HomeUncategorizedಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

ಎ.14ರೊಳಗೆ ರೋಹಿತ್ ಕಾಯ್ದೆ ಜಾರಿ ಕುರಿತು ಸರಕಾರ ಘೋಷಣೆ ಮಾಡಲಿ: ಮಾವಳ್ಳಿ ಶಂಕರ್

- Advertisement -
- Advertisement -

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಇದೇ ಎ.14ರೊಳಗೆ ರಾಜ್ಯ ಸರಕಾರವು ರೋಹಿತ್ ಕಾಯ್ದೆ ಜಾರಿ ಕುರಿತು ಘೋಷಣೆ ಮಾಡಬೇಕೆಂದು ದಲಿತ ಚಳವಳಿಯ ನಾಯಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದಾರೆ.

ಇಂದು (ಮಂಗಳವಾರ) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಯ್ದೆಯ ಜಾರಿಗಾಗಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ  ಬೃಹತ್ ಪ್ರಮಾಣದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಪೀಠಿಕೆ ಪ್ರತಿ ಪ್ರಜೆಗೆ ಅವಕಾಶ ಹಾಗು ಸ್ಥಾನಮಾನದ, ಸಮಾನತೆಯ ಭರವಸೆ ನೀಡುತ್ತದೆ. ಆದರೆ ಸಂವಿಧಾನ ಜಾರಿಯಾದ 75  ವರ್ಷಗಳ ನಂತರವೂ ದಲಿತ ಬಹುಜನ ಯುವಜನರಿಗೆ ಈ ಎರಡು ಭರವಸೆಗಳು ಈಡೇರಿಲ್ಲ. ರೋಹಿತ್ ವೇಮುಲ, ಪಾಯಲ್ ತದ್ವಿ ಅವರ ಸಾಂಸ್ಥಿಕ ಕೊಲೆಗಳು ಈ ಭರವಸೆಯ ನಿರಾಕರಣೆಯ ತೀವ್ರ ಉದಾಹರಣೆಯಾಗಿದೆ. 2021ರಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭಾ ಸದಸ್ಯರಿಗೆ 2014-2021 ರ ಅವಧಿಯಲ್ಲಿ, ಐಐಟಿ, ಐಐಎಂ, ಎನ್‌ಐಟಿ ಮತ್ತು ಇತರ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಹೇಳಿರುವುದು ಕಳವಳಕಾರಿಯಾದ ವಿಷಯವಾಗಿದೆ ಎಂದು ಅವರು ಹೇಳಿದರು.

ಈ ಆತ್ಮಹತ್ಯೆಗೈದ 122ರಲ್ಲಿ 68 ವಿದ್ಯಾರ್ಥಿಗಳು SC/ST/OBC ವರ್ಗಗಳಿಗೆ ಸೇರಿದವರು. ಜೊತೆಗೆ ಈ ಸಮಾನತೆಯ ನಿರಾಕರಣೆಯಿಂದ ಪ್ರತಿ ವರ್ಷ ಸಾವಿರಾರು ದಲಿತ ಬಹುಜನರು ಉನ್ನತ ಶಿಕ್ಷಣ ಸೇರಿದ ನಂತರ ಡ್ರಾಪ್ ಔಟ್ ಆಗುತ್ತಿದ್ದಾರೆ. ಡಿಸೆಂಬರ್ 2023ರಲ್ಲಿ ಸರ್ಕಾರ ಸಂಸತ್ತಿನಲ್ಲಿ ನೀಡಿದ ಅಂಕಿ-ಅಂಶಗಳ ಪ್ರಕಾರ , ಕೇವಲ ಕೇಂದ್ರೀಯ ವಿಶ್ವಾ ವಿದ್ಯಾನಿಲಯಗಳಿಂದಲೇ ,  2018-2023  ಮಧ್ಯೆ  13,000ಕ್ಕೂ  ಹೆಚ್ಚು  SC/ST/OBC ಸಮುದಾಯದ ವಿಧಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ. ಜೊತೆಗೆ , ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜಾತಿ ತಾರತಮ್ಯ ದಿನನಿತ್ಯ ಎದುರಿಸುವ ಹಿಂಸೆಯಾಗಿದೆ. ಈ ದಿನನಿತ್ಯದ ಹಿಂಸೆಯನ್ನು ನಿವೃತ್ತ ಯು.ಜಿ.ಸಿ ಅಧ್ಯಕ್ಷರಾದ ಸುಖದೇವ್ ಥೋರಟ್ ನೇತೃತ್ವದ ಸಮಿತಿಯ ವರದಿಯಲ್ಲಿ ವಿವರಿಸಲಾಯಿತು. ಹಾಸ್ಟೆಲ್ ನಲ್ಲಿ , ಮೆಸ್ ನಲ್ಲಿ, ಆಟದ ಮೈದಾನ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಹ ಹೇಗೆ ಜಾತಿಯು ಅಡ್ಡವಾಗಿದೆ ಎಂದು ಅವರ ವರದಿ ವಿವರಿಸಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇಂದು ಸಹ  ಕರ್ನಾಟಕದಲ್ಲಿ ಜಾತಿ ಸಾಮಾನ ಶಿಕ್ಷಣಕ್ಕೆ ಅಡ್ಡಿಯಾಗಿದೆ.  ಒಂದು ಕಡೆ ಸರ್ಕಾರ ಸಾರ್ವಜನಿಕ ಶಿಕ್ಷಣಕ್ಕಾಗಿ ನೀಡುತ್ತಿರುವ ಅನುದಾನ ಸಾಲುತ್ತಿಲ್ಲ, ಇನ್ನೊಂದೆಡೆ ಶಿಕ್ಷಣದ ಖಾಸಗೀಕರಣ ವೇಗವಾಗಿ ಮುಂದುವರಿಯುತ್ತಿದೆ. ಇದರ ಜೊತೆಗೆ  NEP, CUET, NEET  ನಂತಹ ನೀತಿಗಳಿಂದ ಶಿಕ್ಷಣದ ಕೇಂದ್ರೀಕರಣವಾಗುತ್ತಿದೆ ಎಂದು ಮತ್ತೊಬ್ಬ ದಲಿತ ಚಳವಳಿಯ ನಾಯಕ ಬಸವರಾಜ್ ಕೌತಾಳ್ ತಿಳಿಸಿದರು.

