Homeಅಂತರಾಷ್ಟ್ರೀಯಕಾನೂನು ಕ್ರಮ ಕೈಗೊಳ್ಳುತ್ತೇವೆ | ದೇಶದ ಮಾಜಿ ರಾಜನಿಗೆ ಎಚ್ಚರಿಕೆ ನೀಡಿದ ನೇಪಾಳ ಪ್ರಧಾನಿ

ಕಾನೂನು ಕ್ರಮ ಕೈಗೊಳ್ಳುತ್ತೇವೆ | ದೇಶದ ಮಾಜಿ ರಾಜನಿಗೆ ಎಚ್ಚರಿಕೆ ನೀಡಿದ ನೇಪಾಳ ಪ್ರಧಾನಿ

- Advertisement -
- Advertisement -

ನೇಪಾಳದ ಕಠ್ಮಂಡುವಿನಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ ಭಾಗಿಯಾಗಿರುವ ಮಾಜಿ ರಾಜ ಜ್ಞಾನೇಂದ್ರ ಶಾ ಮತ್ತು ರಾಜಪ್ರಭುತ್ವ ಪರ ಪ್ರತಿಭಟನಾಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸೋಮವಾರ ಎಚ್ಚರಿಸಿದ್ದಾರೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಒತ್ತಾಯಿಸಿ ಮಾಜಿ ರಾಜನ ಬೆಂಬಲಿಗರು ಶುಕ್ರವಾರ ಕಠ್ಮಂಡುವಿನ ಟಿಂಕುನೆ ಪ್ರದೇಶದಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದರು. ಘಟನೆಯಲ್ಲಿ ಹಲವಾರು ಕಟ್ಟಡಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

2008 ರಲ್ಲಿ, ನೇಪಾಳವು ತನ್ನ 240 ವರ್ಷಗಳಷ್ಟು ಹಳೆಯದಾದ ರಾಜಪ್ರಭುತ್ವವನ್ನು ರದ್ದುಗೊಳಿಸಿ ಜಾತ್ಯತೀತ, ಫೆಡರಲ್ ಮತ್ತು ಪ್ರಜಾಪ್ರಭುತ್ವ ಗಣರಾಜ್ಯವಾಗಿ ಪರಿವರ್ತನೆಗೊಂಡಿತು.

ಸೋಮವಾರ ದೇಶದ ಸಂಸತ್ತಿನಲ್ಲಿ ಮಾತನಾಡಿದ ಓಲಿ, ಬ್ಯಾಂಕ್ ಸಾಲಗಳನ್ನು ಮರುಪಾವತಿಸಲು ನಿರಾಕರಿಸುವ ವ್ಯಕ್ತಿಗಳೊಂದಿಗೆ ಜ್ಞಾನೇಂದ್ರ ಶಾ ಹೊಂದಾಣಿಕೆ ಮಾಡಿಕೊಂಡಿದ್ದು, ಅವರ ಮಹತ್ವಾಕಾಂಕ್ಷೆಗಳಿಗಾಗಿ ಸಾಮಾಜಿಕ ಅಶಾಂತಿಯನ್ನು ಹುಟ್ಟುಹಾಕಿದ್ದಾರೆ ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿತ ಸಂಘಟಕರು ಪೊಲೀಸರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದಾರೆ ಮತ್ತು ನಿರ್ಬಂಧಿತ ಪ್ರದೇಶವನ್ನು ಉಲ್ಲಂಘಿಸಿದ್ದಾರೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತೈಲ ನಿಗಮದ ಡಿಪೋಗೆ ಬೆಂಕಿ ಹಚ್ಚುವಂತಹ ಭಯೋತ್ಪಾದಕ ಚಟುವಟಿಕೆಗಳು ನಡೆದಿವೆ.” ಎಂದು ಅವರು ಹೇಳಿದ್ದಾರೆ.

“ಮಾಜಿ ರಾಜ ವೀಡಿಯೊ ಹೇಳಿಕೆಯ ಮೂಲಕ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದು, ಸಿಂಹಾಸನವನ್ನು ಮರಳಿ ಪಡೆಯಲು ಬಯಸುವವರು ಪ್ರತಿಭಟನೆ ಮತ್ತು ಅದರ ಫಲಿತಾಂಶಗಳ ಬಗ್ಗೆ ತಮ್ಮ ನಿಲುವನ್ನು ಸಾರ್ವಜನಿಕವಾಗಿ ಹೇಳಬೇಕಲ್ಲವೇ?” ಎಂದು ಪ್ರಧಾನ ಮಂತ್ರಿ ಕೇಳಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ.

ಫೆಬ್ರವರಿ 19 ರಂದು ನೇಪಾಳದ ಪ್ರಜಾಪ್ರಭುತ್ವ ದಿನದಂದು ವೀಡಿಯೊ ಬಿಡುಗಡೆ ಮಾಡಿದ್ದ ಜ್ಞಾನೇಂದ್ರ ಶಾ, ರಾಜಪ್ರಭುತ್ವದ ಮರು ಸ್ಥಾಪನೆಗೆ ಸಾರ್ವಜನಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದರು. ಅದರ ನಂತರ ಇತ್ತೀಚಿನ ವಾರಗಳಲ್ಲಿ ರಾಜಪ್ರಭುತ್ವದ ಪುನಃಸ್ಥಾಪನೆಗೆ ಬೇಡಿಕೆಗಳು ಎದ್ದಿವೆ ಎಂದು ಪಿಟಿಐ ವರದಿ ಮಾಡಿದೆ.

“ಅವರಿಗೆ [ಶಾ] ಶಿಕ್ಷೆಯಿಂದ ವಿನಾಯಿತಿ ನೀಡಲಾಗುವುದಿಲ್ಲ. ಪ್ರಸ್ತುತ ವ್ಯವಸ್ಥೆಯನ್ನು ಉರುಳಿಸಲು ಮತ್ತು ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿರುವವರು ಮಾರ್ಚ್ 28 ರ ಘಟನೆಗಳ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು.” ಎಂದು ಪ್ರಧಾನಿ ಓಲಿ ಸೋಮವಾರ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ.

“ಘರ್ಷಣೆಗಳ ಕುರಿತು ತನಿಖೆಗಳು ನಡೆಯುತ್ತಿವೆ. ದೇಶದ ಗೃಹ ವ್ಯವಹಾರಗಳ ಸಚಿವಾಲಯವು ಸಾವುನೋವುಗಳು, ಆಸ್ತಿ ನಾಶ ಮತ್ತು ಬೆಂಕಿ ಹಚ್ಚುವಿಕೆಯನ್ನು ಪರಿಶೀಲಿಸಿದೆ. ಶೀಘ್ರದಲ್ಲೇ ವಿವರವಾದ ವರದಿಯನ್ನು ಸಲ್ಲಿಸಲಾಗುವುದು. ಈ ಭಯಾನಕ ಕೃತ್ಯಗಳ ಅಪರಾಧಿಗಳು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪ್ರಧಾನಿ ಓಲಿ ಹೇಳಿದ್ದಾರೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...