Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...