Homeಮುಖಪುಟತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

- Advertisement -
- Advertisement -

ತಮಿಳುನಾಡಿನಲ್ಲಿ 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿದೆ. ಮುಂದಿನ 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಒಂದಾಗಲು ಹೊರಟಿದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ, ಅಣ್ಣಾಮಲೈಗೆ ಬಿಜೆಪಿ ಅಧ್ಯಕ್ಷ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎಂದು indianexpress.com ವರದಿ ಮಾಡಿದೆ.

ಮುಂದಿನ ಚುನಾವಣೆಗೆ ಎಐಎಡಿಎಂಕೆ ಮತ್ತು ಬಿಜೆಪಿ ಜಾತಿ ಲೆಕ್ಕಾಚಾರ ಹಾಕಿದೆಯಂತೆ. ಅದರಂತೆ, ಎಐಎಡಿಎಂಕೆ ಮತ್ತು ಬಿಜೆಪಿ ಎರಡೂ ಪಕ್ಷಗಳ ಮುಖ (ಫೇಸ್‌) ಆಗಿ ‘ಗೌಂಡರ್’ ಸಮುದಾಯದವರು  ಮುಂದುವರೆಯುವುದು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿಲ್ಲ. ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರಂತೆಯೇ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಕೂಡ ಪ್ರಬಲ ಹಿಂದುಳಿದ ಸಮುದಾಯಕ್ಕೆ ಸೇರಿದವರು ಮತ್ತು ಪಶ್ಚಿಮ ಕೊಂಗು ಪ್ರದೇಶವರು (ಇಲ್ಲಿ ಗೌಂಡರ್‌ಗಳು ಪ್ರಬಲರು).

ಮೈತ್ರಿ ಮಾತುಕತೆಯ ಮೊದಲ ಹೆಜ್ಜೆಯಾಗಿ ಎಐಎಡಿಎಂಕೆಯ ಪಳನಿಸ್ವಾಮಿಯವರು ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಈ ಬೆನ್ನಲ್ಲೇ ಅಣ್ಣಾಮಲೈ ಕೂಡ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅಣ್ಣಾಮಲೈ ಅವರೇ ಎರಡೂ ಪಕ್ಷಗಳ ನಾಯಕರು ಒಂದೇ ಸಮುದಾಯವರು ಆಗಿರುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಹಾಗಾಗಿ, ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ಸಮುದಾಯದ ಒಬ್ಬರನ್ನು ನೇಮಿಸುವ ಯೋಚನೆಯಲ್ಲಿದೆ. ಅಣ್ಣಾಮಲೈಗೆ ರಾಷ್ಟ್ರೀಯ ಬಿಜೆಪಿಯಲ್ಲಿ ಹೈಕಮಾಂಡ್ ಸ್ಥಾನ ಕೊಡುವ ಸಾಧ್ಯತೆ ಇದೆ.

ಒಂದು ವೇಳೆ ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೆ, ಆ ಸ್ಥಾನಕ್ಕೆ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ನೇಮಕಗೊಳ್ಳುವ ಸಾಧ್ಯತೆ ಇದೆ. ಜಯಲಲಿತಾ ಅವರ ನಾಯಕತ್ವದಡಿಯಲ್ಲಿ ಎಐಎಡಿಎಂಕೆಯಲ್ಲಿದ್ದ ಪ್ರಭಾವಿ ತೇವರ್ ಸಮುದಾಯಕ್ಕೆ ಸೇರಿದ ತಿರುನಲ್ವೇಲಿಯ ಜನಪ್ರಿಯ ನಾಯಕರಾಗಿದ್ದಾರೆ ಈ ನಾಗೇಂದ್ರನ್‌. ಈ ಹಿಂದೆ ಜಯಲಲಿತಾ ಅವರ ಆಪ್ತೆ ವಿ. ಕೆ ಶಶಿಕಲಾ ಮೂಲಕ ಎಐಎಡಿಎಂಕೆ ತೇವರ್ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಂಡಿತ್ತು.

“ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಅವರಿಗೆ ಕೊಡುವ ಶಿಕ್ಷೆಯಲ್ಲ ಅಥವಾ ಹಿಂಬಡ್ತಿಯೂ ಅಲ್ಲ. ಬಿಜೆಪಿ ಪಶ್ಚಿಮ ತಮಿಳುನಾಡಿನ ಆಚೆಗೂ ತನ್ನ ಹಿಡಿತವನ್ನು ಬಲಪಡಿಸಲು ಬಯಸುತ್ತಿದೆ. ನಾಗೇಂದ್ರನ್ ಅವರಂತಹ ತೇವರ್ ಸಮುದಾಯದ ನಾಯಕನಿಗೆ ಪಕ್ಷದ ಚುಕ್ಕಾಣಿ ಕೊಡುವುದರಿಂದ ದಕ್ಷಿಣ ಜಿಲ್ಲೆಗಳು ಮತ್ತು ಅದರಾಚೆಗೆ ಬಿಜೆಪಿ ತನ್ನ ಪ್ರಭಾವವನ್ನು ವಿಸ್ತರಿಸಲು ಸಹಾಯವಾಗುತ್ತದೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ಡಿಎಂಕೆಯ ಭದ್ರಕೋಟೆಯನ್ನು ಬೇಧಿಸಬೇಕಿದೆ” ಎಂದು ಬಿಜೆಪಿ ನಾಯಕರೊಬ್ಬರು ಹೇಳಿರುವುದಾಗಿ indianexpress.com ವರದಿ ತಿಳಿಸಿದೆ.

ಭಾನುವಾರ ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಣ್ಣಾಮಲೈ, ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟದ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದು, “ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಒಂದು ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ನೀವು ಅದನ್ನೇ ಪಕ್ಷದ ಅಂತಿಮ ಅಭಿಪ್ರಾಯವಾಗಿ ತೆಗೆದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್‌ಗೆ ತಮಿಳುನಾಡಿನ ವಿವರವಾದ ರಾಜಕೀಯ ಅಧ್ಯಯನ ನೀಡುವಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅಣ್ಣಾಮಲೈ “ಒಬ್ಬ ಕೇಡರ್ ಮತ್ತು ನಾಯಕನಾಗಿ, ನಾನು ಸೂಕ್ಷ್ಮ ವಿಶ್ಲೇಷಣೆಯನ್ನು ಮಾಡಿದ್ದೇನೆ ಮತ್ತು ರಾಜ್ಯ ಘಟಕದ ಪ್ರಸ್ತುತ ಸ್ಥಿತಿ ಮತ್ತು ಅದು ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಪುರಾವೆಗಳೊಂದಿಗೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ವಿವರಿಸಿದ್ದೇನೆ” ಎಂದಿದ್ದಾರೆ.

ತಮಿಳುನಾಡಿನ ಚುನಾವಣಾ ವ್ಯವಸ್ಥೆಯನ್ನು ಐದು ವಲಯಗಳ ಮೂಲಕ ವಿವರಿಸಿದ ಅಣ್ಣಾಮಲೈ, ಬಿಜೆಪಿ ಪಶ್ಚಿಮ ಪ್ರದೇಶದಲ್ಲಿ (54 ಸ್ಥಾನಗಳು) ಮತ್ತು ದಕ್ಷಿಣ ಜಿಲ್ಲೆಗಳಲ್ಲಿ (60 ಸ್ಥಾನಗಳು) ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. 150 ಸ್ಥಾನಗಳನ್ನು ಗೆಲ್ಲಲು, ಒಂದು ಪಕ್ಷವು ಮೂರು ವಲಯಗಳನ್ನು ಗೆದ್ದುಕೊಳ್ಳಬೇಕು; 180-190 ಸ್ಥಾನಗಳನ್ನು ಪಡೆಯಲು, ಅದು ನಾಲ್ಕು ವಲಯಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಎಂದು ತಿಳಿಸಿದ್ದಾರೆ.

ದಕ್ಷಿಣ ತಮಿಳುನಾಡಿದಾದ್ಯಂತ ಬಿಜೆಪಿ ಈಗಾಗಲೇ ಎಐಎಡಿಎಂಕೆ ಮೇಲೆ ಮೇಲುಗೈ ಸಾಧಿಸಿದೆ. ಪಶ್ಚಿಮ ತಮಿಳುನಾಡಿನ ನಿರ್ಣಾಯಕ ಪ್ರದೇಶಗಳಲ್ಲಿಯೂ ಎಐಎಡಿಎಂಕೆ ಬಿಜೆಪಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಣ್ಣಾಮಲೈ ಹೇಳಿದ್ದಾರೆ.

ಈದ್ ಹಬ್ಬ: ‘ನಿರಂತರ ಸಂಬಂಧ’ವನ್ನಾಗಿ ಪರಿವರ್ತಿಸಲು ಚಿರಾಗ್ ನ ಹಿಂದು-ಮುಸ್ಲಿಮರು ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...