Homeಅಂತರಾಷ್ಟ್ರೀಯಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾವು-ನೋವುಗಳು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ಮಂಡಲೆ ಪ್ರದೇಶದಲ್ಲಿ ಸಂಭವಿಸಿವೆ.

ಭೂಕಂಪ ಸಂಭವಿಸಿದ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ. ಭೂಕಂಪದಿಂದ ಮ್ಯಾನ್ಮಾರ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ಸೇತುವೆ, ರಸ್ತೆಗಳಿಗೆ ಹಾನಿಯಾಗಿದೆ.

ಥಾಯ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು ಬಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಥೈಲ್ಯಾಂಡ್‌ ಮತ್ತು ಮ್ಯಾನ್ಮಾರ್ ಎರಡೂ ಕಡೆಯೂ ರಕ್ಷಣಾ ತಂಡಗಳು ಜನರನ್ನು ಅವಶೇಷಗಳ ಅಡಿಯಿಂದ ತೆಗೆಯಲು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.

“ನಗರದಾದ್ಯಂತ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಗಗನಚುಂಬಿ ಕಟ್ಟಡ ಕುಸಿತದಲ್ಲಿ ಬಲಿಯಾಗಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸುವ ಚತುಚಕ್ ವಾರಾಂತ್ಯದ ಮಾರುಕಟ್ಟೆಯ ಬಳಿ ಈ ಬೃಹತ್ ಕಟ್ಟಡ ಕುಸಿತವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ 100ಕ್ಕೂ ಹೆಚ್ಚು ಕಾರ್ಮಿಕರ ಸುಳಿವು ಇನ್ನೂ ಸಿಕ್ಕಿಲ್ಲ” ಎಂದು ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಸುದ್ದಿ ಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ಭಾರತ ಶೋಧ ಮತ್ತು ರಕ್ಷಣಾ ತಂಡ, ವೈದ್ಯಕೀಯ ತಂಡ ಹಾಗೂ ಅಗತ್ಯ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ಕಳುಹಿಸಿದೆ. ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲು ಮತ್ತು ಸಹಾಯ ಮಾಡಲು ಭಾನುವಾರ 50 ಜನರ ತಂಡವನ್ನು ಕಳುಹಿಸುವುದಾಗಿ ಮಲೇಷ್ಯಾ ತಿಳಿಸಿದೆ.
ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆಯು 5 ಮಿಲಿಯನ್ ಡಾಲರ್‌ಗಳ ನೆರವು ನಿಗದಿಪಡಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಟಾಸ್‌ನ ವರದಿಯ ಪ್ರಕಾರ, ರಷ್ಯಾದ ತುರ್ತು ಸಚಿವಾಲಯವು 120 ರಕ್ಷಣಾ ಕಾರ್ಯಕರ್ತರು ಮತ್ತು ಅಗತ್ಯ ಸಾಮಾಗ್ರಿಗಳನ್ನು ಹೊತ್ತ ಎರಡು ವಿಮಾನಗಳನ್ನು ಕಳುಹಿಸಿದೆ. ಚೀನಾ ಕೂಡ ಬದುಕುಳಿದವರಿಗೆ ಕಂಬಳಿ ಮತ್ತು ಆಹಾರವನ್ನು ಕಳುಹಿಸಿದೆ. ಜೊತೆಗೆ ಡ್ರೋನ್‌ಗಳು ಮತ್ತು ಇತರ ಉಪಕರಣಗಳೊಂದಿಗೆ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ ಎಂದು ಎನ್‌ವೈಟಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....