Homeಮುಖಪುಟರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

ರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

- Advertisement -
- Advertisement -

ಈದುಲ್ ಫಿತರ್ (ರಂಝಾನ್‌) ಹಬ್ಬಕ್ಕೂ ಮುನ್ನ ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿರುವ ಉತ್ತರ ಪ್ರದೇಶದ ಮೀರತ್ ಪೊಲೀಸರು, ರಸ್ತೆಯಲ್ಲಿ ನಮಾಝ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಪಾಸ್‌ಪೋರ್ಟ್‌ ಮತ್ತು ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಲಾಗುವುದು ಎಂದಿದ್ದಾರೆ.

ಬುಧವಾರ, ಮೀರತ್ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ವಿಜಯ್ ಕುಮಾರ್ ಸಿಂಗ್ ಅವರಿಗೆ ಎಂಟು ಜನರ ಪಟ್ಟಿಯನ್ನು ಸಲ್ಲಿಸಿದ್ದು, ಅವರು ಕಳೆದ ವರ್ಷದ ಈದ್ ಸಮಯದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಬಾರದು ಎಂಬ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಆ ಎಂಟು ಜನರ ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

“ಜನರು ಹತ್ತಿರದ ಮಸೀದಿಯಲ್ಲಿ ನಮಾಝ್ ಮಾಡಬೇಕು ಅಥವಾ ಸಮಯಕ್ಕೆ ಸರಿಯಾಗಿ ಈದ್ಗಾ ತಲುಪಬೇಕು ಎಂದು ನಾವು ಮನವಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ನಾವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದೇವೆ” ಎಂದು ಮೀರತ್ ನಗರ ಎಸ್ಪಿ ಆಯುಷ್ ವಿಕ್ರಮ್ ಸಿಂಗ್ ಹೇಳಿದ್ದಾರೆ.

“ಕಳೆದ ವರ್ಷ ಈದ್ ಹಬ್ಬದಂದು ಕೆಲವರು ರಸ್ತೆಯಲ್ಲಿ ನಮಾಝ್ ಮಾಡಿದ್ದರು. ನಾವು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಈ ಬಾರಿಯೂ ಯಾರಾದರೂ ಓಪನ್ ಜಾಗದಲ್ಲಿ ಪ್ರಾರ್ಥನೆಗೆ ಕುಳಿತರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾವು ನಿರಂತರವಾಗಿ ಮನವಿ ಮಾಡುತ್ತಿದ್ದೇವೆ” ಎಂದಿದ್ದಾರೆ.

ಒಬ್ಬ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೆ, ಅದು ಅವರ ಲೈಸನ್ಸ್ ಮತ್ತು ಪಾಸ್‌ಪೋರ್ಟ್ ರದ್ದತಿಗೆ ಕಾರಣವಾಗಬಹುದು. ಪ್ರಕರಣ ದಾಖಲಾದ ವ್ಯಕ್ತಿಗೆ ಪಾಸ್‌ಪೋರ್ಟ್ ಅಥವಾ ಲೈಸನ್ಸ್‌ಗೆ ಅರ್ಜಿ ಸಲ್ಲಿಸಲು ಎನ್‌ಒಸಿ (ನಿರಾಕ್ಷೇಪಣಾ ಪ್ರಮಾಣಪತ್ರ) ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿಯಮಗಳನ್ನು ಉಲ್ಲಂಘಿಸುವವರು ಪ್ರಕರಣ ದಾಖಲಿಸುವುದು ಮತ್ತು ಬಂಧನ ಸೇರಿದಂತೆ ತಕ್ಷಣದ ದಂಡನಾತ್ಮಕ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮೀರತ್ ವಲಯದ ಡಿಐಜಿ ಕಲಾನಿಧಿ ನೈಥಾನಿ ಹೇಳಿದ್ದಾರೆ.

ಸಂಭಾಲ್‌ನಲ್ಲಿ, ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಅವರು, ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸುವುದರ ವಿರುದ್ಧ ಪೊಲೀಸರು ಸೂಚನೆ ನೀಡಿದ್ದಾರೆ. ಯಾರೂ ರಸ್ತೆಗಳಲ್ಲಿ ನಮಾಝ್ ಮಾಡಬಾರದು. ಮನೆಗಳಲ್ಲಿ ಸಾಮೂಹಿಕ ನಮಾಝ್‌ಗೆ ಅವಕಾಶವಿಲ್ಲ. ಜನರು ತಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರು ಜಾಗರೂಕರಾಗಿರಬೇಕು” ಎಂದಿದ್ದಾರೆ.

ಈದ್ ಪ್ರಾರ್ಥನೆಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಆದೇಶ ಹೊರಡಿಸಲಾಗಿಲ್ಲ ಎಂದು ಅಲಿಘರ್ ಎಸ್ಪಿ ಮೃಗಾನಿಕ್ ಶೇಖರ್ ಪಾಠಕ್ ಹೇಳಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ರಾರ್ಥನೆ ಸಲ್ಲಿಸಬಾರದು ಎಂಬ ಯುಪಿ ಸರ್ಕಾರದ ಸಲಹೆಯನ್ನು ನಾವು ಪಾಲಿಸುತ್ತೇವೆ. ಶಾಂತಿ ಸಮಿತಿ ಸಭೆಯನ್ನು ಕರೆಯಲಾಗಿದೆ ಮತ್ತು ಜನರಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನಾವು ಯಾವುದೇ ನಿರ್ದಿಷ್ಟ ಆದೇಶವನ್ನು ಹೊರಡಿಸಿಲ್ಲ ಎಂದು ಹತ್ರಾಸ್ ಎಸ್ಪಿ ಚಿರಂಜೀವ್ ನಾಥ್ ಸಿನ್ಹಾ ಹೇಳಿದ್ದಾರೆ. “ಸಮುದಾಯವನ್ನು ಲೆಕ್ಕಿಸದೆ ಯಾರಿಗೂ ರಸ್ತೆಗಳಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ನಾವು ಅವಕಾಶ ನೀಡುವುದಿಲ್ಲ. ಇದು ಜನರ ಹಬ್ಬ ಮತ್ತು ಅವರು ತಮ್ಮ ಮನೆಯಲ್ಲಿ ಆಚರಿಸಬಹುದು” ಎಂದು ಎಂದಿದ್ದಾರೆ.

ಜನದಟ್ಟಣೆ ಇದ್ದಲ್ಲಿ, ಜನರು ಪಾಳಿಯಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದ್ದೇವೆ ಎಂದು ಗಾಝಿಯಾಬಾದ್ ಪೊಲೀಸರು ತಿಳಿಸಿದ್ದಾರೆ. “ನಾವು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಮಸೀದಿಗಳು ಮತ್ತು ಈದ್ಗಾ ಬಳಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದೇವೆ. ಡ್ರೋನ್‌ಗಳ ಮೂಲಕ ನಿರಂತರ ಕಣ್ಗಾವಲು ಇರುತ್ತದೆ” ಎಂದು ಟ್ರಾನ್ಸ್-ಹಿಂಡನ್‌ನ ಡಿಸಿಪಿ ದಶರಥ್ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.

ಈದ್ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ: ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...