Homeಮುಖಪುಟಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10...

ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಹಾಗೂ ಇತರರು ಸೇರಿ ಆರು ಜನರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದಿರುವ ಸುಪ್ರೀಂ ಕೋರ್ಟ್, ಸಂತ್ರಸ್ತರಿಗೆ ಆರು ವಾರಗಳಲ್ಲಿ ತಲಾ 10 ಲಕ್ಷ ರೂಪಾಯಿಗಳನ್ನು ಪಾವತಿಸಲು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ಮೇಲ್ಮನವಿ ಸಲ್ಲಿಸಿದವರಿಗೆ ಮನೆ ಕೆಡವುವ ಮುನ್ನ ತಮ್ಮ ನಿಲುವನ್ನು ವಿವರಿಸಲು ಪ್ರಾಧಿಕಾರ ಸಮಂಜಸವಾದ ಅವಕಾಶ ನೀಡಿರಲಿಲ್ಲ” ಎಂದು ಹೇಳಿದೆ.

“ಧ್ವಂಸ ಪ್ರಕ್ರಿಯೆಯನ್ನು ‘ಉಗ್ರ’ ರೀತಿಯಲ್ಲಿ ನಡೆಸಲಾಗಿದೆ. ಈ ದೇಶದಲ್ಲಿ ಕಾನೂನಿನ ಆಳ್ವಿಕೆ ಇದೆ. ನಾಗರಿಕರ ಮನೆಗಳನ್ನು ಈ ರೀತಿ ಕೆಡವಲು ಸಾಧ್ಯವಿಲ್ಲ” ಎಂದಿದೆ.

“ಆಶ್ರಯ ಅಥವಾ ವಸತಿ ಹಕ್ಕು ಭಾರತದ ಸಂವಿಧಾನದ 21ನೇ ವಿಧಿಯ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಅಧಿಕಾರಿಗಳು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ ಅಭಿವೃದ್ಧಿ ಪ್ರಾಧಿಕಾರ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ನ್ಯಾಯಾಲಯವು ಸೂಚಿಸಿದೆ.

ಮನೆಗಳನ್ನು ಧ್ವಂಸ ನಡೆಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿದೆ. ಅರ್ಜಿದಾರರಲ್ಲಿ ಪ್ರಾಧ್ಯಾಪಕರು, ವಕೀಲರು ಮತ್ತು ನಾಲ್ವರು ಸೇರಿದ್ದಾರೆ.

ಕಾನೂನುಬಾಹಿರವಾಗಿ ಮನೆಗಳನ್ನು ಕೆಡವಿದ್ದಕ್ಕೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮತ್ತು ಪ್ರಯಾಗ್‌ರಾಜ್‌ ಅಭಿವೃದ್ದಿ ಪ್ರಾಧಿಕಾರವನ್ನು ಮಾರ್ಚ್‌ 6ರಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ, ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿತ್ತು. ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿತ್ತು.

“ಸಂವಿಧಾನದಲ್ಲಿ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದರು.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದರು. “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದರು.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈಗ ಬಾಕಿಯಿರುವುದು” ಎಂದು ಹೇಳಿದ್ದರು.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಹಾಗೂ ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಿಚಾರಣೆ ವೇಳೆ ವಾದಿಸಿದ್ದರು.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದರು.

ಆದರೆ, ಅರ್ಜಿದಾರರಿಗೆ ನೋಟಿಸ್‌ಗೆ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದರು. ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದರು.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿತ್ತು.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿತ್ತು ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ..ಹೊಸ ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...