Homeಮುಖಪುಟಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ 'ಫರೀಷಾ ಆಬಿದ್': ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

- Advertisement -
- Advertisement -

‘ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ ಗಲ್ಲಿಗೂ ಮಾದಕ ವಸ್ತುಗಳು ಕಾಲಿಟ್ಟಿದೆ. ಯುವಜನರು ಅವುಗಳಿಗೆ ದಾಸರಾಗಿ ಜೀವನ, ಜೀವ ಕಳೆದುಕೊಳ್ಳುತ್ತಿದ್ದಾರೆ.

ಕೇರಳದಲ್ಲಿ ಮಾದಕ ವಸ್ತುಗಳು ಮಕ್ಕಳ ಪೋಷಕರಿಂದ ಹಿಡಿದು ಸರ್ಕಾರದವರೆಗೆ ಎಲ್ಲರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ. ಯುವಜನರು ಮಾದಕ ವಸ್ತುಗಳಿಗೆ ದಾಸರಾಗಿ ಹೆತ್ತ ತಂದೆ-ತಾಯಿಯನ್ನು ಕೊಲೆ ಮಾಡುವಂತಹ ಪ್ರಕರಣಗಳು ವರದಿಯಾಗುತ್ತಿವೆ.

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಣ್ಣೂರು ಜಿಲ್ಲೆಯ ಮಾಟೂಲ್ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಫರೀಷಾ ಆಬಿದ್ ಅವರು ಪ್ರಾರಂಭಿಸಿದ ಕಾರ್ಯಕ್ರಮವೊಂದು ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಎಲ್ಲಾ ವರ್ಗದ ಜನ ಸಮೂಹ ಫರೀಷಾ ಅವರ ಬೆನ್ನಿಗೆ ನಿಂತಿದ್ದಾರೆ.

ಈ ಹಿಂದೆ ಶಿಕ್ಷಕಿಯಾಗಿದ್ದ ಈಗ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಫರೀಷಾ ಆಬಿದ್ ಅವರು, ಕಳೆದ ಎರಡು ತಿಂಗಳ ಹಿಂದೆ ಮಾದಕ ವಸ್ತುಗಳ ವಿರುದ್ದ ‘ಧೀರ’ ಎಂಬ ಹೆಸರಿನ ಕಾರ್ಯಕ್ರಮ ಆರಂಭಿಸಿದ್ದಾರೆ. ಆರಂಭದಲ್ಲಿ ಕೆಲ ಯುವಕರನ್ನು ಸೇರಿಸಿ ವಾಟ್ಸಾಪ್‌ ಗ್ರೂಪ್‌ ಮೂಲಕ ಆರಂಭವಾದ ಈ ಕಾರ್ಯಕ್ರಮ ಈಗ ದೊಡ್ಡ ಅಭಿಯಾನವಾಗಿ ಮಾರ್ಪಟ್ಟಿದೆ. ಜನ ಸಮುದಾಯ ಈ ಅಭಿಯಾನಕ್ಕೆ ಅಪೂರ್ವ ಬೆಂಬಲ ವ್ಯಕ್ತಪಡಿಸಿದ್ದು, ಮಾಟೂಲ್‌ನ ಪಕ್ಕದ ಮಾಡಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯವರೂ ಸೇರಿದಂತೆ 800 ಸ್ವಯಂ ಸೇವಕರ ಪಡೆ ರಚನೆಯಾಗಿದೆ.

ಈ ಸ್ವಯಂ ಸೇವಕರು ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆಯ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಫರೀಷಾ ಅವರ ತಂಡ ಮುಂದಿನ ದಿನಗಳಲ್ಲಿ ಗುಪ್ತ ಮಾದಕವಸ್ತು ಚಟುವಟಿಕೆಗಳನ್ನು ಪತ್ತೆಹಚ್ಚಲು ಥರ್ಮಲ್ ಸ್ಕ್ಯಾನಿಂಗ್‌ನೊಂದಿಗೆ ಡ್ರೋನ್ ಕಣ್ಗಾವಲು ಪರಿಚಯಿಸುವ ಯೋಚನೆಯಲ್ಲಿದೆ.

ಶಿಕ್ಷಕರು, ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ವಕೀಲರು, ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಗರಿಕರು ಫರೀಷಾ ಅವರ ‘ಧೀರ’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಪರಿಣಾಮ ಮಾದಕವಸ್ತು ಪ್ರಕರಣಗಳಲ್ಲಿ ಭಾಗಿಯಾಗಿರುವ ಕನಿಷ್ಠ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಮತ್ತು ವ್ಯಸನದಿಂದ ಬಳಲುತ್ತಿರುವ ಹಲವಾರು ಜನರನ್ನು ಗುರುತಿಸಿ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.

