Homeಕರ್ನಾಟಕಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

- Advertisement -
- Advertisement -

ಸೈಬರ್ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ (ಮಾ.28) ಬೆಳಕಿಗೆ ಬಂದಿದೆ.

ಬೀಡಿಯ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾದ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಸಾವಿಗೆ ಶರಣಾದವರು.

ಸೈಬರ್ ವಂಚಕರ ಕಾಟ ತಾಳಲಾರದೆ ಸಾಯುತ್ತಿರುವುದಾಗಿ ಡಿಯಾಗೋ ಅವರು ಬರೆದಿಟ್ಟಿರುವ ಡೆತ್‌ನೋಟ್‌ ಪೊಲೀಸರಿಗೆ ಸಿಕ್ಕಿದೆ ಎಂದು ವರದಿಗಳು ಹೇಳಿವೆ.

ಡಿಯಾಗೋ ನಜರತ್ ಅವರು ಮಹಾರಾಷ್ಟ್ರದ ಸಚಿವಾಲಯದಲ್ಲಿ ಬಿಎಸ್‌ಎನ್‌ಎಲ್‌ ಸಂಸ್ಥೆಯ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಆ ಬಳಿಕ ತಮ್ಮ ಮೂಲ ಊರಾದ ಬೀಡಿಯಲ್ಲಿ ಪತ್ನಿ ಜೊತೆ ವಾಸವಿದ್ದರು. ದಂಪತಿಗೆ ಮಕ್ಕಳಿರಲಿಲ್ಲ.

ಡಿಯಾಗೋ ದಂಪತಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದರು. ಅವರು ಸಮಾಜ ಸೇವೆಗೆ ಹಣ ಖರ್ಚು ಮಾಡುತ್ತಿರುವುದನ್ನು ಗಮನಿಸಿದ ಸೈಬರ್ ವಂಚಕರು ದೆಹಲಿಯಿಂದ ಕರೆ ಮಾಡಿ ಬೆದರಿಸುತ್ತಿದ್ದರು ಎಂದು ವರದಿಯಾಗಿದೆ.

ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ಅನಿಲ್ ಯಾದವ್ ಎಂಬ ವ್ಯಕ್ತಿ ಡಿಯಾಗೋ ದಂಪತಿಯ ಮೊಬೈಲ್‌ಗೆ ಪದೇ ಪದೇ ಕರೆ ಮಾಡುತ್ತಿದ್ದ. “ನಿಮ್ಮ ಮೊಬೈಲ್‌ನಿಂದ ನನಗೆ ಅಶ್ಲೀಲ ಫೋಟೋ, ಸಂದೇಶಗಳು ಬಂದಿವೆ. ನಾನು ಸೈಬರ್ ಸೆಲ್‌ಗೆ ದೂರು ನೀಡುತ್ತೇನೆ” ಎಂದು ಬೆದರಿಸುತ್ತಿದ್ದ. ದಂಪತಿಯಿಂದ 50 ಲಕ್ಷ ರೂಪಾಯಿ ಪಡೆದುಕೊಂಡರೂ ಕಿರುಕುಳ ನಿಲ್ಲಿಸಿರಲಿಲ್ಲ.

ನಂತರ, ಸುಮಿತ ಬಿಸ್ರಾ ಎಂಬ ಹೆಸರಿನಲ್ಲಿ ಕರೆ ಮಾಡಿ, ಅನಿಲ್ ಅವರು ದೂರು ಕೊಟ್ಟಿದ್ದಾರೆ. ಹಾಗಾಗಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ. ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಹಣ ಕೊಡದಿದ್ದರೆ ಅಶ್ಲೀಲ ಫೋಟೋ, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ. ಅವರ ಕಾಟ ತಾಳಲಾರದೆ ಸಾಯುತ್ತಿದ್ದೇವೆ. ನಮ್ಮ ದೇಹಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಮೆಡಿಕಲ್ ಕಾಲೇಜಿಗೆ ಕೊಡಿ ಎಂದು ಡಿಯಾಗೋ ಅವರು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ವರದಿಗಳು ವಿವರಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸೈಬರ್ ವಂಚಕರ ಕಾಟ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಏನಿದು ಡಿಜಿಟಲ್ ಅರೆಸ್ಟ್ ?

ಸೈಬರ್ ವಂಚಕರು ಸಿಬಿಐ, ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ.

ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...