Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...