Homeಮುಖಪುಟವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

ವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

- Advertisement -
- Advertisement -

ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆ-2024 ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಗಳು ಮಸೂದೆಯ ಪರ-ವಿರೋಧ ಚರ್ಚೆಗೆ ಸಜ್ಜಾಗಿದೆ. ಇಡೀ ದೇಶದ ಚಿತ್ತ ಸಂಸತ್ತಿನತ್ತ ನೆಟ್ಟಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ), ವಕ್ಫ್ ಮಸೂದೆಯಲ್ಲಿ ಒಂದು ಪ್ರಮುಖ ತಿದ್ದುಪಡಿ ಕೋರುವ ಸಾಧ್ಯತೆ ಇದೆ.

ಮಂಗಳವಾರ (ಏಪ್ರಿಲ್ 1) ತನ್ನ 16 ಸಂಸದರಿಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಸರ್ಕಾರವನ್ನು ಬೆಂಬಲಿಸಬೇಕೆಂದು ವಿಪ್ ಜಾರಿ ಮಾಡಿರುವ ಟಿಡಿಪಿ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಮಸೂದೆಯ ವಿವಾದಾತ್ಮಕ ಅಂಶದ ಕುರಿತು ಬದಲಾವಣೆ ಕೋರುವ ನಿರೀಕ್ಷೆಯಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರ ಪ್ರಾತಿನಿಧ್ಯದ ವಿಷಯವನ್ನು ಆಯಾ ರಾಜ್ಯಗಳ ವಿವೇಚನೆಗೆ ಬಿಡಬೇಕೆಂದು ಟಿಡಿಪಿ ಕೇಂದ್ರ ಸರ್ಕಾರತವನ್ನು ಸರ್ವಾನುಮತದಿಂದ ಒತ್ತಾಯಿಸಲಿದೆ ಎಂದು ಅದರ ಮೂಲವೊಂದನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ.

ವಕ್ಫ್ ಮಂಡಳಿಗಳಲ್ಲಿ ಮಹಿಳೆಯರ ಸೇರ್ಪಡೆ ಸೇರಿದಂತೆ ಮಸೂದೆಯ ಇತರ ಎಲ್ಲಾ ತಿದ್ದುಪಡಿಗಳನ್ನು ಟಿಡಿಪಿ ಬೆಂಬಲಿಸಲಿದೆ. ಮಹಿಳೆಯರ ಪ್ರಾತಿನಿಧ್ಯ ಪ್ರಗತಿಪರ ಬದಲಾವಣೆ ಎಂಬುವುದು ಪಕ್ಷದ ಅಭಿಪ್ರಾಯ ಎಂದು ವರದಿ ವಿವರಿಸಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರು ಮಂಗಳವಾರ ಮಧ್ಯರಾತ್ರಿಯವರೆಗೂ ವಕ್ಫ್‌ ತಿದ್ದುಪಡಿ ಮಸೂದೆ ಕುರಿತು ಚರ್ಚೆ ನಡೆಸಿದ್ದಾರೆ. ಮಸೂದೆಯ ನಿಬಂಧನೆಗಳು ಮತ್ತು ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ್ದಾರೆ. ನಾಯ್ಡು ಅವರು ಮುಸ್ಲಿಂ ಗುಂಪುಗಳೊಂದಿಗೆ ತಮಗೆ ಯಾವುದು ಸ್ವೀಕಾರಾರ್ಹ ಮತ್ತು ಯಾವುದು ಸ್ವೀಕಾರಾರ್ಹವಲ್ಲ ಎಂಬುದನ್ನು ನೋಡಲು ಮಾತುಕತೆ ನಡೆಸಿದ್ದಾರೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವುದಕ್ಕೆ ಟಿಡಿಪಿಯ ವಿರೋಧವು, ‘ವಕ್ಫ್ ಕಾಯ್ದೆಯಲ್ಲಿನ ಬದಲಾವಣೆಗಳು ಆಂಧ್ರ ಪ್ರದೇಶದ ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಪಕ್ಷವು ನೀಡಿದ ಭರವಸೆ ಎಂದು ಪರಿಗಣಿಸಬೇಕು. ನಾವು ಬೆಂಬಲಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಪ್ರಯೋಜನಕಾರಿಯಾದ ಪ್ರಗತಿಪರ ಬದಲಾವಣೆಗಳು ಮಾತ್ರ ಟಿಡಿಪಿ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಕಳೆದ ಮಾರ್ಚ್‌ನಲ್ಲಿ ನಡೆದ ಇಫ್ತಾರ್‌ ಸಂಗಮದಲ್ಲಿ ಟಿಡಿಪಿ ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಭರವಸೆ ನೀಡಿದ್ದರು. ತಮ್ಮ ಸರ್ಕಾರ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾಯ್ಡು ಹೇಳಿದ್ದರು. ಟಿಡಿಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ದೊರಕಿದೆ. ಎನ್‌ಡಿಎ ಅಧಿಕಾರದಲ್ಲಿದ್ದರೆ ಮುಸ್ಲಿಮರು ಅಭಿವೃದ್ದಿಯಾಗುತ್ತಾರೆ ಎಂದಿದ್ದರು.

