Homeಮುಖಪುಟಕುನಾಲ್ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು!

ಕುನಾಲ್ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಟೀಕಿಸಿದ್ದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೇಕ್ಷಕರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಕಾರ್ಯಕ್ರಮದ ಎಲೆಕ್ಟ್ರಾನಿಕ್ ಪುರಾವೆಗಳು ಲಭ್ಯವಿರುವುದರಿಂದ ಪ್ರಕರಣದಲ್ಲಿ ಪ್ರೇಕ್ಷಕರಿಗೆ ಸಮನ್ಸ್ ನೀಡುವುದು ಕಡ್ಡಾಯವಲ್ಲ ಎಂದು ವಕೀಲ ವೈ.ಪಿ. ಸಿಂಗ್ ಹೇಳಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. ಕುನಾಲ್ ಕಾರ್ಯಕ್ರಮಕ್ಕೆ

ಮಾರ್ಚ್ 23 ರಂದು ಕುನಾಲ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಿಂದಿ ಚಲನಚಿತ್ರವೊಂದರ ವಿಡಂಬನಾತ್ಮಕ ಹಾಡಿನ ಆವೃತ್ತಿಯನ್ನು ಪ್ರಕಟಿಸಿದ್ದರು. ಈ ಹಾಡಿನಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ‘ದೇಶದ್ರೋಹಿ’ ಎಂದು ಟೀಕಿಸಲಾಗಿತ್ತು. ಈ ಪ್ರದರ್ಶನದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ, ಮಾರ್ಚ್ 23 ರ ರಾತ್ರಿ ಶಿವಸೇನೆಯ ಶಿಂಧೆ ನೇತೃತ್ವದ ಬಣದ ಕಾರ್ಯಕರ್ತರು ಕಾರ್ಯಕ್ರಮ ರೆಕಾರ್ಡ್‌ ಮಾಡಲಾದ ಮುಂಬೈನ ಖಾರ್ ಪ್ರದೇಶದಲ್ಲಿರುವ ದಿ ಹ್ಯಾಬಿಟ್ಯಾಟ್ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಕುನಾಲ್ ಕಾರ್ಯಕ್ರಮಕ್ಕೆ

ಮರುದಿನ, ಮುಂಬೈ ಪೊಲೀಸರು ಮಾನನಷ್ಟ ಮತ್ತು ಸಾರ್ವಜನಿಕ ದುಷ್ಕೃತ್ಯಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತದ ವಿಭಾಗಗಳ ಅಡಿಯಲ್ಲಿ ಕುನಾಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಬಗ್ಗೆ ಮಾರ್ಚ್ 31 ರ ಮೊದಲು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಅವರಿಗೆ ಎರಡು ಸಮನ್ಸ್‌ಗಳನ್ನು ಕಳುಹಿಸಿದ್ದರು.

ಅದಾಗ್ಯೂ, ಕುನಾಲ್ ಅವರು ಮುಂಬೈಗೆ ಪ್ರಯಾಣಿಸಲು ಏಳು ದಿನಗಳನ್ನು ಕೋರಿದ್ದು, ಆದರೆ ಪೊಲೀಸರು ಅವರ ವಿನಂತಿಯನ್ನು ನಿರಾಕರಿಸಿದ್ದರು. ಶುಕ್ರವಾರ ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ತಮಿಳುನಾಡಿನ ವಿಲ್ಲುಪುರಂ ಪಟ್ಟಣದ ಖಾಯಂ ನಿವಾಸಿಯಾಗಿರುವುದರಿಂದ ತನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆಲಿಸುವ ಅಧಿಕಾರ ಮದ್ರಾಸ್ ಹೈಕೋರ್ಟ್‌ಗೆ ಇದೆ ಎಂದು ಕುನಾಲ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದಾಗಿ ಒಂದು ದಿನದ ನಂತರ, ಶಿಂಧೆ ನೇತೃತ್ವದ ಶಿವಸೇನೆ ಕಾರ್ಯಕರ್ತರು ಸಲ್ಲಿಸಿದ ದೂರುಗಳ ಆಧಾರದ ಮೇಲೆ ಕುನಾಲ್ ವಿರುದ್ಧ ಮೂರು ಹೆಚ್ಚುವರಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ನಡುವೆ ರಾಜ್ಯ ಸರ್ಕಾರವು ಕುನಾಲ್ ಕಾಮ್ರಾ ಅವರೊಂದಿಗೆ ಕ್ಷಮೆಯಾಚಿಸುವಂತೆ ಕೋರಿದೆ. ಇಡೀ ಘಟನೆ ಬಗ್ಗೆ ಮಾರ್ಚ್ 24 ರಂದು ಪ್ರತಿಕ್ರಿಯಿಸಿದ್ದ ಕುನಾಲ್ “ಈ ಜನಸಮೂಹಕ್ಕೆ ನಾನು ಹೆದರುವುದಿಲ್ಲ, ಕ್ಷಮೆಯಾಚಿಸುವ ಪ್ರಶ್ನೆಯೆ ಇಲ್ಲ” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...