Homeಮುಖಪುಟಸ್ವಘೋಷಿತ ಧರ್ಮಗುರು ವಿರುದ್ಧ ಮತ್ತಿಬ್ಬರು ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪ

ಸ್ವಘೋಷಿತ ಧರ್ಮಗುರು ವಿರುದ್ಧ ಮತ್ತಿಬ್ಬರು ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪ

ಒಂದು ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಮರುದಿನವೇ ಹೊಸ ದೂರು

- Advertisement -
- Advertisement -

ಮೊಹಾಲಿ ನ್ಯಾಯಾಲಯವು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ಒಂದು ದಿನದ ನಂತರ, ಸ್ವಘೋಷಿತ ಕ್ರಿಶ್ಚಿಯನ್ ಧರ್ಮಪ್ರಚಾರಕ ಬಜಿಂದರ್ ಸಿಂಗ್ ವಿರುದ್ಧ ಶನಿವಾರ (ಮಾ.29) ಮತ್ತಿಬ್ಬರು ಮಹಿಳೆಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಅಕಾಲಿ ತಕ್ತ್‌ನ ಅಧಿಕಾರ ನಡೆಸುತ್ತಿರುವ ಗ್ಯಾನಿ ಕುಲದೀಪ್ ಸಿಂಗ್ ಗರ್ಗಾಜ್ ಅವರನ್ನು ಭೇಟಿ ಮಾಡಿದ ಈ ಇಬ್ಬರು ಮಹಿಳೆಯರು ಈ ಮಾಹಿತಿ ನೀಡಿದ್ದಾರೆ. ಪಾದ್ರಿ ಮತ್ತು ಧರ್ಮಪ್ರಚಾರಕ ಎಂದು ಘೋಷಿಸಿಕೊಂಡಿರುವ ಬಜಿಂದರ್, ತನ್ನ ದೇರಾದಲ್ಲಿ (ಕಾನ್ವೆಂಟ್) ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಅಕಾಲಿ ತಕ್ತ್‌ನ ಕಾರ್ಯಾಲಯ ಹೊರಡಿಸಿದ ಪ್ರಕಟಣೆಯಲ್ಲಿ ವಿವರಿಸಲಾಗಿದೆ. ಈ ಸಂಬಂಧ ಪಂಜಾಬ್ ಪೊಲೀಸರು ಎಫ್ಐಆರ್ ದಾಖಲಿಸಿರುವುದನ್ನೂ ಅಕಾಲಿ ತಕ್ತ್ ದೃಢಪಡಿಸಿದೆ.

ಎಫ್ಐಆರ್ ದಾಖಲಿಸಿದ ಬಳಿಕವೂ ಪಾದ್ರಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದ ಕಾರಣ ತಮಗೆ ಬೆದರಿಕೆ ಹಾಕಲಾಗುತ್ತಿತ್ತು ಮತ್ತು ದಾಳಿ ನಡೆದಿತ್ತು ಎಂದು ಮಹಿಳೆಯರು ದೂರಿದ್ದಾರೆ. ಈ ಹಿನ್ನೆಲೆ ಅವರು ನೆರವಿಗಾಗಿ ಅಕಾಲಿ ತಕ್ತ್‌ಗೆ ಮನವಿ ಮಾಡಿಕೊಂಡಿದ್ದಾಗಿ ತಿಳಿಸಿದೆ.

