Homeಮುಖಪುಟಸಂಭಾಲ್ | ಮಸೀದಿ, ಈದ್ಗಾಗಳ ಒಳಗೆ ಈದ್ ಪ್ರಾರ್ಥನೆ ನಡೆಸುವಂತೆ ಪೊಲೀಸರ ಸೂಚನೆ

ಸಂಭಾಲ್ | ಮಸೀದಿ, ಈದ್ಗಾಗಳ ಒಳಗೆ ಈದ್ ಪ್ರಾರ್ಥನೆ ನಡೆಸುವಂತೆ ಪೊಲೀಸರ ಸೂಚನೆ

- Advertisement -
- Advertisement -

ಈದ್-ಉಲ್-ಫಿತರ್ ಮತ್ತು ಅಲ್ವಿದ ಜುಮ್ಮಾ ಪ್ರಾರ್ಥನೆಗಳನ್ನು ಮಸೀದಿಗಳು ಅಥವಾ ಈದ್ಗಾಗಳ ಒಳಗೆ ಮಾತ್ರ ಅನುಮತಿಸಲಾಗುವುದು ಎಂದು ಉತ್ತರ ಪ್ರದೇಶದ ಸಂಭಾಲ್ ಪೊಲೀಸರು ಬುಧವಾರ ಹೇಳಿದ್ದಾರೆ. ಈ ಪ್ರಾರ್ಥನೆಗಳನ್ನು ಬೀದಿಗಳಲ್ಲಿ ಅಥವಾ ಛಾವಣಿಗಳ ನಡೆಸಬಾರದು ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹಬ್ಬಗಳ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಿದ ಜುಮ್ಮಾ ಪ್ರಾರ್ಥನೆಯು ರಂಜಾನ್ ತಿಂಗಳ ಕೊನೆಯ ಶುಕ್ರವಾರ ಮಾರ್ಚ್ 28 ರಂದು ನಡೆಯುತ್ತದೆ. ಈದ್‌ ಉಲ್ ಫಿತರ್‌ ಮಾರ್ಚ್ 31 ರಂದು ಆಚರಿಸಲಾಗುತ್ತದೆ. ಈದ್ಗಾಗಳು ಎಂದರೆ ಸಾಮಾನ್ಯವಾಗಿ ನಗರದ ಹೊರಗೆ ಅಥವಾ ಅದರ ಹೊರವಲಯದಲ್ಲಿರುವ ಈದ್ ಪ್ರಾರ್ಥನೆಗಳಿಗಾಗಿ ಕಾಯ್ದಿರಿಸಿದ ತೆರೆದ ಮೈದಾನಗಳಾಗಿವೆ.

ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ ನಂತರ ನವೆಂಬರ್ 24 ರಂದು ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಅದಾಗಿ ತಿಂಗಳುಗಳ ನಂತರ ಈ ನಿರ್ದೇಶನಗಳನ್ನು ಪೊಲೀಸರು ಹೊರಡಿಸಿದ್ದಾರೆ. ಈ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಈದ್-ಉಲ್-ಫಿತರ್‌ಗೆ ಮುಂಚಿತವಾಗಿ, ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪ್ರಾರ್ಥನೆಗಳನ್ನು ಶಾಂತಿಯುತವಾಗಿ ಮತ್ತು ಸಾಮರಸ್ಯದಿಂದ ಸಲ್ಲಿಸಲು ಅವಕಾಶ ನೀಡುವಂತೆ ಕೆಲವು ಗುಂಪುಗಳು ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿದ್ದವು ಎಂದು ಇಟಿವಿ ಭಾರತ್ ವರದಿ ಮಾಡಿದೆ.

ಬುಧವಾರ, ಜಿಲ್ಲೆಯ ಸರ್ದಾರ್ ಕೊತ್ವಾಲಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ಮತ್ತು ವೃತ್ತ ಅಧಿಕಾರಿ ಅನುಜ್ ಚೌಧರಿ ಭಾಗವಹಿಸಿದ್ದರು.

“ಎಲ್ಲಾ ಧರ್ಮಗಳು ಮತ್ತು ಸಮುದಾಯಗಳ ಜನರೊಂದಿಗೆ ಶಾಂತಿ ಸಭೆ ನಡೆಸಲಾಯಿತು. ಅಲ್ಲಿ ಮಸೀದಿಗಳು ಮತ್ತು ಈದ್ಗಾ ಒಳಗೆ ಮಾತ್ರ ಪ್ರಾರ್ಥನೆಗಳನ್ನು ನಡೆಸುವಂತೆ ಎಂದು ತಿಳಿಸಲಾಯಿತು” ಎಂದು ಚಂದ್ರ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ. ಹಬ್ಬಗಳ ಸಮಯದಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

“ನಾವು ವಾಸಿಸುವ ಸ್ಥಳದ ಶಾಂತಿ ಮತ್ತು ಸುವ್ಯವಸ್ಥೆಗೆ ತೊಂದರೆಯಾಗಬಾರದು ಎಂಬುದು ನಮ್ಮ ಗುರಿ. ಆದ್ದರಿಂದ, ಪ್ರತಿಯೊಬ್ಬರೂ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ… ನೀವು ಈದ್‌ನ ಸೇವಿಯನ್ ಅನ್ನು ಪೂರೈಸಲು ಬಯಸಿದರೆ, [ಹಿಂದೂ ಹಬ್ಬ] ಹೋಳಿಯ ಗುಜಿಯಾವನ್ನು ಸಹ ತಿನ್ನಬೇಕಾಗುತ್ತದೆ.” ಎಂದು ಹೇಳಿದ್ದಾರೆ.

ಈದ್, ನವರಾತ್ರಿ ಮತ್ತು ರಾಮ ನವಮಿಯ ಹಬ್ಬಗಳ ಸಮಯದಲ್ಲಿ ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮತ್ತು ಪರಸ್ಪರ ಸಹಾಯ ಮಾಡಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ವರದಿಗಾರರಿಗೆ ತಿಳಿಸಿದ್ದಾರೆ. ನವರಾತ್ರಿ ಮಾರ್ಚ್ 30 ರಂದು ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುತ್ತದೆ. ರಾಮ ನವಮಿ ಏಪ್ರಿಲ್ 6 ರಂದು ನಡೆಯುತ್ತದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...