Homeಅಂತರಾಷ್ಟ್ರೀಯಕಾನೂನು ಕ್ರಮ ಕೈಗೊಳ್ಳುತ್ತೇವೆ | ದೇಶದ ಮಾಜಿ ರಾಜನಿಗೆ ಎಚ್ಚರಿಕೆ ನೀಡಿದ ನೇಪಾಳ ಪ್ರಧಾನಿ

ಕಾನೂನು ಕ್ರಮ ಕೈಗೊಳ್ಳುತ್ತೇವೆ | ದೇಶದ ಮಾಜಿ ರಾಜನಿಗೆ ಎಚ್ಚರಿಕೆ ನೀಡಿದ ನೇಪಾಳ ಪ್ರಧಾನಿ

- Advertisement -
- Advertisement -

ನೇಪಾಳದ ಕಠ್ಮಂಡುವಿನಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ ಭಾಗಿಯಾಗಿರುವ ಮಾಜಿ ರಾಜ ಜ್ಞಾನೇಂದ್ರ ಶಾ ಮತ್ತು ರಾಜಪ್ರಭುತ್ವ ಪರ ಪ್ರತಿಭಟನಾಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸೋಮವಾರ ಎಚ್ಚರಿಸಿದ್ದಾರೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಒತ್ತಾಯಿಸಿ ಮಾಜಿ ರಾಜನ ಬೆಂಬಲಿಗರು ಶುಕ್ರವಾರ ಕಠ್ಮಂಡುವಿನ ಟಿಂಕುನೆ ಪ್ರದೇಶದಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದರು. ಘಟನೆಯಲ್ಲಿ ಹಲವಾರು ಕಟ್ಟಡಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

2008 ರಲ್ಲಿ, ನೇಪಾಳವು ತನ್ನ 240 ವರ್ಷಗಳಷ್ಟು ಹಳೆಯದಾದ ರಾಜಪ್ರಭುತ್ವವನ್ನು ರದ್ದುಗೊಳಿಸಿ ಜಾತ್ಯತೀತ, ಫೆಡರಲ್ ಮತ್ತು ಪ್ರಜಾಪ್ರಭುತ್ವ ಗಣರಾಜ್ಯವಾಗಿ ಪರಿವರ್ತನೆಗೊಂಡಿತು.

ಸೋಮವಾರ ದೇಶದ ಸಂಸತ್ತಿನಲ್ಲಿ ಮಾತನಾಡಿದ ಓಲಿ, ಬ್ಯಾಂಕ್ ಸಾಲಗಳನ್ನು ಮರುಪಾವತಿಸಲು ನಿರಾಕರಿಸುವ ವ್ಯಕ್ತಿಗಳೊಂದಿಗೆ ಜ್ಞಾನೇಂದ್ರ ಶಾ ಹೊಂದಾಣಿಕೆ ಮಾಡಿಕೊಂಡಿದ್ದು, ಅವರ ಮಹತ್ವಾಕಾಂಕ್ಷೆಗಳಿಗಾಗಿ ಸಾಮಾಜಿಕ ಅಶಾಂತಿಯನ್ನು ಹುಟ್ಟುಹಾಕಿದ್ದಾರೆ ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿತ ಸಂಘಟಕರು ಪೊಲೀಸರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದಾರೆ ಮತ್ತು ನಿರ್ಬಂಧಿತ ಪ್ರದೇಶವನ್ನು ಉಲ್ಲಂಘಿಸಿದ್ದಾರೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತೈಲ ನಿಗಮದ ಡಿಪೋಗೆ ಬೆಂಕಿ ಹಚ್ಚುವಂತಹ ಭಯೋತ್ಪಾದಕ ಚಟುವಟಿಕೆಗಳು ನಡೆದಿವೆ.” ಎಂದು ಅವರು ಹೇಳಿದ್ದಾರೆ.

“ಮಾಜಿ ರಾಜ ವೀಡಿಯೊ ಹೇಳಿಕೆಯ ಮೂಲಕ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದು, ಸಿಂಹಾಸನವನ್ನು ಮರಳಿ ಪಡೆಯಲು ಬಯಸುವವರು ಪ್ರತಿಭಟನೆ ಮತ್ತು ಅದರ ಫಲಿತಾಂಶಗಳ ಬಗ್ಗೆ ತಮ್ಮ ನಿಲುವನ್ನು ಸಾರ್ವಜನಿಕವಾಗಿ ಹೇಳಬೇಕಲ್ಲವೇ?” ಎಂದು ಪ್ರಧಾನ ಮಂತ್ರಿ ಕೇಳಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ.

ಫೆಬ್ರವರಿ 19 ರಂದು ನೇಪಾಳದ ಪ್ರಜಾಪ್ರಭುತ್ವ ದಿನದಂದು ವೀಡಿಯೊ ಬಿಡುಗಡೆ ಮಾಡಿದ್ದ ಜ್ಞಾನೇಂದ್ರ ಶಾ, ರಾಜಪ್ರಭುತ್ವದ ಮರು ಸ್ಥಾಪನೆಗೆ ಸಾರ್ವಜನಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದರು. ಅದರ ನಂತರ ಇತ್ತೀಚಿನ ವಾರಗಳಲ್ಲಿ ರಾಜಪ್ರಭುತ್ವದ ಪುನಃಸ್ಥಾಪನೆಗೆ ಬೇಡಿಕೆಗಳು ಎದ್ದಿವೆ ಎಂದು ಪಿಟಿಐ ವರದಿ ಮಾಡಿದೆ.

“ಅವರಿಗೆ [ಶಾ] ಶಿಕ್ಷೆಯಿಂದ ವಿನಾಯಿತಿ ನೀಡಲಾಗುವುದಿಲ್ಲ. ಪ್ರಸ್ತುತ ವ್ಯವಸ್ಥೆಯನ್ನು ಉರುಳಿಸಲು ಮತ್ತು ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿರುವವರು ಮಾರ್ಚ್ 28 ರ ಘಟನೆಗಳ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು.” ಎಂದು ಪ್ರಧಾನಿ ಓಲಿ ಸೋಮವಾರ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ.

“ಘರ್ಷಣೆಗಳ ಕುರಿತು ತನಿಖೆಗಳು ನಡೆಯುತ್ತಿವೆ. ದೇಶದ ಗೃಹ ವ್ಯವಹಾರಗಳ ಸಚಿವಾಲಯವು ಸಾವುನೋವುಗಳು, ಆಸ್ತಿ ನಾಶ ಮತ್ತು ಬೆಂಕಿ ಹಚ್ಚುವಿಕೆಯನ್ನು ಪರಿಶೀಲಿಸಿದೆ. ಶೀಘ್ರದಲ್ಲೇ ವಿವರವಾದ ವರದಿಯನ್ನು ಸಲ್ಲಿಸಲಾಗುವುದು. ಈ ಭಯಾನಕ ಕೃತ್ಯಗಳ ಅಪರಾಧಿಗಳು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪ್ರಧಾನಿ ಓಲಿ ಹೇಳಿದ್ದಾರೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...