ಪಾದ್ರಿಯ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಕುಲದೀಪ್ ಸಿಂಗ್ ಗರ್ಗಾಜ್, ಆರೋಪಿಗಳ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಇಬ್ಬರು ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಪಂಜಾಬ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಹಿಳೆಯರು ತಮಗಾದ ಅನ್ಯಾಯ ತಿಳಿಸಲು ಮುಂದೆ ಬಂದ ಧೈರ್ಯವನ್ನು ಜಥೇದಾರ್ ಶ್ಲಾಘಿಸಿದ್ದು, ಅವರಿಗೆ ಬೆಂಬಲ ನೀಡುವ ಭರವಸೆ ಕೊಟ್ಟಿದ್ದಾರೆ. ಗುರುಸಾಹಿಬ್ ನಲ್ಲಿ ನಂಬಿಕೆ ಇಡುವಂತೆ ಮಹಿಳೆಯರಿಗೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಒಬ್ಬರು ಮಹಿಳೆ, “ಬಜಿಂದರ್ ಮಹಿಳೆಯೊಬ್ಬರಿಗೆ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಮಹಿಳೆ ನಾನೆ. ಜಥೇದಾರ್ ಅವರನ್ನು ಭೇಟಿಯಾದ ಬಳಿಕ ನಮಗೆ ನ್ಯಾಯ ಸಿಗುವ ವಿಶ್ವಾಸ ಮೂಡಿದೆ. ನಾವು ಹಲವರ ಬಳಿ ಸಹಾಯ ಕೇಳಿದ್ದೇವೆ. ಕೆಲವರು ಸಹಾಯ ಮಾಡಿದ್ದಾರೆ, ಇನ್ನು ಕೆಲವರು ನಿರ್ಲಕ್ಷಿಸಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಬಜಿಂದರ್ ಅವರ ಚರ್ಚ್‌ಗೆ ಹೋಗುತ್ತಿದ್ದೆ. ಕಳೆದ ಆರೇಳು ವರ್ಷಗಳಿಂದ ಅವರ ಡೇರಾದಲ್ಲಿ ಸೇವೆ ಮಾಡಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

ಜೈಲು ಸೇರಿದ ಬಜಿಂದರ್

2018ರ ಅತ್ಯಾಚಾರ ಪ್ರಕರಣವೊಂದರಲ್ಲಿ ತಪ್ಪಿತಸ್ಥನೆಂದು ಸಾಬೀತಾದ ನಂತರ ಶುಕ್ರವಾರ (ಮಾ.29) ಬಜಿಂದರ್ ಸಿಂಗ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಪಂಜಾಬ್‌ನ ಮೊಹಾಲಿಯ ನ್ಯಾಯಾಲಯವು ಪಾದ್ರಿಯನ್ನು ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಘೋಷಿಸಿದೆ. ಇದೇ ಪ್ರಕರಣದ ಇತರ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2018ರಲ್ಲಿ ಪಂಜಾಬ್‌ನ ಜಿರಾಕ್‌ಪುರದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ದಾಖಲಾದ ಪ್ರಕರಣದ ವಿಚಾರಣೆಗಾಗಿ ಮಾರ್ಚ್ 29 ರಂದು ಪಾದ್ರಿ ಬಜಿಂದರ್ ಸಿಂಗ್ ಸೇರಿದಂತೆ ಆರು ಆರೋಪಿಗಳು ಮೊಹಾಲಿಯ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವಿಚಾರಣೆ ವೇಳೆ ಪಾದ್ರಿಯ ಬೆಂಬಲಿಗರು ಪ್ರತಿಭಟನೆ ನಡೆಸಿದರೆ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗಬಹುದು ಎಂದು ನಿರೀಕ್ಷಿಸಿ, ನ್ಯಾಯಾಲಯದ ಒಳಗೆ ಮತ್ತು ಹೊರಗೆ ಸುಮಾರು 150 ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಚ್ಚಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ನ್ಯಾಯಾಲಯ ತಪ್ಪಿತಸ್ಥ ಎಂದು ಘೋಷಣೆ ಮಾಡುತ್ತಿದ್ದಂತೆ ಪಾದ್ರಿಯನ್ನು ಪೊಲೀಸರು ತಕ್ಷಣ ರೋಪರ್ ಜೈಲಿಗೆ ಕರೆದೊಯ್ದಿದ್ದಾರೆ.

ಮಹಾರಾಷ್ಟ್ರ | ಹಾಸ್ಯನಟ ಕುನಾಲ್ ಕಾಮ್ರಾ ವಿರುದ್ಧ ಇನ್ನೂ 3 ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...