Homeಮುಖಪುಟರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

ರಂಝಾನ್ ಹಬ್ಬದಂದು ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಕ್ರಿಮಿನಲ್ ಕೇಸ್, ಪಾಸ್‌ಪೋರ್ಟ್‌- ಲೈಸನ್ಸ್ ರದ್ದು!

- Advertisement -
- Advertisement -

ಈದುಲ್ ಫಿತರ್ (ರಂಝಾನ್‌) ಹಬ್ಬಕ್ಕೂ ಮುನ್ನ ನಗರದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿರುವ ಉತ್ತರ ಪ್ರದೇಶದ ಮೀರತ್ ಪೊಲೀಸರು, ರಸ್ತೆಯಲ್ಲಿ ನಮಾಝ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಪಾಸ್‌ಪೋರ್ಟ್‌ ಮತ್ತು ಡ್ರೈವಿಂಗ್ ಲೈಸನ್ಸ್ ರದ್ದುಗೊಳಿಸಲಾಗುವುದು ಎಂದಿದ್ದಾರೆ.

ಬುಧವಾರ, ಮೀರತ್ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ವಿಜಯ್ ಕುಮಾರ್ ಸಿಂಗ್ ಅವರಿಗೆ ಎಂಟು ಜನರ ಪಟ್ಟಿಯನ್ನು ಸಲ್ಲಿಸಿದ್ದು, ಅವರು ಕಳೆದ ವರ್ಷದ ಈದ್ ಸಮಯದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಬಾರದು ಎಂಬ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಆ ಎಂಟು ಜನರ ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.

“ಜನರು ಹತ್ತಿರದ ಮಸೀದಿಯಲ್ಲಿ ನಮಾಝ್ ಮಾಡಬೇಕು ಅಥವಾ ಸಮಯಕ್ಕೆ ಸರಿಯಾಗಿ ಈದ್ಗಾ ತಲುಪಬೇಕು ಎಂದು ನಾವು ಮನವಿ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ನಾವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದೇವೆ” ಎಂದು ಮೀರತ್ ನಗರ ಎಸ್ಪಿ ಆಯುಷ್ ವಿಕ್ರಮ್ ಸಿಂಗ್ ಹೇಳಿದ್ದಾರೆ.

“ಕಳೆದ ವರ್ಷ ಈದ್ ಹಬ್ಬದಂದು ಕೆಲವರು ರಸ್ತೆಯಲ್ಲಿ ನಮಾಝ್ ಮಾಡಿದ್ದರು. ನಾವು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಈ ಬಾರಿಯೂ ಯಾರಾದರೂ ಓಪನ್ ಜಾಗದಲ್ಲಿ ಪ್ರಾರ್ಥನೆಗೆ ಕುಳಿತರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾವು ನಿರಂತರವಾಗಿ ಮನವಿ ಮಾಡುತ್ತಿದ್ದೇವೆ” ಎಂದಿದ್ದಾರೆ.

ಒಬ್ಬ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೆ, ಅದು ಅವರ ಲೈಸನ್ಸ್ ಮತ್ತು ಪಾಸ್‌ಪೋರ್ಟ್ ರದ್ದತಿಗೆ ಕಾರಣವಾಗಬಹುದು. ಪ್ರಕರಣ ದಾಖಲಾದ ವ್ಯಕ್ತಿಗೆ ಪಾಸ್‌ಪೋರ್ಟ್ ಅಥವಾ ಲೈಸನ್ಸ್‌ಗೆ ಅರ್ಜಿ ಸಲ್ಲಿಸಲು ಎನ್‌ಒಸಿ (ನಿರಾಕ್ಷೇಪಣಾ ಪ್ರಮಾಣಪತ್ರ) ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿಯಮಗಳನ್ನು ಉಲ್ಲಂಘಿಸುವವರು ಪ್ರಕರಣ ದಾಖಲಿಸುವುದು ಮತ್ತು ಬಂಧನ ಸೇರಿದಂತೆ ತಕ್ಷಣದ ದಂಡನಾತ್ಮಕ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮೀರತ್ ವಲಯದ ಡಿಐಜಿ ಕಲಾನಿಧಿ ನೈಥಾನಿ ಹೇಳಿದ್ದಾರೆ.

