Homeಕರ್ನಾಟಕವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ;...

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಸಮುದಾಯದ ಬಾಲಕಿಯೊಬ್ಬರ ಮೇಲೆ ಬಿಜೆಪಿ ಮುಖಂಡ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಪೋಕ್ಸೋ ದಾಖಲಾಗಿದ್ದರೂ ಆರೋಪಿಯನ್ನು ಈ ವರೆಗೆ ಬಂಧಿಸದೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದು ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಆಕ್ರೋಶ ವ್ಯಕ್ತಪಡಿಸಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾತ್ರವಲ್ಲದೆ, ಅತ್ಯಾಚಾರ ಕೂಡಾ ಎಸಲಾಗಿದೆ ಎಂಬ ಸಂಶಯವನ್ನು ಡಿಎಚ್‌ಎಸ್ ವ್ಯಕ್ತಪಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ಏಪ್ರಿಲ್ 3ರಂದು ‘ಆಕ್ರೋಶ ಮೆರವಣಿಗೆ’ ನಡೆಸಿ ಪ್ರತಿಭಟನೆಗೆ ಮುಂದಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಪ್ರದೇಶದ ದಲಿತ ಬಾಲಕಿಯ ಮೇಲೆ ಸ್ಥಳೀಯ ಭೂಮಾಲಕ ಮಹೇಶ್ ಭಟ್ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾರ್ಚ್‌ 26ರಂದು ವರದಿಯಾಗಿತ್ತು. ಆರೋಪಿಯ ಮೇಲೆ ಪೋಕ್ಸೋ ದಾಖಲಾಗಿದ್ದರು ತನ್ನ ಪ್ರಭಾವದ ಕಾರಣಕ್ಕಾಗಿ ಆತನ ಬಂಧನವಾಗಿಲ್ಲ ಎಂದು ಆರೋಪಿಸಲಾಗಿದೆ. ದಲಿತ ಬಾಲಕಿ ಮೇಲೆ ಲೈಂಗಿಕ

ಈ ಬಗ್ಗೆ ದಲಿತ ಹಕ್ಕುಗಳ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಹೋರಾಟ ಕೈಗೆತ್ತಿಕೊಂಡಿದ್ದು, ಏಪ್ರಿಲ್ 3ರ ಗುರುವಾರದಂದು ವಿಟ್ಲ ನಾಡ ಕಚೇರಿ ಬಳಿ ಪ್ರತಿಭಟನೆಗೆ ಸಿದ್ಧವಾಗಿದೆ. ಬೆಳಿಗ್ಗೆ 10 ಗಂಟೆಗೆ ವಿಟ್ಲ ಬಸ್‌ ನಿಲ್ದಾಣದಿಂದ ‘ಆಕ್ರೊಶ ಮೆರವಣಿಗೆ’ ಆರಂಭವಾಗಲಿದ್ದು, ವಿಟ್ಲ ನಾಡ ಕಚೇರಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಲಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿವೈಎಫ್‌ಐ ಮುಖಂಡ ಸಂತೋಷ್ ಬಜಾಲ್, “ಪ್ರಕರಣ ದಾಖಲಾಗಿ ಒಂದು ವಾರ ಕಳೆದರೂ ಆರೋಪಿಯ ಬಂಧನವಾಗಿಲ್ಲ. ಅರೋಪಿ ಸಂತ್ರಸ್ತ ಬಾಲಕಿಗೆ ‘ನನ್ನೊಂದಿಗೆ ಗುಡ್ಡಕ್ಕೆ ಬರುತ್ತಿಯ’ ಎಂದು ಅಷ್ಟೆ ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಕೂಡಾ ಎಸಗಿದ್ದಾನೆ ಎಂಬ ಆರೋಪ ಕೂಡಾ ಸ್ಥಳೀಯವಾಗಿ ಕೇಳಿಬರುತ್ತಿದೆ. ಆರೋಪಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು ಪ್ರಕರಣದಲ್ಲಿ ಪೊಲೀಸರು ಯಾವುದೆ ಆಸಕ್ತಿ ತೋರಿಸುತ್ತಿಲ್ಲ” ಎಂದು ಹೇಳಿದರು.

“ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೂ, ಇಲ್ಲಿವರೆಗೆ ಅವರ ವೈದ್ಯಕೀಯ ಪರೀಕ್ಷೆ ಆಗಿಲ್ಲ. ಆರೋಪಿ ಭೂಮಾಲಕನೂ ಆಗಿದ್ದು, ಸಂತ್ರಸ್ತ ಬಾಲಕಿಯ ತಂದೆ ಅವರ ತೋಟದಲ್ಲಿ ಹಲವಾರು ವರ್ಷಗಳಿಂದ ಕಡಿಮೆ ಕೂಲಿಗೆ ದುಡಿಯುತ್ತಿದ್ದಾರೆ. ಸ್ಥಳೀಯವಾಗಿ ಪ್ರಭಾವ ಹೊಂದಿರುವ ಆರೋಪಿ ತೋಟದಲ್ಲಿ ದುಡಿಯು ಇತರ ಕಾರ್ಮಿಕರ ಮೇಲೆ ಕೂಡಾ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪ ಕೂಡಾ ಕೇಳಿ ಬರುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯ ಮೇಲೆ ಕಠಿಣ ಪ್ರಕರಣ ದಾಖಲಿಸಿ ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಬೇಕಿದೆ. ” ಎಂದು ಸಂತೋಷ್ ಕುಮಾರ್ ಬಜಾಲ್ ಹೇಳಿದರು.

ಈ ಬಗ್ಗೆ ಮಾರ್ಚ್‌ 29ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಡಿಎಚ್‌ಎಸ್ ಮುಖಂಡರು, ಘಟನೆಯಿಂದ ಬಾಲಕಿ ಖಿನ್ನತೆಗೊಳಗಾಗಿದ್ದು, ಅವರನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕೌನ್ಸಿಲಿಂಗ್ ನಡೆಸಿ ಮಾನಸಿಕ ಧೈರ್ಯ ತುಂಬುವ ಮೂಲಕ ಸತ್ಯಾಂಶ ತಿಳಿಯಲು ಪ್ರಯತ್ನಿಸಬೇಕು ಎಂದು ಹೇಳಿತ್ತು. ಅಷ್ಟೆ ಅಲ್ಲದೆ, ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದರು.

“ಆರೋಪಿ ಮಹೇಶ್ ಭಟ್ ಹಿಂಬಾಲಕ ಹರೀಶ್ ಮಣಿಯಾಣಿ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಪೋಷಕರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದರು.

ಆರೋಪಿ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿತ್ತು. ಆರೋಪಿಯ ಕೃತ್ಯದಿಂದ ಬಾಲಕಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ ಎನ್ನಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ. ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

‘ಸಿಂಹ ನಾಯಿಗಳನ್ನು ಬೇಟೆಯಾಡುವುದಿಲ್ಲ..’; ದಲಿತ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....