ರೋಹಿತ್ ವೇಮುಲ ಅವರ ತಾಯಿ ಹಾಗು ಪಾಯಲ್ ತದ್ವಿ ಅವರ ತಾಯಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು  2019ರಲ್ಲಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯವನ್ನು ತಡೆಯಲು ಯು.ಜಿ.ಸಿ ನಿಯಮಗಳೇನೋ ಇವೆ (ಉದಾಹರಣೆಗೆ – Equal Opportunity Cell), ಆದರೆ ಅವುಗಳು ಸಂಪೂರ್ಣವಾಗಿ ಜಾರಿಯಾಗದೇ ತಾರತಮ್ಯವನ್ನು, ದಲಿತ ಬಹುಜನ ವಿದ್ಯಾರ್ಥಿಗಳು ಶಿಕ್ಷಣ ತೊರೆಯುವುದನ್ನು ತಡೆದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಿ ಆರು ವರ್ಷಗಳಾಗಿದ್ದು ಹಾಗು ಯು.ಜಿ.ಸಿ ನಿಯಮಾವಳಿ ಜಾರಿಯಾಗಿ 13 ವರ್ಷಗಳಾಗಿದ್ದರೂ, ದೇಶದ ವಿಶ್ವವಿದ್ಯಾನಿಲಯಗಳ ಮೇಲ್ವಿಚಾರಣೆ ಮಾಡುವ ಯು.ಜಿ.ಸಿ ತಾರತಮ್ಯವಾನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಸ್ತುತದಲ್ಲಿರುವ ನಿಯಮಾವಳಿಯನ್ನು ಜಾರಿ ಮಾಡದೆ, ಸ್ವೆಚ್ಚಾನುಸಾರವಾಗಿ ನಿಶ್ಯಕ್ತವಾದ ನೂತನ ನಿಯಮಾವಳಿಯನ್ನು 2025ರ ಫೆಬ್ರವರಿಯಲ್ಲಿ ಜಾರಿಮಾಡಿದೆ ಎಂದು ಡಾ.ಕೆ.ಪಿ.ಅಶ್ವಿನಿ ಹೇಳಿದರು.

ಇನ್ನೊಂದು ಕಡೆ ಜಾತಿ ತಾರತಮ್ಯವನ್ನು ತಡೆಯಲು ಇರುವ ಕಾಯ್ದೆ ಎಂದರೆ ಜಾತಿ ದೌರ್ಜನ್ಯ ತಡೆ ಕಾಯ್ದೆ. ಈ ದೌರ್ಜನ್ಯ ತಡೆ ಕಾಯ್ದೆಯು ಹಲ್ಲೆ, ಜಾತಿ ನಿಂದನೆ, ಲೈಂಗಿಕ ಅತ್ಯಾಚಾರದಂತಹ ಕ್ರಿಮಿನಲ್ ಆಚರಣೆಗಳಿಗೆ ಸೂಕ್ತವಾಗಿದೆ. ಆದರೆ  ಕಾಲೇಜು ಮಟ್ಟದಲ್ಲಿ ನಡೆಯುವ ತಾರತಮ್ಯ ಈ ಕಾಯ್ದೆಯಡಿ ಪರಿಹರಿಸಲು ಸೂಕ್ತವಾಗಿರುವುದಿಲ್ಲ ಹಾಗು ಈ ಕಾಯ್ದೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು  ಸಾಧ್ಯವಿಲ್ಲ. ಥೋರಟ್ ಸಮಿತಿ ವರದಿ ಹೇಳಿದಂತೆ ಉತ್ತಮ ವಾತಾವರಣ ಸೃಷ್ಟಿಸಲು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಆಂಗ್ಲದಲ್ಲಿ ವಿಶೇಷ ತರಬೇತಿ ನೀಡುವುದು, ದಮನಿಸುವ ಜಾತಿಗಳಿಗೆ ಸೇರಿದ ಶಿಕ್ಷಕರಿಗೂ ಹಾಗು ವಿದ್ಯಾರ್ಥಿಗಳಿಗೂ ಜಾತಿ ಬಗ್ಗೆ caste sensitization workshops  ಮಾಡುವುದು ಇತ್ಯಾದಿ ಸಹ ಆಗಬೇಕು. ಅದು ಇಂದಿನ ನಿಯಮ-ಕಾನೂನುಗಳಲ್ಲಿ ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದರು.