ಆಂಧ್ರದಲ್ಲಿ ಟಿಡಿಪಿಗೆ ಮುಸ್ಲಿಮರು ನಿರ್ಣಾಯಕ ಮತಬ್ಯಾಂಕ್ ಆಗಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ವಿವಿಧ ವಕ್ಫ್ ಮಂಡಳಿಗಳಿಗೆ ಸಲಹೆ ನೀಡುವ ಕೇಂದ್ರ ವಕ್ಫ್ ಕೌನ್ಸಿಲ್ ಮುಸ್ಲಿಮೇತರ ಸದಸ್ಯರನ್ನು ಹೊಂದಬಹುದು.
ವಕ್ಫ್‌ ಇಲಾಖೆಯ ಉಸ್ತುವಾರಿ ವಹಿಸುವ ಕೇಂದ್ರ ಸಚಿವರು ಕೌನ್ಸಿಲ್‌ನ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ.

ಪ್ರಸ್ತುತ ವಕ್ಫ್‌ ಕಾಯ್ದೆಯ ಪ್ರಕಾರ ಎಲ್ಲಾ ಕೌನ್ಸಿಲ್ ಸದಸ್ಯರು ಮುಸ್ಲಿಮರಾಗಿರಬೇಕು ಮತ್ತು ಕನಿಷ್ಠ ಇಬ್ಬರು ಮಹಿಳಾ ಸದಸ್ಯರು ಇರಬೇಕು. ಆದರೆ, ತಿದ್ದುಪಡಿ ಮಸೂದೆಯು ಸಂಸದರು, ಮಾಜಿ ನ್ಯಾಯಾಧೀಶರು ಮತ್ತು ಕಾಯ್ದೆಯ ಪ್ರಕಾರ ಪರಿಷತ್ತಿಗೆ ನೇಮಕಗೊಂಡ ಗಣ್ಯ ವ್ಯಕ್ತಿಗಳು ಮುಸ್ಲಿಮರಾಗಿರಬೇಕಾಗಿಲ್ಲ ಎಂದು ಹೇಳುತ್ತದೆ.

ತಿದ್ದುಪಡಿ ಮಸೂದೆಯಲ್ಲಿ ಸೂಚಿಸಲಾದ ಇತರ ಬದಲಾವಣೆಗಳಲ್ಲಿ ವಕ್ಫ್‌ ಕಾಯ್ದೆಯ ಹೆಸರನ್ನು “ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ-1995″ ಎಂದು ಮರುನಾಮಕರಣ ಮಾಡುವುದು ಸೇರಿದೆ.

ವಕ್ಫ್ ಮಂಡಳಿಗಳು, ಆಸ್ತಿಗಳ ನಿರ್ವಹಣೆ ಮತ್ತು ದಕ್ಷತೆಯನ್ನು ಸುಧಾರಿಸುವ, ಪರಿಣಾಮಕಾರಿ ಆಡಳಿತದ ಜೊತೆಗೆ ಸಬಲೀಕರಣ ಮತ್ತು ಅಭಿವೃದ್ಧಿಯನ್ನು ಒತ್ತಿಹೇಳುವ ವಿಶಾಲ ಉದ್ದೇಶ ಇದರ ಹಿಂದೆ ಇದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಲ್ಲದೆ, ಯಾವುದಾದರು ಆಸ್ತಿಯನ್ನು ‘ವಕ್ಫ್‌’ ಆಸ್ತಿ ಎಂದು ಪ್ರತಿಪಾದಿಸಿದರೆ, ಜಿಲ್ಲಾಧಿಕಾರಿ ಅದರ ಮಾಲೀಕತ್ವವನ್ನು ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಜಿಲ್ಲಾಧಿಕಾರಿ ಒಂದು ವೇಳೆ ವಕ್ಫ್ ಎಂದು ಹೇಳಲಾದ ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ಹೇಳಿದರೆ, ಅದನ್ನು ಸರ್ಕಾರ ಕಂದಾಯ ಇಲಾಖೆಯ ಅಡಿಯಲ್ಲಿ ನೋಂದಾಯಿಸುತ್ತದೆ” ಎಂದು ತಿದ್ದುಪಡಿ ಮಸೂದೆ ಹೇಳುತ್ತದೆ. ಮಾಲೀಕತ್ವ ನಿರ್ಣಯದ ಪ್ರಕ್ರಿಯೆ ಪ್ರಸ್ತುತ ವಕ್ಫ್‌ ಟ್ರಿಬ್ಯೂನಲ್‌ನಲ್ಲಿ ನಡೆಯುತ್ತಿದೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...