Homeಕರ್ನಾಟಕಒಳ ಮೀಸಲಾತಿ: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

ಒಳ ಮೀಸಲಾತಿ: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

- Advertisement -
- Advertisement -

ರಾಜ್ಯ ನಾಗರಿಕ (ಸಿವಿಲ್) ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆ ಹಿಡಿಯುವಂತೆ ಸಿಬ್ಬಂದಿ ಹಾಗೂ ಅಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಂತೆ 2024ರ ನವೆಂಬರ್ 25ರಂದು ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ, ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಯನ್ನು ಉಲ್ಲಂಘಿಸುತ್ತಿವೆ ಎನ್ನಲಾಗಿದೆ.

ಹಾಗಾಗಿ, ಆದೇಶ ಉಲ್ಲಂಘಿಸಿ ಹೊಸ ಅಧಿಸೂಚನೆ ಹೊರಡಿಸುವ ನೇಮಕಾತಿ ಪ್ರಾಧಿಕಾರಗಳ ವಿರುದ್ದ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಉಪ ಕಾರ್ಯದರ್ಶಿ ಉಮಾ ವರದಯ್ಯ ಶನಿವಾರ (ಮಾ.29) ಸೂಚನೆ ನೀಡಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬರುವವರೆಗೆ ಯಾವುದೇ ಹೊಸ ನೇಮಕಾತಿ ನಡೆಸದಿರಲು ರಾಜ್ಯ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿತ್ತು. ಅದರನ್ವಯ 2024ರ ನವೆಂಬರ್ 25 ರಂದು ಸುತ್ತೋಲೆ ಹೊರಡಿಸಿದ್ದ ಡಿಪಿಎಆರ್, ರಾಜ್ಯ ನಾಗರಿಕ ಸೇವೆಗಳ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಹೊರಡಿಸಬಾರದು ಎಂದು ಸೂಚನೆ ನೀಡಿತ್ತು.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನೇಮಿಸಿದ ರಾಜ್ಯ ಸರ್ಕಾರ ನೇಮಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗ ಮಾರ್ಚ್ 27ರಂದು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಉಪ ಜಾತಿಗಳ ವರ್ಗೀಕರಣಕ್ಕೆ ಹೊಸದಾಗಿ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಶಿಫಾರಸ್ಸು ಮಾಡಿದೆ. ಅದಕ್ಕೆ ಒಪ್ಪಿಗೆ ಸೂಚಿಸಿರುವ ಸರ್ಕಾರ, ಹೊಸ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ನಾಗಮೋಹನದಾಸ್ ಆಯೋಗಕ್ಕೇ ನೀಡಿದ್ದು, ಆಯೋಗದ ಅವಧಿಯನ್ನು ಎರಡು ತಿಂಗಳಿಗೆ ವಿಸ್ತರಿಸಿದೆ.

‘ನ್ಯಾಯಯುತ ಬೇಡಿಕೆ ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನ..’; ನಾಗಮೋಹನ್‌ದಾಸ್‌ ಸಮಿತಿ ಮಧ್ಯಂತರ ವರದಿಗೆ ಎನ್.ಮೂರ್ತಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...