Homeಮುಖಪುಟಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂ. ಜಿಎಸ್‌ಟಿ ಬಾಕಿ ನೋಟಿಸ್‌ ನೀಡಿದ ಐಟಿ ಇಲಾಖೆ

- Advertisement -
- Advertisement -

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಮೊಟ್ಟೆ, ಜ್ಯೂಸ್ ಮಾರಾಟಗಾರರಿಗೆ ಕೋಟ್ಯಾಂತರ ರೂಪಾಯಿ ಜಿಎಸ್‌ಟಿ ಬಾಕಿ ಇದೆ ಎಂದು ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ತಮ್ಮ ಕುಟುಂಬಗಳಲ್ಲಿ ಏಕೈಕ ಆದಾಯ ಗಳಿಸುವ ವ್ಯಕ್ತಿಗಳಾದ ಈ ಇಬ್ಬರು ಪುರುಷರು, ಐಟಿ ಇಲಾಖೆಯ ನೋಟಿಸ್‌ ನೋಡಿ ಆಘಾತಕ್ಕೊಳಗಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮೊಟ್ಟೆ ಮಾರಾಟಗಾರ ಪ್ರಿನ್ಸ್ ಸುಮನ್ ಅವರಿಗೆ ಸುಮಾರು 50 ಕೋಟಿ ರೂಪಾಯಿಗಳ ವ್ಯವಹಾರಕ್ಕಾಗಿ ನೋಟಿಸ್ ನೀಡಲಾಗಿದೆ. ಸರ್ಕಾರಕ್ಕೆ 6 ಕೋಟಿ ರೂಪಾಯಿ ಜಿಎಸ್‌ಟಿ ಪಾವತಿಸಲು ಬಾಕಿ ಇದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

‘ಪ್ರಿನ್ಸ್ ಎಂಟರ್‌ಪ್ರೈಸಸ್’ ಎಂಬ ಕಂಪನಿಯು 2022ರಲ್ಲಿ ದೆಹಲಿಯ ರಾಜ್ಯ ವಲಯ 3, ವಾರ್ಡ್ 33 ರಲ್ಲಿ ಸುಮನ್ ಅವರ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಈ ಕಂಪನಿಯು ಚರ್ಮ, ಮರ ಮತ್ತು ಕಬ್ಬಿಣದ ವ್ಯಾಪಾರದಲ್ಲಿ ತೊಡಗಿದ್ದು, ಕಳೆದ ಎರಡು ವರ್ಷಗಳಲ್ಲಿ ಬೃಹತ್ ವಹಿವಾಟುಗಳನ್ನು ನಡೆಸಿದೆ ಎಂದು ಐಟಿ ಇಲಾಖೆಯ ನೋಟಿಸ್‌ನಲ್ಲಿ ಹೇಳಲಾಗಿದೆ ಎಂದು ವರದಿ ತಿಳಿಸಿದೆ.

“ನಾನು ಗಾಡಿಯಲ್ಲಿಟ್ಟು ಮೊಟ್ಟೆ ಮಾರುವವ. ದೆಹಲಿಗೆ ಹೋಗಿಲ್ಲ, ಅಲ್ಲಿ ಕಂಪನಿ ಪ್ರಾರಂಭಿಸುವುದಂತೂ ಸಾಧ್ಯವೇ ಇಲ್ಲ” ಎಂದು ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಪಥಾರಿಯಾ ನಗರದಲ್ಲಿ ವಾಸಿಸುವ ಸುಮನ್ ಹೇಳಿದ್ದಾರೆ.

ಸಣ್ಣ ದಿನಸಿ ಅಂಗಡಿ ನಡೆಸುತ್ತಿರುವ ಸುಮನ್‌ ಅವರ ತಂದೆ ಅವರ ತಂದೆ ಧರ್ ಸುಮನ್, “ನಮ್ಮಲ್ಲಿ ನಿಜವಾಗಿಯೂ 50 ಕೋಟಿ ರೂಪಾಯಿ ಇದ್ದರೆ ದೈನಂದಿನ ಖರ್ಚುಗಳನ್ನು ಪೂರೈಸಲು ಏಕೆ ಕಷ್ಟಪಡಬೇಕು?” ಎಂದು ಪ್ರಶ್ನಿಸಿದ್ದಾರೆ.

