವಿತ ಯೋಗಿ ಆದಿತ್ಯನಾಥ್ ಅವರು ನಮಗೆ ದ್ವೇಷದ ಬಗ್ಗೆ ಉಪನ್ಯಾಸ ನೀಡಲು ಬಯಸುತ್ತಿದ್ದಾರೆಯೇ? ನಮ್ಮನ್ನು ಬಿಡಿ. ಇದು ವ್ಯಂಗ್ಯ ಕೂಡಾ ಅಲ್ಲ – ಇದು ಅತ್ಯಂತ ಕೆಟ್ಟ ಕರಾಳ ರಾಜಕೀಯ ಹಾಸ್ಯ.” ಎಂದು ಅವರು ಹೇಳಿದ್ದಾರೆ.

ತಮಿಳುನಾಡು ರಾಜ್ಯವು ಯಾವುದೇ ನಿರ್ದಿಷ್ಟ ಭಾಷೆಯ ವಿರೋಧಿಗಳಲ್ಲ, ಬದಲಾಗಿ ರಾಜ್ಯ ಸರ್ಕಾರವು ‘ಭಾಷಾ ಹೇರಿಕೆ’ ಮತ್ತು ‘ಜನಾಂಗೀಯತೆ’ಯನ್ನು ವಿರೋಧಿಸುತ್ತಿದೆಯೆ. ಇದು ಮತಕ್ಕಾಗಿ ನಡೆಸುವ ರಾಜಕೀಯ ಗಲಭೆಗಳಲ್ಲ, ಬದಲಾಗಿ ಘನೆತೆ ಮತ್ತು ನ್ಯಾಯಕ್ಕಾಗಿ ನಡೆಸುವ ಹೋರಾಟ ಎಂದು ಅವರು ಹೇಳಿದ್ದಾರೆ.

ಸುದ್ದಿ ಸಂಸ್ಥೆ ANI ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಆದಿತ್ಯನಾಥ್, ಸ್ಟಾಲಿನ್ ಅವರು ತಮ್ಮ ಮತಬ್ಯಾಂಕ್ ಅಪಾಯದಲ್ಲಿದೆ ಎಂದು ಭಾವಿಸಿ ಪ್ರಾದೇಶಿಕತೆ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

“ಅವರು ಹಿಂದಿಯನ್ನು ಏಕೆ ದ್ವೇಷಿಸಬೇಕು. ದೇಶವನ್ನು ಭಾಷೆ ಅಥವಾ ಪ್ರದೇಶದ ಆಧಾರದ ಮೇಲೆ ವಿಭಜಿಸಬಾರದು. ವಾರಣಾಸಿಯಲ್ಲಿ ಕಾಶಿ-ತಮಿಳು ಸಂಗಮದ ಮೂರನೇ ತಲೆಮಾರನ್ನು ಆಯೋಜಿಸಿದ್ದಕ್ಕಾಗಿ ನಾವು ಪ್ರಧಾನಿ ಮೋದಿ ಜಿ ಅವರಿಗೆ ಕೃತಜ್ಞರಾಗಿರುತ್ತೇವೆ. ತಮಿಳು ಭಾರತದ ಅತ್ಯಂತ ಹಳೆಯ ಭಾಷೆಗಳಲ್ಲಿ ಒಂದಾಗಿದೆ ಮತ್ತು ಅದರ ಇತಿಹಾಸವು ಸಂಸ್ಕೃತದಷ್ಟೇ ಪ್ರಾಚೀನವಾಗಿದೆ.” ಎಂದು ಹೇಳಿದ್ದಾರೆ.

“ಭಾರತೀಯ ಪರಂಪರೆಯ ಹಲವು ಅಂಶಗಳು ಇನ್ನೂ ಭಾಷೆಯಲ್ಲಿ ಜೀವಂತವಾಗಿರುವುದರಿಂದ ಪ್ರತಿಯೊಬ್ಬ ಭಾರತೀಯನಿಗೆ ತಮಿಳಿನ ಬಗ್ಗೆ ಆದರ ಮತ್ತು ಗೌರವವಿದೆ. ಹಾಗಾದರೆ, ನಾವು ಹಿಂದಿಯನ್ನು ಏಕೆ ದ್ವೇಷಿಸಬೇಕು?” ಎಂದು ಅವರು ಕೇಳಿದ್ದರು. ಕ್ಷೇತ್ರ ಪುನರ್‌ವಿಂಗಡನೆ ವಿಚಾರದಲ್ಲಿ ಸ್ಟಾಲಿನ್ ಅವರ ಕಳವಳಗಳನ್ನು ತಳ್ಳಿಹಾಕಿದ ಆದಿತ್ಯನಾಥ್, ಅದು ರಾಜಕೀಯ ಕಾರ್ಯಸೂಚಿ ಎಂದು ಕರೆದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ಸರ್ಕಾರವು ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರಲ್ಲಿ ವಿವರಿಸಿರುವ ತ್ರಿಭಾಷಾ ಸೂತ್ರದ ಅನುಷ್ಠಾನವನ್ನು ತಿರಸ್ಕರಿಸಿದ್ದಾರೆ. ಈ ನಿರಾಕರಣೆ ದೇಶದಲ್ಲಿ ಭಾಷಾ ನೀತಿಗಳ ಸುತ್ತಲಿನ ನಡೆಯುತ್ತಿರುವ ಚರ್ಚೆಯನ್ನು ಮತ್ತೆ ಹೆಚ್ಚಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...