ಯಾವುದೇ ಗಂಡು-ಹೆಣ್ಣಿನ ಮದುವೆಗೂ ಮುನ್ನ ಅವರನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಬೇಕು ಎಂದು ಧಾರ್ಮಿಕ ಸಂಸ್ಥೆಗಳು, ನಾಯಕರ ಮೂಲಕ ಸಾರ್ವಜನಿಕರಿಗೆ ಧೀರ ಅಭಿಯಾನ ಸಲಹೆ ನೀಡಿದೆ. ಈ ಮೂಲಕ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೌಟುಂಬಿಕ ಕಲಹಗಳನ್ನು ತಪ್ಪಿಸುವ ಪ್ರಯತ್ನದಲ್ಲಿದೆ.

ಆರಂಭದಲ್ಲಿ ಮಾಟೂಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡ ಧೀರ ಅಭಿಯಾನದೊಂದಿಗೆ ಈಗ ಪಕ್ಕದ ಮಾಡಾಯಿ ಗ್ರಾಮಸ್ಥರು ಕೈ ಜೋಡಿಸಿದ್ದಾರೆ. ಹಾಗಾಗಿ, ಧೀರ ತಂಡದ ಹೆಸರನ್ನು ಈಗ “ಧೀರ : ಮಾಟ್ಟೂಲ್-ಮಾಡಾಯಿ ಕೂಟಾಯಿಮ” (Dheera: Mattool-Madayi Collective) ಎಂದು ಬದಲಾಯಿಸಲಾಗಿದೆ.

“ಮಾದಕ ವಸ್ತುಗಳ ಸಾಗಣೆ ಮತ್ತು ಸೇವನೆ ಬಗ್ಗೆ ಮಾಹಿತಿಯಿದ್ದರೂ ಅದರ ಬಗ್ಗೆ ಮಾತನಾಡಲು ಜನರು ಹೆದರುತ್ತಿದ್ದರು. ನಮ್ಮ ಅಭಿಯಾನ, ಜನರು ಮುಂದೆ ಬಂದು ಮಾತನಾಡಲು ಪ್ರೋತ್ಸಾಹಿಸಿದೆ. ಮಾದಕವಸ್ತು ವಲಯಗಳು, ಮಾರಾಟಗಾರರು ಮತ್ತು ಬಳಕೆದಾರರ ಬಗ್ಗೆ ಪ್ರಮುಖ ಮಾಹಿತಿಯನ್ನು ಒದಗಿಸುತ್ತಿದ್ದಾರೆ” ಫರೀಷಾ ಹೇಳುತ್ತಾರೆ.

ಧೀರ ಅಭಿಯಾನ ಕೇವಲ ಮಾದಕ ವಸ್ತು ಪೂರೈಕೆ ಮಾಡುವವರನ್ನು ಹಿಡಿದು ಕೊಡುವ ಕೆಲಸ ಮಾತ್ರ ಮಾಡುತ್ತಿಲ್ಲ. ಅಭಿಯಾನದ ಭಾಗವಾಗಿ ಶಾಲೆ, ಪಂಚಾಯತ್ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕರಪತ್ರಗಳನ್ನು ವಿತರಿಸಿ ಜನರಿಗೆ ವಿಷಯದ ಗಂಭೀರತೆ ಅರ್ಥ ಮಾಡಿಸಲಾಗುತ್ತಿದೆ. ಇತ್ತೀಚೆಗೆ ವಲಸೆ ಕಾರ್ಮಿಕರು ಮಾದಕ ವಸ್ತು ಪೂರೈಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಕಾರಣ, ಹಿಂದಿಯಲ್ಲಿ ಕರಪತ್ರ ಮುದ್ರಿಸಿ ವಲಸೆ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.

ಮಾದಕವಸ್ತು ಸೇವನೆ ಮಾಡುವವರಿಗೆ ಜಾಗದ ವ್ಯವಸ್ಥೆ ಮಾಡಿಕೊಡುವ ಕೆಲ ಆಸ್ತಿ ಮಾಲೀಕರಿಗೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಧೀರ ತಂಡ ಎಚ್ಚರಿಕೆ ನೀಡಿದೆ. ಮಾದಕವಸ್ತು ವ್ಯಾಪಾರದ ಮೇಲೆ ಸಂಘಟಿತ ಕ್ರಮ ಕೈಗೊಳ್ಳಲು ಧೀರ ತಂಡ ಪಳಯಂಗಡಿ ಪೊಲೀಸರು ಮತ್ತು ಜಿಲ್ಲಾ ಅಬಕಾರಿ ತಂಡದೊಂದಿಗೆ ನಿಕಟವಾಗಿ ಸಹಕರಿಸುತ್ತಿದೆ.

ಮಾದಕವಸ್ತು ವಿರುದ್ದ ಬೀದಿಗಳಿದ ಬಳಿಕ ಫರೀಷಾ ಅವರಿಗೆ ಹಲವಾರು ಬೆದರಿಕೆ ಕರೆಗಳು ಬಂದಿವೆಯಂತೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕಿ ಅವರ ಮಾನಹಾನಿ ಮಾಡುವ ಪ್ರಯತ್ನಗಳು ಆಗಿವೆ. ಕೆಲವರು ಫರೀಷಾ ಅವರ ಮಕ್ಕಳು ಮತ್ತು ಕುಟುಂಬಸ್ಥರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಫರೀಷಾ ಈಗಾಗಲೇ ಪಳಯಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...