Homeಮುಖಪುಟ‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ...

‘ಕಾಂಗ್ರೆಸ್ ಆಟ’ ಆಡುತ್ತಾ ಸೋಲುತ್ತಿರುವ ಬಿಜೆಪಿ…

- Advertisement -
- Advertisement -

ಕಳೆದ ವಾರ ಮೋದಿಯವರು ಆಡಿದರೆನ್ನಲಾದ ಒಂದು ಮಾತು ಗಮನ ಸೆಳೆದಿತ್ತು. ಮಹಾರಾಷ್ಟ್ರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟುಗಳನ್ನು ಪಡೆದರೂ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯು ಸರ್ಕಾರ ರಚಿಸಿರಲಿಲ್ಲ. ಏಕೆಂದರೆ ಶಿವಸೇನಾದ ಜೊತೆಗೆ ಡೀಲ್ ಕುದುರಲಿಲ್ಲ. ರಾಜ್ಯಪಾಲರ ಬಳಿ ಹೋದ ಬಿಜೆಪಿಯು ಅಧಿಕೃತವಾಗಿ ತಾನು ಸರ್ಕಾರ ರಚಿಸುವುದಿಲ್ಲ ಎಂದು ಹೇಳಿತ್ತು. ಸಂಸತ್ತಿನ ಅಧಿವೇಶನ ಆ ನಂತರ ಆರಂಭವಾಗುವುದರಲ್ಲಿತ್ತು. ಅದಕ್ಕೆ ಮುಂಚೆ ನಡೆದ ಬಿಜೆಪಿ ಸಂಸತ್‌ ಸದಸ್ಯರ ಸಭೆಯಲ್ಲಿ ಪ್ರಧಾನಿ ಮೋದಿಯವರು ಆ ಮಾತನ್ನು ಹೇಳಿದರು. ‘ಮಹಾರಾಷ್ಟ್ರದಲ್ಲಿ ನೋಡಿ, ಸರ್ಕಾರ ರಚಿಸದಿದ್ದರೂ ಪರವಾಗಿಲ್ಲ. ನಾವಾಗಲೇ ಗೆದ್ದಿದ್ದೇವೆ. ಏಕೆಂದರೆ ನಮ್ಮವರು ಯಾರೂ ಬೇಕಾದ್ದನ್ನು ಮಾತಾಡಲಿಲ್ಲ’.

ಅಂದರೆ, ಕಾಂಗ್ರೆಸ್ ಮತ್ತಿತರ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕಾಗಿ ಅನೈತಿಕ ಮೈತ್ರಿಯನ್ನು ಮಾಡಿಕೊಳ್ಳಲು ಹವಣಿಸಿವೆಯೆಂದೂ, ಬಿಜೆಪಿಯು ಶಿವಸೇನೆಯು ‘ನೀತಿಬದ್ಧವಾಗಿ ತನ್ನೊಂದಿಗೆ ಬರದೇ ಇದ್ದರೆ’ ತಾನು ಅಧಿಕಾರದಿಂದ ದೂರವುಳಿಯುವುದಾಗಿಯೂ ತೋರ್ಪಡಿಸಿದ್ದರ ಕುರಿತಾಗಿ ಪ್ರಧಾನಿ ಮಾತಾಡಿದ್ದು ಸ್ಪಷ್ಟವಾಗಿತ್ತು. ವಾಸ್ತವದಲ್ಲಿ ಅಂತಹ ಯಾವ ನೀತಿಗಳೂ ಇಲ್ಲದೇ ವಿರೋಧಪಕ್ಷಗಳನ್ನು ಬೆದರಿಸಿ, ಆಮಿಷವೊಡ್ಡಿ ಅಥವಾ ಯಾವುದಾದರೂ ಒಂದು ಮಾರ್ಗದ ಮೂಲಕ ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತಿರುವುದು ಸ್ಪಷ್ಟ. ಸೈದ್ಧಾಂತಿಕ ವಿರೋಧಿಗಳ ಜೊತೆಗೂ ಅದು ಕೈ ಜೋಡಿಸಿದೆ. ಕರ್ನಾಟಕದಿಂದ ಕಾಶ್ಮೀರದವರೆಗೆ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅದು ನಡೆದಿದೆ.