ಸಂಭಾಲ್‌ನಲ್ಲಿ, ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಅವರು, ರಸ್ತೆಗಳಲ್ಲಿ ಪ್ರಾರ್ಥನೆ ಸಲ್ಲಿಸುವುದರ ವಿರುದ್ಧ ಪೊಲೀಸರು ಸೂಚನೆ ನೀಡಿದ್ದಾರೆ. ಯಾರೂ ರಸ್ತೆಗಳಲ್ಲಿ ನಮಾಝ್ ಮಾಡಬಾರದು. ಮನೆಗಳಲ್ಲಿ ಸಾಮೂಹಿಕ ನಮಾಝ್‌ಗೆ ಅವಕಾಶವಿಲ್ಲ. ಜನರು ತಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರು ಜಾಗರೂಕರಾಗಿರಬೇಕು” ಎಂದಿದ್ದಾರೆ.

ಈದ್ ಪ್ರಾರ್ಥನೆಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಆದೇಶ ಹೊರಡಿಸಲಾಗಿಲ್ಲ ಎಂದು ಅಲಿಘರ್ ಎಸ್ಪಿ ಮೃಗಾನಿಕ್ ಶೇಖರ್ ಪಾಠಕ್ ಹೇಳಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ರಾರ್ಥನೆ ಸಲ್ಲಿಸಬಾರದು ಎಂಬ ಯುಪಿ ಸರ್ಕಾರದ ಸಲಹೆಯನ್ನು ನಾವು ಪಾಲಿಸುತ್ತೇವೆ. ಶಾಂತಿ ಸಮಿತಿ ಸಭೆಯನ್ನು ಕರೆಯಲಾಗಿದೆ ಮತ್ತು ಜನರಿಗೆ ಸಲಹೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನಾವು ಯಾವುದೇ ನಿರ್ದಿಷ್ಟ ಆದೇಶವನ್ನು ಹೊರಡಿಸಿಲ್ಲ ಎಂದು ಹತ್ರಾಸ್ ಎಸ್ಪಿ ಚಿರಂಜೀವ್ ನಾಥ್ ಸಿನ್ಹಾ ಹೇಳಿದ್ದಾರೆ. “ಸಮುದಾಯವನ್ನು ಲೆಕ್ಕಿಸದೆ ಯಾರಿಗೂ ರಸ್ತೆಗಳಲ್ಲಿ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ನಾವು ಅವಕಾಶ ನೀಡುವುದಿಲ್ಲ. ಇದು ಜನರ ಹಬ್ಬ ಮತ್ತು ಅವರು ತಮ್ಮ ಮನೆಯಲ್ಲಿ ಆಚರಿಸಬಹುದು” ಎಂದು ಎಂದಿದ್ದಾರೆ.

ಜನದಟ್ಟಣೆ ಇದ್ದಲ್ಲಿ, ಜನರು ಪಾಳಿಯಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದ್ದೇವೆ ಎಂದು ಗಾಝಿಯಾಬಾದ್ ಪೊಲೀಸರು ತಿಳಿಸಿದ್ದಾರೆ. “ನಾವು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಮಸೀದಿಗಳು ಮತ್ತು ಈದ್ಗಾ ಬಳಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದೇವೆ. ಡ್ರೋನ್‌ಗಳ ಮೂಲಕ ನಿರಂತರ ಕಣ್ಗಾವಲು ಇರುತ್ತದೆ” ಎಂದು ಟ್ರಾನ್ಸ್-ಹಿಂಡನ್‌ನ ಡಿಸಿಪಿ ದಶರಥ್ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.

ಈದ್ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮುಸ್ಲಿಂ ಬಾಲಕನ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ: ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...