ಈಗಿರುವ ನಿಯಮಗಳು ಹಾಗು ಕಾನೂನು ದಲಿತ ಬಹುಜನ ವಿದ್ಯಾರ್ಥಿಗಳಿಗೆ ಘನತೆ, ಸಮಾನ ಅವಕಾಶ, ಸ್ಥಾನಮಾನ ಖಾತ್ರಿಪಡಿಸಲು ವಿಫಲವಾದ ಕಾರಣ, ಇಂದು ರೋಹಿತ್ ಕಾಯ್ದೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ರೋಹಿತ್ ಕಾಯ್ದೆ ಜಾರಿಯಾಗುವಂತೆ, ಸಾರ್ವಜನಿಕ ವಿಶ್ವಾವಿದ್ಯಾನಿಲಯಗಳಲ್ಲಿ ಉತ್ತಮ, ಗುಣಮಟ್ಟ ಶಿಕ್ಷಣ ನೀಡುವಂತೆ  ಹಾಗು ಖಾಸಗಿ ವಿಶ್ವವಿದ್ಯಾನಿಲಯಗಳ  ನಿಯಂತ್ರಣ ಆಗುವಂತೆ ಒತ್ತಾಯಿಸಲು ನಾವು ರಾಜ್ಯ ಮಟ್ಟದ ಆಂದೋಲನ ಕೈಗೊಳ್ಳುತ್ತಿದ್ದೇವೆ. ರಾಜ್ಯದ ಯುವಜನರು ನಮ್ಮೊಂದಿಗೆ ಕೈಜೋಡಿಸುವಂತೆ ವಿನಂತಿಸುತ್ತೇವೆ. ಜಾತಿ ರಹಿತ ಕರ್ನಾಟಕವನ್ನು ಕಟ್ಟುವುದೇ ನಮ್ಮ ಅಂತಿಮ ಗುರಿ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆ.ವಿ.ಎಸ್.) ಸರೋವರ್ ಬೆಂಕಿಕೆರೆ ಮಾಹಿತಿ ನೀಡಿದರು.

ಏಪ್ರಿಲ್ 14, ಅಂದರೆ ಅಂಬೇಡ್ಕರ್ ಜಯಂತಿಯ ಒಳಗೆ ರಾಜ್ಯ ಸರ್ಕಾರ ರೋಹಿತ್ ಕಾಯ್ದೆ ಜಾರಿಮಾಡಲು ಅಗತ್ಯ ಕ್ರಮವನ್ನು ಮುಖ್ಯಮಂತ್ರಿಗಳು  ಘೋಷಿಸಬೇಕು. ಕಾಯ್ದೆ ಜಾರಿ ಮಾಡಲು ದಲಿತ-ವಿಧಾರ್ಥಿ ಸಂಘಟನೆಗಳ ಪ್ರತಿನಿಧಿಗಳಿರುವ ಸಮಿತಿ ರಚನೆಯಾಗಬೇಕು. ಕಾರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರವು ತಾರತಮ್ಯ ರಹಿತವಾಗುವಂತೆ, ಎಲ್ಲರಿಗು ಸಮಾನ ಅವಕಾಶ ಸಿಗುವಂತೆ ಸೂಕ್ತ, ಶೀಘ್ರ ಕ್ರಮ ಕೈಗೊಳ್ಳಬೇಕು. ಜಾತಿ ವಿನಾಶವೇ ನಮ್ಮ ಅಂತಿಮ ಗುರಿ, ಅದಕ್ಕೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಶ್ನಾ, ಡಾ.ನಂದಕುಮಾರ್, ಲೇಖಾ ಅಡವಿ, ವೆಂಕಟೇಶ್ ಮುಂತಾದವರು ಹಾಜರಿದ್ದರು.

ತಮಿಳುನಾಡು ಬಿಜೆಪಿಯಲ್ಲಿ ಜಾತಿ ಲೆಕ್ಕಾಚಾರ: ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಯುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...