ಬಹುಕಾಲ ನಡೆಯುತ್ತಾ ಬರುತ್ತಿದ್ದ ಈ ‘ಕಾಂಗ್ರೆಸ್ ಆಟ’ದಲ್ಲಿ ಬಿಜೆಪಿ ಎಲ್ಲ ಸೀಮಾರೇಖೆಗಳನ್ನು ದಾಟಿರುವುದು ಸ್ಪಷ್ಟ. ಹೀಗಿರುವಾಗ ಮಹಾರಾಷ್ಟ್ರದಲ್ಲಿ ಮಾತ್ರ ಅಧಿಕೃತವಾಗಿ ರಾಜ್ಯಪಾಲರ ಬಳಿ ಹೋಗಿ ಸರ್ಕಾರ ರಚಿಸುವುದಿಲ್ಲವೆಂದು ಹೇಳಿದ್ದು ಮತ್ತು ಮೋದಿಯವರು ಅದನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಮೆಯ ಕುರಿತಾಗಿ ಮಾತಾಡಿದ್ದು ವಿಶೇಷವಾಗಿತ್ತು. ‘ಬೇಕಾದಷ್ಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಾಗಿದೆ. ಕೇಂದ್ರದಲ್ಲಂತೂ ನಮ್ಮನ್ನು ಸರಿಗಟ್ಟುವವರಾರೂ ಇಲ್ಲ. ಹಾಗಾಗಿ ಇನ್ನು ಸಾಕು’ ಎಂದೇನಾದರೂ ತೀರ್ಮಾನ ಮಾಡಿಕೊಂಡಿದ್ದರೆ ಅಷ್ಟರಮಟ್ಟಿಗಾದರೂ ಅದು ಒಳ್ಳೆಯದೇ ಆಗಿರುತ್ತಿತ್ತು.

ಹಾಗೆ ನೋಡಿದರೆ ಅಧಿಕಾರ ಹಂಚಿಕೊಳ್ಳಲು ಸಾಕಾಗಿದ್ದ ಮೈತ್ರಿಯನ್ನು ಇಟ್ಟುಕೊಂಡು ಸರ್ಕಾರ ರಚನೆಯ ಹಕ್ಕು ಮಂಡಿಸಲು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ರಾಜ್ಯಪಾಲರಲ್ಲಿ ಹೋಗಲು ಆತುರ ತೋರಿರಲಿಲ್ಲ. ಮೈತ್ರಿ ಮಾಡಿಕೊಳ್ಳಲೂ ಮೀನಮೇಷ ಎಣಿಸಿದ್ದಲ್ಲದೇ, ಅಧಿಕಾರ ಹಂಚಿಕೆಯ ಸೂತ್ರ ಮತ್ತು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಂಡರು. ಅಂದರೆ ಕೂಡಲೇ ಅಧಿಕಾರ ಹಿಡಿದುಬಿಡುವ ಆತುರ ತಮಗೇನೂ ಇಲ್ಲ ಎಂಬಂತೆ ನಡೆದುಕೊಂಡರು.

ಶಿವಸೇನೆ ಜೊತೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅಧಿಕಾರಕ್ಕಾಗಿಯೇ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗಳು ಮುಂದಾದವು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಆರಂಭದ ತೋರ್ಪಡಿಕೆಯ ಹಿಂಜರಿಕೆಯ ನಂತರ ಅವೂ ಪವರ್ ಷೇರಿಂಗ್ ಮಾತುಕತೆಗಳಿಗೆ ಕೂತರು. ಯಾರೂ ಸರ್ಕಾರ ರಚನೆ ಮಾಡಲಾಗದ ಅನಿವಾರ್ಯ ಸ್ಥಿತಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಆಧಾರದ ಮೇಲೆ ಸೇರುತ್ತಿದ್ದೇವಷ್ಟೇ ಎಂದು ಹೇಳಿಕೊಳ್ಳಬಲ್ಲ ಒಂದು ವಾತಾವರಣ ನಿರ್ಮಿಸಿಕೊಳ್ಳುವಷ್ಟಾದರೂ ತಾಳ್ಮೆಯನ್ನು ತೋರಿದರು ಎಂದು ಹೇಳಬಹುದು.

