Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...