Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಆಗುವಂತೆ ಅಮೆರಿಕದ ವಿದೇಶಾಂಗ ಇಲಾಖೆ (ಡಿಒಎಸ್‌) ಈ-ಮೇಲ್ ಕಳುಹಿಸಿದೆ ಎಂದು ವರದಿಯಾಗಿದೆ.

ಪ್ಯಾಲೆಸ್ತೀನ್ ಪರ ಪೋಸ್ಟ್‌ ಹಾಕಿದವರು ಮತ್ತು ಅದಕ್ಕೆ ಬೆಂಬಲ ವ್ಯಕ್ತಪಡಿಸಿದವರಿಗೂ ‘ರಾಷ್ಟ್ರವಿರೋಧಿ’ ಪೋಸ್ಟ್‌ ಹಾಕಲಾಗಿದೆ ಎಂದು ಆರೋಪಿಸಿ ಗಡಿಪಾರು ಆಗುವಂತೆ ಈ-ಮೇಲ್ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಅಮೆರಿಕದಲ್ಲಿ 1.5 ಮಿಲಿಯನ್ ವಿದ್ಯಾರ್ಥಿ ವೀಸಾ ಹೊಂದಿರುವವರಿದ್ದಾರೆ. ಅದರಲ್ಲಿ 3.31 ಲಕ್ಷ ಭಾರತೀಯ ಮತ್ತು 2.77 ಚೀನಾದವರು ಒಳಗೊಂಡಿದ್ದಾರೆ.

ಡಿಒಎಸ್‌ ನಡೆಸಿ ಪರಿಶೀಲನೆ ಆಧರಿಸಿ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಎಫ್‌ (ಶೈಕ್ಷಣಿಕ ಅಧ್ಯಯನ ವೀಸಾ), ಎಂ (ವೃತ್ತಿಪರ ಅಧ್ಯಯನ ವೀಸಾ) ಅಥವಾ ಜೆ (ವಿನಿಮಯ ವೀಸಾ) ಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ, ಅವರ ಸಾಮಾಜಿಕ ಮಾಧ್ಯಮ ಖಾತೆಗಳು ಡಿಒಎಸ್‌ ಪರಿಶೀಲನೆಗೆ ಒಳಪಡಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಮೆರಿಕದ ನ್ಯಾಯ ಮತ್ತು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉಲ್ಲೇಖಿಸಿ, ಆಕ್ಸಿಯೋಸ್ ಮಾಡಿರುವ ವರದಿ ಪ್ರಕಾರ, ಟ್ರಂಪ್ ಆಡಳಿತವು ಕೆಲವು ಕಾಲೇಜುಗಳನ್ನು ‘ಹಮಾಸ್ ಪರ’ ಎಂದು ನಿರ್ಧರಿಸಿದೆ. ಯಾವುದೇ ವಿದೇಶಿ ವಿದ್ಯಾರ್ಥಿಗಳನ್ನು ಆ ಕಾಲೇಜುಗಳು ಸೇರಿಸಿಕೊಳ್ಳದಂತೆ ತಡೆಯಲು ಪ್ರಯತ್ನಿಸುವ ಯೋಜನೆಗಳ ಬಗ್ಗೆ ಚರ್ಚಿಸುತ್ತಿದೆ.

ಟ್ರಂಪ್ ಆಡಳಿತಕ್ಕೆ ಈ ಯೋಚನೆಯು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರ “ಕ್ಯಾಚ್ ಅಂಡ್ ರಿವೋಕ್” ಕಾರ್ಯಕ್ರಮದಿಂದ ಬಂದಿದೆ. ಕ್ಯಾಚ್ ಅಂಡ್ ರಿವೋಕ್ ಕಾರ್ಯಕ್ರಮವು ಗಾಝಾದ ಯುದ್ಧದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಆಕ್ಸಿಯೋಸ್ ವರದಿ ತಿಳಿಸಿದೆ.

“ಕ್ಯಾಚ್ ಅಂಡ್ ರಿವೋಕ್” ಜಾರಿಯಾದ ಮೂರು ವಾರಗಳಲ್ಲಿ 300ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಟ್ರಂಪ್ ಆಡಳಿತ ವಾಕ್‌ ಸ್ವಾತಂತ್ರ್ಯ ಮತ್ತು ನ್ಯಾಯಯುತ ಪ್ರಕ್ರಿಯೆಯನ್ನು ಕಿತ್ತುಕೊಂಡಿದೆ. ಗಾಝಾದಲ್ಲಿ ಆಕ್ರಮಣಕ್ಕೆ ಒಳಗಾದ ಜನರ ಪರ ಧ್ವನಿ ಎತ್ತಿದವರಿಗೆ ಅನ್ಯಾಯವಾಗಿ ಹಮಾಸ್ ನಂಟು ಕಲ್ಪಿಸಿದೆ ಎಂದು ವಿಮರ್ಶಕರು ಆಕ್ಷೇಪಿಸಿದ್ದಾರೆ.

ಹಮಾಸ್ ಪರ ಯಾರಿದ್ದಾರೆ ಎಂಬುದರ ಆಧಾರದ ಮೇಲೆ ಇಡೀ ವಿಶ್ವವಿದ್ಯಾಲಯಗಳನ್ನು ಪ್ರಮಾಣೀಕರಿಸುವ ಪರಿಕಲ್ಪನೆಯು ಆತಂಕಕಾರಿ ಎಂದು ಪಕ್ಷಾತೀತ ವಾಕ್ ಸ್ವಾತಂತ್ರ್ಯ ಗುಂಪಾದ ಫೌಂಡೇಶನ್ ಫಾರ್ ಇಂಡಿವಿಜುವಲ್ ರೈಟ್ಸ್ ಅಂಡ್ ಎಕ್ಸ್‌ಪ್ರೆಶನ್ (FIRE) ಹೇಳಿದೆ.

ಗಡಿಪಾರಾದ ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿನಿ

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿತ್ತು.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

 

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...