Homeಮುಖಪುಟಕೇರಳ| 10 ಜನ ಶಂಕಿತ ಮಾದಕ ವಸ್ತು ಬಳಕೆದಾರರಿಗೆ ಎಚ್‌ಐವಿ ಪಾಸಿಟಿವ್!

ಕೇರಳ| 10 ಜನ ಶಂಕಿತ ಮಾದಕ ವಸ್ತು ಬಳಕೆದಾರರಿಗೆ ಎಚ್‌ಐವಿ ಪಾಸಿಟಿವ್!

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಮತ್ತು ಮಾದಕ ವಸ್ತು ಬಳಸುವ ಯುವಕರು ಸೇರಿದಂತೆ ಹತ್ತು ಜನರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ.

ಕೇರಳ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ (ಕೆಎಸ್‌ಎಸಿಎಸ್) ಪ್ರಕಾರ, ಕೇರಳದಲ್ಲಿ ಪ್ರತಿ ತಿಂಗಳು ಸರಾಸರಿ 130 ರಿಂದ 140 ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಹೊಸದಾಗಿ ಪತ್ತೆಯಾಗುತ್ತಿರುವ ಎಚ್‌ಐವಿ ಪಾಸಿಟಿವ್ ಪ್ರಕರಣಗಳಲ್ಲಿ 18-25 ವರ್ಷ ವಯಸ್ಸಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕಂಡುಬಂದಿದೆ. ಮಾದಕ ವಸ್ತು ಸೇವನೆಯೇ ಪ್ರಮುಖ ಕಾರಣವೆಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿ ಎಚ್‌ಐವಿ ಚಿಕಿತ್ಸೆ ಪಡೆಯುತ್ತಿರುವ ಒಟ್ಟು ವ್ಯಕ್ತಿಗಳು ಸುಮಾರು 17,000.

ಕೆಎಸ್‌ಎಸಿಎಸ್ ನಡೆಸಿದ ಸ್ಕ್ರೀನಿಂಗ್ ಸಮಯದಲ್ಲಿ ಮಲಪ್ಪುರಂನಲ್ಲಿ ಈ ಗುಂಪನ್ನು ಗುರುತಿಸಲಾಯಿತು. ಅವರು ಮಾದಕ ವಸ್ತು ಸೇವನೆಗಾಗಿ ಸಿರಿಂಜ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಶಂಕಿಸಲಾಗಿದೆ.

ಹೆಚ್ಚಿನ ವ್ಯಕ್ತಿಗಳು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಕಂಡುಹಿಡಿಯಲು ಮತ್ತಷ್ಟು ಸ್ಕ್ರೀನಿಂಗ್ ನಡೆಸಲಾಗುತ್ತಿದೆ ಎಂದು ಮಲಪ್ಪುರಂ ಜಿಲ್ಲಾ ವೈದ್ಯಾಧಿಕಾರಿ ಆರ್ ರೇಣುಕಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೇರಳದಲ್ಲಿ ಮಾದಕ ವಸ್ತು ಸೇವನೆಯಲ್ಲಿ, ವಿಶೇಷವಾಗಿ ಯುವಕರಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಕೊಲೆಗಳಂತಹ ಗಂಭೀರ ಅಪರಾಧಗಳಲ್ಲಿ ಮಾದಕ ವ್ಯಸನಿಗಳು ಭಾಗಿಯಾಗಿರುವ ಹಲವಾರು ಪ್ರಕರಣಗಳ ಹಿನ್ನೆಲೆಯಲ್ಲಿ ಕಳೆದ ಕೆಲವು ವಾರಗಳಿಂದ ರಾಜ್ಯಾದ್ಯಂತ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಕೆಎಸ್‌ಎಸಿಎಸ್‌, ಶಿಕ್ಷಣ ಸಂಸ್ಥೆಗಳ ಮೂಲಕ ಮತ್ತು ವಲಸೆ ಕಾರ್ಮಿಕರಲ್ಲಿ ಬೃಹತ್ ಜಾಗೃತಿ ಚಟುವಟಿಕೆಗಳನ್ನು ನಡೆಸುತ್ತಿದೆ. ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವರು ತಮ್ಮ ಗುರುತನ್ನು ಬಹಿರಂಗಪಡಿಸಲು ಸಿದ್ದರಿಲ್ಲದೆ ಇರುವುದು ವಲಸೆ ಕಾರ್ಮಿಕರನ್ನು ಪರೀಕ್ಷಿಸುವಲ್ಲಿ ಎದುರಿಸುತ್ತಿರುವ ಪ್ರಮುಖ ಸವಾಲುಗಳಾಗಿವೆ.

ಕೇರಳದಲ್ಲಿ ಪತ್ತೆಯಾಗುತ್ತಿರುವ ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳಲ್ಲಿ ಲೈಂಗಿಕ ಕಾರ್ಯಕರ್ತರು ಹಾಗೂ ಸಲಿಂಗಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಕಂಡುಬಂದಿದೆ.

ನಕಲಿ ಶಾಲೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಿಲ್ಲ ಅವಕಾಶ: ಸಿಬಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...