ಆದರೆ, ಮತ್ತೆ ಪ್ರಜಾಪ್ರಭುತ್ವದ ಕನಿಷ್ಠ ನೀತಿ ಸಂಹಿತೆಯ ಎಲ್ಲೆಗಳನ್ನು ಬಿಜೆಪಿ ಮತ್ತೊಮ್ಮೆ ಮೀರಿತು. ಯಾವ ಕಾರಣ ಹೇಳಿದರೂ ‘ಅಧಿಕಾರದಾಹದ ನಿರ್ಲಜ್ಜ ನಡವಳಿಕೆ’ ಎಂದಷ್ಟೇ ವ್ಯಾಖ್ಯಾನಿಸಬಹುದಾದ ಕ್ರಮಗಳಿಗೆ ಮುಂದಾಯಿತು. ರಾಜ್ಯಪಾಲರ ಕಚೇರಿ ಮತ್ತು ರಾಷ್ಟ್ರಪತಿಗಳ ಕಚೇರಿಯನ್ನು ಹಿಂದೆ ಕಾಂಗ್ರೆಸ್ ಬಳಸಿದ ರೀತಿಯಲ್ಲೇ ಅಥವಾ ಇನ್ನೂ ಕೆಟ್ಟದಾಗಿ ಬಳಸಿಕೊಳ್ಳಲಾಯಿತು. ಈ ರೀತಿ ಅಧಿಕಾರ ಹಿಡಿದರೆ ಬಹುಮತ ಗಳಿಸಿಕೊಳ್ಳುವುದು ಕಷ್ಟವೇನಲ್ಲ ಎಂಬುದೇ ಅವರ ಲೆಕ್ಕಾಚಾರವೆಂದು ಎಲ್ಲರಿಗೂ ಗೊತ್ತಿದ್ದ ಸಂಗತಿಯೇ ಆಗಿದೆ.

ಇದನ್ನೂ ಓದಿ: ನಾಳೆಯೇ ಬಹುಮತ ಸಾಬೀತುಮಾಡಿ: ಸುಪ್ರೀಂ ಕೋರ್ಟ್‌ ಆದೇಶ

ಹಾಗಿದ್ದ ಮೇಲೆ ಕೇವಲ ಒಂದು ವಾರದ ಕೆಳಗೆ ಆ ಪಕ್ಷದ ಅತ್ಯುನ್ನತ ನಾಯಕ ಸಾರ್ವಜನಿಕ ಮರ್ಯಾದೆಯ ರೀತಿ-ನೀತಿಗಳ ಕುರಿತು ಮಾತನಾಡಿದರೇಕೆ? ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯನ್ನು ಕರೆಯುವ ಅಗತ್ಯವೂ ಇಲ್ಲದ ವಿಶೇಷ ಅಧಿಕಾರವನ್ನು ಬಳಸಿದರೇಕೆ? ಇನ್ನೂ ಬೆಳಕು ಹರಿಯುವ ಮುನ್ನವೇ ಮಹಾರಾಷ್ಟ್ರದ ರಾಜಭವನದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಗೌಪ್ಯ ರೀತಿಯಲ್ಲಿ ಪ್ರಮಾಣ ವಚನ ಬೋಧಿಸಲಾಗಿದೆ ಎಂದು ಹೆಚ್ಚಿನವರಿಗೆ ಗೊತ್ತಾಗಿದ್ದೇ ಪ್ರಧಾನಮಂತ್ರಿಗಳ ಟ್ವೀಟ್ ಮೂಲಕ. 70,000 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಒಂದು ತಿಂಗಳ ಹಿಂದಿನವರೆಗೂ ತಾವೇ ಆರೋಪಿಸುತ್ತಿದ್ದ ಅಜಿತ್ ಪವಾರ್‌ಜೀಯವರಿಗೂ ಅವರು ಅಭಿನಂದಿಸಿದ್ದರು.

ಅಂದರೆ, ರಾಜಕೀಯ ನೀತಿ ಸಂಹಿತೆಯ ಪ್ರತಿಪಾದನೆ ಮತ್ತು ಪ್ರದರ್ಶನವು ಮುಖ್ಯ ಎಂದು ಮೋದಿಯವರು ಭಾವಿಸುವುದಾದಲ್ಲಿ (ಅವರೇ ಬಿಜೆಪಿ ಸಂಸತ್ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದಂತೆ), ಅದರಲ್ಲಿ ಅವರು ಸೋತಿದ್ದಾರೆ. ಆ ಭಾಷಣದಲ್ಲಿ ಅವರು ಸೂಚಿಸಿದಂತೆ ಜನರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳದಷ್ಟು ದಡ್ಡರಲ್ಲ. ಹಾಗಾಗಿ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಗ್ಗೆ ಅವಿಶ್ವಾಸವು ವ್ಯಕ್ತವಾಗಲು ಆರಂಭವಾಗಿ ಬಹಳ ಕಾಲವಾಯಿತು. ರಾಜ್ಯಗಳಲ್ಲಾಗಲೀ, ಕೇಂದ್ರದಲ್ಲಾಗಲೀ ಜನರು ವಿಶ್ವಾಸವಿಡಬಲ್ಲ ಪರ್ಯಾಯ ಇಲ್ಲದಿರುವುದರಿಂದ ಅವರ ಕೆಲಸ ಸುಲಭವಾಗಿದೆ ಎಂಬುದೂ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...