“ಸುಮನ್ ಅವರ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡಿರಬಹುದು ಎಂದು ಅವರ ಕುಟುಂಬದ ವಕೀಲರು ಶಂಕಿಸಿದ್ದಾರೆ. “ಯಾರೋ ಪ್ರಿನ್ಸ್ ಅವರ ದಾಖಲೆಗಳನ್ನು ವಂಚನೆಯ ಮೂಲಕ ಬಳಸಿಕೊಂಡಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಪೊಲೀಸ್ ಮತ್ತು ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 20ರಂದು ಸುಮನ್‌ ಅವರಿಗೆ ನೀಡಿದ ನೋಟಿಸ್‌ನಲ್ಲಿ, ಐ-ಟಿ ಇಲಾಖೆಯು ಒಟ್ಟು 49.24 ಕೋಟಿ ರೂಪಾಯಿ ಹಣಕಾಸು ವಹಿವಾಟಿನ ವಿವರವನ್ನು ಕೋರಿದೆ. 2022-23ನೇ ಹಣಕಾಸು ವರ್ಷದ ಬಿಲ್‌ಗಳು, ಖರೀದಿ ವೋಚರ್‌ಗಳು, ಸಾರಿಗೆ ದಾಖಲೆಗಳು ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್‌ಗಳಂತಹ ದಾಖಲೆಗಳನ್ನು ಪ್ರಸ್ತುತಪಡಿಸಿವಂತೆ ಸೂಚಿಸಿದೆ.

ಉತ್ತರ ಪ್ರದೇಶದ ಅಲಿಗಢದ ಜ್ಯೂಸ್ ಮಾರಾಟಗಾರ ಎಂ.ಡಿ ರಹೀಸ್ ಎಂಬವರಿಗೂ ಸುಮನ್‌ ಅವರಂತೆ 7.5 ಕೋಟಿ ರೂಪಾಯಿಗೂ ಹೆಚ್ಚು ಜಿಎಸ್‌ಟಿ ಪಾವತಿಸುವಂತೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಇದು ಅವರನ್ನು ಮತ್ತು ಅವರ ಕುಟುಂಬವನ್ನು ಸಂಕಷ್ಟಕ್ಕೆ ದೂಡಿದೆ.

“ಈ ನೋಟಿಸ್ ಏಕೆ ನೀಡಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ. ನಾನು ಜ್ಯೂಸ್ ಮಾತ್ರ ಮಾರಾಟ ಮಾಡುತ್ತೇನೆ. ನಾನು ಇಷ್ಟೊಂದು ಹಣವನ್ನು ಎಂದಿಗೂ ನೋಡಿಲ್ಲ. ಈಗ ನಾನು ಏನು ಮಾಡಬೇಕು?” ರಹೀಸ್ ಪ್ರಶ್ನಿಸಿದ್ದಾರೆ.

“ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನು ಬಡವ. ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

2020-21ರಲ್ಲಿ ರಹೀಸ್ ಹೆಸರಿನಲ್ಲಿ ಕೋಟ್ಯಂತರ ಮೌಲ್ಯದ ನಕಲಿ ವಹಿವಾಟುಗಳು ನಡೆದಿವೆ ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ, ಅವರು ಸರ್ಕಾರಕ್ಕೆ 7,79,02,457 ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.

“ನಾವು ಐಟಿ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ನನ್ನ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗಾದರೂ ಹಂಚಿಕೊಂಡಿದ್ದೀರಾ? ಎಂದು ಕೇಳಿದ್ದಾರೆ. ನಾನು ಅವುಗಳನ್ನು ಯಾರೊಂದಿಗೂ ಹಂಚಿಕೊಂಡಿಲ್ಲ ಎಂದು ಹೇಳಿದೆ” ಎಂದು ಬನ್ನಾ ದೇವಿ ಪೊಲೀಸ್ ಠಾಣೆ ವ್ಯಾಪ್ತಿಯ ತಾರ್ ವಾಲಿ ಗಲಿಯಲ್ಲಿ ವಾಸಿಸುವ ರಹೀಸ್ ಹೇಳಿದ್ದಾರೆ.

“ನಾವು ನಮ್ಮ ದಿನನಿತ್ಯದ ಊಟಕ್ಕೂ ಕಷ್ಟಪಡುತ್ತಿದ್ದೇವೆ… ನಮ್ಮ ಬಳಿ ಅಷ್ಟೊಂದು ಹಣವಿದ್ದರೆ, ನಮ್ಮ ಮಗ ಏಕೆ ಇಷ್ಟೊಂದು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತಿತ್ತು?” ಎಂದು ರಹೀಸ್ ತಾಯಿ ಪ್ರಶ್ನಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಕೋಟ್ಯಾಂತರ ರೂಪಾಯಿ ದೇಣಿಗೆ ನೀಡಲು ರಹೀಸ್ ಅವರ ವೈಯಕ್ತಿಕ ದಾಖಲೆಗಳನ್ನು ವಂಚನೆಯಿಂದ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

“ರಹೀಸ್ ಕೋಟ್ಯಾಧಿಪತಿಯಾಗಿದ್ದರೆ, ಅವರು ಜ್ಯೂಸ್ ಅಂಗಡಿ ನಡೆಸುತ್ತಿದ್ದರೇ? ಇದು ಖಂಡಿತವಾಗಿಯೂ ವಂಚನೆಯ ಪ್ರಕರಣವಾಗಿದೆ” ಎಂದು ಜ್ಯೂಸ್ ರಹೀಸ್ ಅವರ ಸ್ನೇಹಿತ ಸೊಹೈಲ್ ಹೇಳಿದ್ದಾರೆ. |

ಸೌಜನ್ಯ: ndtv.com

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...