Homeಕರ್ನಾಟಕನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

ನಕ್ಸಲ್ ಮುಖ್ಯವಾಹಿನಿ| ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಘೋಷಣೆ: ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದನೆ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಕ್ಸಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಮತ್ತು ರಾಜ್ಯವನ್ನು ‘ನಕ್ಸಲ್‌ ಮುಕ್ತ’ವನ್ನಾಗಿಸಲು ಮಹತ್ತರ ಪಾತ್ರ ವಹಿಸಿದ ಕರ್ನಾಟಕದ ನಕ್ಸಲ್‌ ನಿಗ್ರಹ ಪಡೆ ಮತ್ತು ಗುಪ್ತಚರ ಘಟಕದ 22 ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕವನ್ನು ಘೋಷಿಸಲಾಗಿದ್ದು, ಇದನ್ನು ಶಾಂತಿಗಾಗಿ ನಾಗರಿಕರ ವೇದಿಕೆ ಅಭಿನಂದಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೇದಿಕೆಯು, ಇವರೆಲ್ಲರನ್ನೂ  ಮತ್ತು  ಪ್ರಧಾನವಾಗಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯ ಗುಪ್ತವಾರ್ತೆಯ ನಿರ್ದೇಶಕ ಹೇಮಂತ್‌ ಎಂ ನಿಂಬಾಳ್ಕರ್‌ ಹಾಗೂ ಉಪನಿರ್ದೇಶಕ ಹರಿರಾಮ್‌ ಶಂಕರ್‌ ಅವರನ್ನು, ʼಶಾಂತಿಗಾಗಿ ನಾಗರಿಕರ ವೇದಿಕೆʼ ಅಭಿನಂದಿಸುತ್ತದೆ. ಇವರಿಬ್ಬರೂ ಈ ಕಾರ್ಯಾಚರಣೆಯ ಪ್ರಾರಂಭದಿಂದಲೂ ಹೆಚ್ಚುವರಿ ಅಸಕ್ತಿ ವಹಿಸಿ, ನಮ್ಮ ವೇದಿಕೆ ಜತೆ ಸಹಕರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ನಕ್ಸಲರನ್ನು ಘನತೆಯಿಂದ ನಡೆಸಿಕೊಳ್ಳುವ ಕುರಿತು, ಅವರನ್ನು ಕಾಡಿನಿಂದ ಮಾತ್ರವಲ್ಲ, ಜೈಲಿನಿಂದ ಹೊರತರುವಲ್ಲಿ ವಹಿಸಬೇಕಾದ ಮುತುವರ್ಜಿಗಳ ಕುರಿತು ಹಾಗೂ ಮುಖ್ಯವಾಹಿನಿಗೆ ಬಂದ ಮೇಲೆ ನೀಡಬೇಕಾದ ಅಗತ್ಯ ನೆರವಿನ ಕುರಿತು ನಾವು ಮುಂದಿಟ್ಟ ಎಲ್ಲಾ ಬೇಡಿಕೆಗಳಿಗಳನ್ನೂ ಪೂರೈಸುವ ಭರವಸೆ ನೀಡಿದ್ದರಿಂದಲೇ ಈ ಕೆಲಸವು ಸಾಂಗವಾಗಿ ನೆರವೇರಲು ಸಹಾಯವಾಯಿತು. ಇದರಲ್ಲಿ  ನಕ್ಸಲ್‌ ಪುನರ್‌ವಸತಿ ಸಮಿತಿಯ ಸದಸ್ಯರು ನೀಡಿದ ಸಹಕಾರವನ್ನೂ ಕೂಡ ನಮ್ಮ ವೇದಿಕೆ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದಿದೆ.

