Homeಮುಖಪುಟಸ್ವಘೋಷಿತ ಧರ್ಮಗುರು ವಿರುದ್ಧ ಮತ್ತಿಬ್ಬರು ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪ

ಸ್ವಘೋಷಿತ ಧರ್ಮಗುರು ವಿರುದ್ಧ ಮತ್ತಿಬ್ಬರು ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪ

ಒಂದು ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಮರುದಿನವೇ ಹೊಸ ದೂರು

- Advertisement -
- Advertisement -

ಮೊಹಾಲಿ ನ್ಯಾಯಾಲಯವು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ಒಂದು ದಿನದ ನಂತರ, ಸ್ವಘೋಷಿತ ಕ್ರಿಶ್ಚಿಯನ್ ಧರ್ಮಪ್ರಚಾರಕ ಬಜಿಂದರ್ ಸಿಂಗ್ ವಿರುದ್ಧ ಶನಿವಾರ (ಮಾ.29) ಮತ್ತಿಬ್ಬರು ಮಹಿಳೆಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಅಕಾಲಿ ತಕ್ತ್‌ನ ಅಧಿಕಾರ ನಡೆಸುತ್ತಿರುವ ಗ್ಯಾನಿ ಕುಲದೀಪ್ ಸಿಂಗ್ ಗರ್ಗಾಜ್ ಅವರನ್ನು ಭೇಟಿ ಮಾಡಿದ ಈ ಇಬ್ಬರು ಮಹಿಳೆಯರು ಈ ಮಾಹಿತಿ ನೀಡಿದ್ದಾರೆ. ಪಾದ್ರಿ ಮತ್ತು ಧರ್ಮಪ್ರಚಾರಕ ಎಂದು ಘೋಷಿಸಿಕೊಂಡಿರುವ ಬಜಿಂದರ್, ತನ್ನ ದೇರಾದಲ್ಲಿ (ಕಾನ್ವೆಂಟ್) ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಅಕಾಲಿ ತಕ್ತ್‌ನ ಕಾರ್ಯಾಲಯ ಹೊರಡಿಸಿದ ಪ್ರಕಟಣೆಯಲ್ಲಿ ವಿವರಿಸಲಾಗಿದೆ. ಈ ಸಂಬಂಧ ಪಂಜಾಬ್ ಪೊಲೀಸರು ಎಫ್ಐಆರ್ ದಾಖಲಿಸಿರುವುದನ್ನೂ ಅಕಾಲಿ ತಕ್ತ್ ದೃಢಪಡಿಸಿದೆ.

ಎಫ್ಐಆರ್ ದಾಖಲಿಸಿದ ಬಳಿಕವೂ ಪಾದ್ರಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದ ಕಾರಣ ತಮಗೆ ಬೆದರಿಕೆ ಹಾಕಲಾಗುತ್ತಿತ್ತು ಮತ್ತು ದಾಳಿ ನಡೆದಿತ್ತು ಎಂದು ಮಹಿಳೆಯರು ದೂರಿದ್ದಾರೆ. ಈ ಹಿನ್ನೆಲೆ ಅವರು ನೆರವಿಗಾಗಿ ಅಕಾಲಿ ತಕ್ತ್‌ಗೆ ಮನವಿ ಮಾಡಿಕೊಂಡಿದ್ದಾಗಿ ತಿಳಿಸಿದೆ.

ಪಾದ್ರಿಯ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಲದೀಪ್ ಸಿಂಗ್ ಗರ್ಗಾಜ್, ಆರೋಪಿಗಳ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಇಬ್ಬರು ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಪಂಜಾಬ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಹಿಳೆಯರು ತಮಗಾದ ಅನ್ಯಾಯ ತಿಳಿಸಲು ಮುಂದೆ ಬಂದ ಧೈರ್ಯವನ್ನು ಜಥೇದಾರ್ ಶ್ಲಾಘಿಸಿದ್ದು, ಅವರಿಗೆ ಬೆಂಬಲ ನೀಡುವ ಭರವಸೆ ಕೊಟ್ಟಿದ್ದಾರೆ. ಗುರುಸಾಹಿಬ್ ನಲ್ಲಿ ನಂಬಿಕೆ ಇಡುವಂತೆ ಮಹಿಳೆಯರಿಗೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಒಬ್ಬರು ಮಹಿಳೆ, “ಬಜಿಂದರ್ ಮಹಿಳೆಯೊಬ್ಬರಿಗೆ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಮಹಿಳೆ ನಾನೆ. ಜಥೇದಾರ್ ಅವರನ್ನು ಭೇಟಿಯಾದ ಬಳಿಕ ನಮಗೆ ನ್ಯಾಯ ಸಿಗುವ ವಿಶ್ವಾಸ ಮೂಡಿದೆ. ನಾವು ಹಲವರ ಬಳಿ ಸಹಾಯ ಕೇಳಿದ್ದೇವೆ. ಕೆಲವರು ಸಹಾಯ ಮಾಡಿದ್ದಾರೆ, ಇನ್ನು ಕೆಲವರು ನಿರ್ಲಕ್ಷಿಸಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಬಜಿಂದರ್ ಅವರ ಚರ್ಚ್‌ಗೆ ಹೋಗುತ್ತಿದ್ದೆ. ಕಳೆದ ಆರೇಳು ವರ್ಷಗಳಿಂದ ಅವರ ಡೇರಾದಲ್ಲಿ ಸೇವೆ ಮಾಡಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

ಜೈಲು ಸೇರಿದ ಬಜಿಂದರ್

2018ರ ಅತ್ಯಾಚಾರ ಪ್ರಕರಣವೊಂದರಲ್ಲಿ ತಪ್ಪಿತಸ್ಥನೆಂದು ಸಾಬೀತಾದ ನಂತರ ಶುಕ್ರವಾರ (ಮಾ.29) ಬಜಿಂದರ್ ಸಿಂಗ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಪಂಜಾಬ್‌ನ ಮೊಹಾಲಿಯ ನ್ಯಾಯಾಲಯವು ಪಾದ್ರಿಯನ್ನು ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಘೋಷಿಸಿದೆ. ಇದೇ ಪ್ರಕರಣದ ಇತರ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2018ರಲ್ಲಿ ಪಂಜಾಬ್‌ನ ಜಿರಾಕ್‌ಪುರದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ದಾಖಲಾದ ಪ್ರಕರಣದ ವಿಚಾರಣೆಗಾಗಿ ಮಾರ್ಚ್ 29 ರಂದು ಪಾದ್ರಿ ಬಜಿಂದರ್ ಸಿಂಗ್ ಸೇರಿದಂತೆ ಆರು ಆರೋಪಿಗಳು ಮೊಹಾಲಿಯ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವಿಚಾರಣೆ ವೇಳೆ ಪಾದ್ರಿಯ ಬೆಂಬಲಿಗರು ಪ್ರತಿಭಟನೆ ನಡೆಸಿದರೆ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗಬಹುದು ಎಂದು ನಿರೀಕ್ಷಿಸಿ, ನ್ಯಾಯಾಲಯದ ಒಳಗೆ ಮತ್ತು ಹೊರಗೆ ಸುಮಾರು 150 ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ನ್ಯಾಯಾಲಯ ತಪ್ಪಿತಸ್ಥ ಎಂದು ಘೋಷಣೆ ಮಾಡುತ್ತಿದ್ದಂತೆ ಪಾದ್ರಿಯನ್ನು ಪೊಲೀಸರು ತಕ್ಷಣ ರೋಪರ್ ಜೈಲಿಗೆ ಕರೆದೊಯ್ದಿದ್ದಾರೆ.

ಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...