Homeಅಂತರಾಷ್ಟ್ರೀಯಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 1000 ದಾಟಿದ ಮೃತರ ಸಂಖ್ಯೆ

- Advertisement -
- Advertisement -

ಮ್ಯಾನ್ಮಾರ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವಿಗೀಡದವರ ಸಂಖ್ಯೆ 1,000 ದಾಟಿದೆ ಎಂದು ಅಲ್ಲಿನ ಸೇನೆಯನ್ನು ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.

ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ಭೂಕಂಪದಲ್ಲಿ ಗಾಯಗೊಂಡವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾವು-ನೋವುಗಳು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರ ಮತ್ತು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರವಿರುವ ಮಂಡಲೆ ಪ್ರದೇಶದಲ್ಲಿ ಸಂಭವಿಸಿವೆ.

ಭೂಕಂಪ ಸಂಭವಿಸಿದ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ. ಭೂಕಂಪದಿಂದ ಮ್ಯಾನ್ಮಾರ್‌ನ ವಿವಿಧ ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದಿವೆ. ಸೇತುವೆ, ರಸ್ತೆಗಳಿಗೆ ಹಾನಿಯಾಗಿದೆ.

ಥಾಯ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು ಬಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಥೈಲ್ಯಾಂಡ್‌ ಮತ್ತು ಮ್ಯಾನ್ಮಾರ್ ಎರಡೂ ಕಡೆಯೂ ರಕ್ಷಣಾ ತಂಡಗಳು ಜನರನ್ನು ಅವಶೇಷಗಳ ಅಡಿಯಿಂದ ತೆಗೆಯಲು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.

“ನಗರದಾದ್ಯಂತ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ಗಗನಚುಂಬಿ ಕಟ್ಟಡ ಕುಸಿತದಲ್ಲಿ ಬಲಿಯಾಗಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸುವ ಚತುಚಕ್ ವಾರಾಂತ್ಯದ ಮಾರುಕಟ್ಟೆಯ ಬಳಿ ಈ ಬೃಹತ್ ಕಟ್ಟಡ ಕುಸಿತವಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ 100ಕ್ಕೂ ಹೆಚ್ಚು ಕಾರ್ಮಿಕರ ಸುಳಿವು ಇನ್ನೂ ಸಿಕ್ಕಿಲ್ಲ” ಎಂದು ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಸುದ್ದಿ ಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ಭಾರತ ಶೋಧ ಮತ್ತು ರಕ್ಷಣಾ ತಂಡ, ವೈದ್ಯಕೀಯ ತಂಡ ಹಾಗೂ ಅಗತ್ಯ ಸಾಮಗ್ರಿಗಳನ್ನು ಮ್ಯಾನ್ಮಾರ್‌ಗೆ ಕಳುಹಿಸಿದೆ. ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳನ್ನು ಗುರುತಿಸಲು ಮತ್ತು ಸಹಾಯ ಮಾಡಲು ಭಾನುವಾರ 50 ಜನರ ತಂಡವನ್ನು ಕಳುಹಿಸುವುದಾಗಿ ಮಲೇಷ್ಯಾ ತಿಳಿಸಿದೆ.
ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆಯು 5 ಮಿಲಿಯನ್ ಡಾಲರ್‌ಗಳ ನೆರವು ನಿಗದಿಪಡಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಟಾಸ್‌ನ ವರದಿಯ ಪ್ರಕಾರ, ರಷ್ಯಾದ ತುರ್ತು ಸಚಿವಾಲಯವು 120 ರಕ್ಷಣಾ ಕಾರ್ಯಕರ್ತರು ಮತ್ತು ಅಗತ್ಯ ಸಾಮಾಗ್ರಿಗಳನ್ನು ಹೊತ್ತ ಎರಡು ವಿಮಾನಗಳನ್ನು ಕಳುಹಿಸಿದೆ. ಚೀನಾ ಕೂಡ ಬದುಕುಳಿದವರಿಗೆ ಕಂಬಳಿ ಮತ್ತು ಆಹಾರವನ್ನು ಕಳುಹಿಸಿದೆ. ಜೊತೆಗೆ ಡ್ರೋನ್‌ಗಳು ಮತ್ತು ಇತರ ಉಪಕರಣಗಳೊಂದಿಗೆ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ ಎಂದು ಎನ್‌ವೈಟಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ಯಾಲೆಸ್ತೀನ್ ಬೆಂಬಲಿಸಿದ ನೂರಾರು ವಿದ್ಯಾರ್ಥಿಗಳಿಗೆ ಸ್ವಯಂ ಗಡಿಪಾರು ಸೂಚನೆ ನೀಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...