ಶಾಂತಿಗಾಗಿ ನಾಗರಿಕರ ವೇದಿಕ ಬಹಳ ಕಾಲದಿಂದಲೂ “ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದ ಅಲ್ಲ” ಎಂದು ನಕ್ಸಲರಿಗೂ ಮತ್ತು ಪ್ರಭುತ್ವಕ್ಕೂ ಮನವಿಮಾಡಿಕೊಂಡೇ ಬಂದಿದೆ. ಇಬ್ಬರೂ ಈ ಮನವಿಯ ಔಚಿತ್ಯವನ್ನು ಮನಗಂಡು ಮುಂದೆ ಬಂದ್ದರಿಂದಲೇ ಈ ಕಾರ್ಯವು ಸಫಲವಾಯಿತು. ಅಲ್ಲದೆ ಸರ್ಕಾರವು ನಾಗರಿಕರ ಜತೆ ನಡೆಸುವ ಅನುಸಂಧಾನಗಳು ಪ್ರಜಾತಂತ್ರದ ಹಿರಿಮೆಯನ್ನು ಎತ್ತಿಹಿಡಿಯುತ್ತವೆ ಎಂಬುದನ್ನು ಈ ಘಟನೆ ಎತ್ತಿತೋರಿಸುತ್ತದೆ. ಇದನ್ನು ಸ್ವಾಗತಿಸುತ್ತಾ, ಇದಕ್ಕೆ ಕಾರಣರಾದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು ಹಾಗೂ ಪೊಲೀಸು ಅಧಿಕಾರಿಗಳನ್ನು ನಾವು ಮತ್ತೊಮ್ಮೆ ಅಭಿನಂದಿಸುತ್ತೇವೆ ಎಂದು ವೇದಿಕೆಯ ನಗರಗೆರೆ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದು ಎಂದರೆ ಅವರನ್ನು ಕಾಡಿನಿಂದ ಜೈಲಿಗೆ ಕರೆತರುವುಷ್ಟೇ ಅಲ್ಲ, ಸಮಾಜದಲ್ಲಿ ಅವರು ಗೌರವಾನ್ವಿತವಾಗಿ ಬದುಕಲು ಬೇಕಾದ ಎಲ್ಲ ಸೌಕರ್ಯವನ್ನೂ ಒದಗಿಸಿ ನಾಡಿಗೆ ಕರೆತರುವುದು ಕೂಡ. ಇದು ಪ್ರಜಾತಂತ್ರ ಸರ್ಕಾರದ ಕರ್ತವ್ಯ ಹಾಗೂ ಅದು ಜಾರಿಯಾಗುವ ಹಾಗೆ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲವು ಸ್ವಾಗತಾರ್ಹ ಹೆಜ್ಜೆಗಳನ್ನು ಇಟ್ಟಿದೆ. ಉದಾಹರಣೆಗೆ ಈ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಆಲಿಸಲೆಂದೇ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ; ಆರ್ಥಿಕ ನೆರವನ್ನು ಕೂಡಲೇ ಬಿಡುಗಡೆ ಮಾಡಿದೆ. ಈ ಹಿಂದೆ ಬಂದಿದ್ದವರ ಸರಿಯಾದ ಪುನರ್ವಸತಿಗೆ ಬೇಕಾದ ಕ್ರಮವಹಿಸಲು ಮುಂದಾಗಿದೆ. ಇದು ಸಹ ಅಭಿನಂದನಾರ್ಹ ವಿಚಾರ.  ಆದರೂ ಇನ್ನೂ ಹಲವಾರು ಕೆಲಸಗಳು ಆಗಬೇಕಿದೆ. ವಿಶೇಷ ನ್ಯಾಯಾಲಯ ಕೂಡಲೇ ಕಾರ್ಯರೂಪಕ್ಕೆ ಬಂದು, ಕನಿಷ್ಟ ಎಲ್ಲರೂ ಬೇಲ್‌ ಮೇಲೆ ಹೊರಬರುವಂತಾಗಬೇಕು, ಮತ್ತು ಅಗತ್ಯ ಕಾನೂನು ಮತ್ತು ವೈದ್ಯಕೀಯ ನೆರವು ಒದಗಿಸಬೇಕು. ಸಾರಾಂಶದಲ್ಲಿ ಹೇಳಬೇಕೆಂದರೆ ಆಗಿರುವ ಕೆಲಸ ಅಭಿನಂದನಾರ್ಹವಾದದ್ದೇ  ಆದರೂ ಆಗಬೇಕಿರುವ ಕೆಲಸಗಳು ಕೂಡ ಸಾಕಷ್ಟು ಇವೆ. ಇವುಗಳನ್ನು ಕೂಡ ಸರ್ಕಾರ ಮತ್ತು ಪೊಲೀಸು ಇಲಾಖೆ ತುರ್ತಿನ ಮೇಲೆ ಕೈಗೆತ್ತಿ ಕೊಳ್ಳುತ್ತದೆ ಎಂಬ ಭರವಸೆ ನಮಗಿದೆ ಎಂದು ವೇದಿಕೆಯ ಮತ್ತೋರ್ವ ಸದಸ್ಯೆ ತಾರಾ ರಾವ್ ಹೇಳಿದ್ದಾರೆ.

ಈ ಕಾರ್ಯಾಚರಣೆ ಮೂಲಕ ಕರ್ನಾಟಕ ರಾಜ್ಯವು ಇಡೀ ದೇಶಕ್ಕೆ ಒಂದು ಶಾಂತಿಯುತ ಹಾಗೂ ಪ್ರಜಾತಾಂತ್ರಿಕ ಮಾದರಿಯನ್ನು ಕಟ್ಟಿಕೊಟ್ಟಿದೆ. ಜನರ ಸಮಸ್ಯೆಗಳನ್ನು ಬಗೆಹರಿಸದೆ, ಅವರ ಬದಕಿನ ಹಕ್ಕನ್ನು ಕಸಿಯಲು ಹೋದರೆ [ನ್ಯಾಷನಲ್‌ ಪಾರ್ಕ್‌ ವಿಚಾರದಲ್ಲಿ ಆದಂತೆ] ಜನರು ಸಶಸ್ತ್ರ ಸಂಘರ್ಷದಂತಹ ತೀಕ್ಷ್ಣ ರೂಪಗಳ ಮೊರೆಹೋಗುತ್ತಾರೆ. ಈ ರೀತಿಯ ವಿದ್ಯಮಾನಗಳು ಮತ್ತೆ ಮರುಕಳಿಸಬಾರದೆಂದರೆ ಜನಪರ ಎಂದು ಕರೆದುಕೊಳ್ಳುವ ಸರ್ಕಾರಗಳು ಜನರನ್ನು ಮೂಲೆಗೊತ್ತದೆ, ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂಬ ಪಾಠವನ್ನೂ ಈ ಪ್ರಕ್ರಿಯೆ ನೀಡಿದೆ. ಸರ್ಕಾರ ಮತ್ತು ಪೋಲೀಸ್‌ ಯಂತ್ರಾಂಗ ಈ ಪಾಠದತ್ತವೂ ಗಮನಹರಿಸಬೇಕು ಮತ್ತು ನಕ್ಸಲ್‌ ಪ್ರಭಾವಿತ ಪ್ರದೇಶದ ಅಭಿವೃದ್ಧಿಗೆ ವಿಶೇಷ ಗಮನ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ವೇದಿಕೆಯ ವಿ.ಎಸ್. ಶ್ರೀಧರ್ ಮಾಹಿತಿ ನೀಡಿದ್ದಾರೆ.

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...