Homeಮುಖಪುಟಸಂಭಾಲ್ | ಮಸೀದಿ, ಈದ್ಗಾಗಳ ಒಳಗೆ ಈದ್ ಪ್ರಾರ್ಥನೆ ನಡೆಸುವಂತೆ ಪೊಲೀಸರ ಸೂಚನೆ

ಸಂಭಾಲ್ | ಮಸೀದಿ, ಈದ್ಗಾಗಳ ಒಳಗೆ ಈದ್ ಪ್ರಾರ್ಥನೆ ನಡೆಸುವಂತೆ ಪೊಲೀಸರ ಸೂಚನೆ

- Advertisement -
- Advertisement -

ಈದ್-ಉಲ್-ಫಿತರ್ ಮತ್ತು ಅಲ್ವಿದ ಜುಮ್ಮಾ ಪ್ರಾರ್ಥನೆಗಳನ್ನು ಮಸೀದಿಗಳು ಅಥವಾ ಈದ್ಗಾಗಳ ಒಳಗೆ ಮಾತ್ರ ಅನುಮತಿಸಲಾಗುವುದು ಎಂದು ಉತ್ತರ ಪ್ರದೇಶದ ಸಂಭಾಲ್ ಪೊಲೀಸರು ಬುಧವಾರ ಹೇಳಿದ್ದಾರೆ. ಈ ಪ್ರಾರ್ಥನೆಗಳನ್ನು ಬೀದಿಗಳಲ್ಲಿ ಅಥವಾ ಛಾವಣಿಗಳ ನಡೆಸಬಾರದು ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹಬ್ಬಗಳ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಿದ ಜುಮ್ಮಾ ಪ್ರಾರ್ಥನೆಯು ರಂಜಾನ್ ತಿಂಗಳ ಕೊನೆಯ ಶುಕ್ರವಾರ ಮಾರ್ಚ್ 28 ರಂದು ನಡೆಯುತ್ತದೆ. ಈದ್‌ ಉಲ್ ಫಿತರ್‌ ಮಾರ್ಚ್ 31 ರಂದು ಆಚರಿಸಲಾಗುತ್ತದೆ. ಈದ್ಗಾಗಳು ಎಂದರೆ ಸಾಮಾನ್ಯವಾಗಿ ನಗರದ ಹೊರಗೆ ಅಥವಾ ಅದರ ಹೊರವಲಯದಲ್ಲಿರುವ ಈದ್ ಪ್ರಾರ್ಥನೆಗಳಿಗಾಗಿ ಕಾಯ್ದಿರಿಸಿದ ತೆರೆದ ಮೈದಾನಗಳಾಗಿವೆ.

ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ ನಂತರ ನವೆಂಬರ್ 24 ರಂದು ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಅದಾಗಿ ತಿಂಗಳುಗಳ ನಂತರ ಈ ನಿರ್ದೇಶನಗಳನ್ನು ಪೊಲೀಸರು ಹೊರಡಿಸಿದ್ದಾರೆ. ಈ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಈದ್-ಉಲ್-ಫಿತರ್‌ಗೆ ಮುಂಚಿತವಾಗಿ, ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪ್ರಾರ್ಥನೆಗಳನ್ನು ಶಾಂತಿಯುತವಾಗಿ ಮತ್ತು ಸಾಮರಸ್ಯದಿಂದ ಸಲ್ಲಿಸಲು ಅವಕಾಶ ನೀಡುವಂತೆ ಕೆಲವು ಗುಂಪುಗಳು ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿದ್ದವು ಎಂದು ಇಟಿವಿ ಭಾರತ್ ವರದಿ ಮಾಡಿದೆ.

ಬುಧವಾರ, ಜಿಲ್ಲೆಯ ಸರ್ದಾರ್ ಕೊತ್ವಾಲಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ಮತ್ತು ವೃತ್ತ ಅಧಿಕಾರಿ ಅನುಜ್ ಚೌಧರಿ ಭಾಗವಹಿಸಿದ್ದರು.

“ಎಲ್ಲಾ ಧರ್ಮಗಳು ಮತ್ತು ಸಮುದಾಯಗಳ ಜನರೊಂದಿಗೆ ಶಾಂತಿ ಸಭೆ ನಡೆಸಲಾಯಿತು. ಅಲ್ಲಿ ಮಸೀದಿಗಳು ಮತ್ತು ಈದ್ಗಾ ಒಳಗೆ ಮಾತ್ರ ಪ್ರಾರ್ಥನೆಗಳನ್ನು ನಡೆಸುವಂತೆ ಎಂದು ತಿಳಿಸಲಾಯಿತು” ಎಂದು ಚಂದ್ರ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ. ಹಬ್ಬಗಳ ಸಮಯದಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

“ನಾವು ವಾಸಿಸುವ ಸ್ಥಳದ ಶಾಂತಿ ಮತ್ತು ಸುವ್ಯವಸ್ಥೆಗೆ ತೊಂದರೆಯಾಗಬಾರದು ಎಂಬುದು ನಮ್ಮ ಗುರಿ. ಆದ್ದರಿಂದ, ಪ್ರತಿಯೊಬ್ಬರೂ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ… ನೀವು ಈದ್‌ನ ಸೇವಿಯನ್ ಅನ್ನು ಪೂರೈಸಲು ಬಯಸಿದರೆ, [ಹಿಂದೂ ಹಬ್ಬ] ಹೋಳಿಯ ಗುಜಿಯಾವನ್ನು ಸಹ ತಿನ್ನಬೇಕಾಗುತ್ತದೆ.” ಎಂದು ಹೇಳಿದ್ದಾರೆ.

ಈದ್, ನವರಾತ್ರಿ ಮತ್ತು ರಾಮ ನವಮಿಯ ಹಬ್ಬಗಳ ಸಮಯದಲ್ಲಿ ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮತ್ತು ಪರಸ್ಪರ ಸಹಾಯ ಮಾಡಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ವರದಿಗಾರರಿಗೆ ತಿಳಿಸಿದ್ದಾರೆ. ನವರಾತ್ರಿ ಮಾರ್ಚ್ 30 ರಂದು ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುತ್ತದೆ. ರಾಮ ನವಮಿ ಏಪ್ರಿಲ್ 6 ರಂದು ನಡೆಯುತ್ತದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...