Homeಮುಖಪುಟವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

ವಕ್ಫ್‌ ಮಸೂದೆಯಲ್ಲಿ ಬಿಜೆಪಿ ಮಿತ್ರಪಕ್ಷ ಟಿಡಿಪಿ ಪ್ರಮುಖ ಬದಲಾವಣೆ ಕೋರುವ ಸಾಧ್ಯತೆ.. ಏನದು?

- Advertisement -
- Advertisement -

ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆ-2024 ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಗಳು ಮಸೂದೆಯ ಪರ-ವಿರೋಧ ಚರ್ಚೆಗೆ ಸಜ್ಜಾಗಿದೆ. ಇಡೀ ದೇಶದ ಚಿತ್ತ ಸಂಸತ್ತಿನತ್ತ ನೆಟ್ಟಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ), ವಕ್ಫ್ ಮಸೂದೆಯಲ್ಲಿ ಒಂದು ಪ್ರಮುಖ ತಿದ್ದುಪಡಿ ಕೋರುವ ಸಾಧ್ಯತೆ ಇದೆ.

ಮಂಗಳವಾರ (ಏಪ್ರಿಲ್ 1) ತನ್ನ 16 ಸಂಸದರಿಗೆ ಲೋಕಸಭೆಯಲ್ಲಿ ಹಾಜರಿರಬೇಕು ಮತ್ತು ಸರ್ಕಾರವನ್ನು ಬೆಂಬಲಿಸಬೇಕೆಂದು ವಿಪ್ ಜಾರಿ ಮಾಡಿರುವ ಟಿಡಿಪಿ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಮಸೂದೆಯ ವಿವಾದಾತ್ಮಕ ಅಂಶದ ಕುರಿತು ಬದಲಾವಣೆ ಕೋರುವ ನಿರೀಕ್ಷೆಯಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯ ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರ ಪ್ರಾತಿನಿಧ್ಯದ ವಿಷಯವನ್ನು ಆಯಾ ರಾಜ್ಯಗಳ ವಿವೇಚನೆಗೆ ಬಿಡಬೇಕೆಂದು ಟಿಡಿಪಿ ಕೇಂದ್ರ ಸರ್ಕಾರತವನ್ನು ಸರ್ವಾನುಮತದಿಂದ ಒತ್ತಾಯಿಸಲಿದೆ ಎಂದು ಅದರ ಮೂಲವೊಂದನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ.

ವಕ್ಫ್ ಮಂಡಳಿಗಳಲ್ಲಿ ಮಹಿಳೆಯರ ಸೇರ್ಪಡೆ ಸೇರಿದಂತೆ ಮಸೂದೆಯ ಇತರ ಎಲ್ಲಾ ತಿದ್ದುಪಡಿಗಳನ್ನು ಟಿಡಿಪಿ ಬೆಂಬಲಿಸಲಿದೆ. ಮಹಿಳೆಯರ ಪ್ರಾತಿನಿಧ್ಯ ಪ್ರಗತಿಪರ ಬದಲಾವಣೆ ಎಂಬುವುದು ಪಕ್ಷದ ಅಭಿಪ್ರಾಯ ಎಂದು ವರದಿ ವಿವರಿಸಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರು ಮಂಗಳವಾರ ಮಧ್ಯರಾತ್ರಿಯವರೆಗೂ ವಕ್ಫ್‌ ತಿದ್ದುಪಡಿ ಮಸೂದೆ ಕುರಿತು ಚರ್ಚೆ ನಡೆಸಿದ್ದಾರೆ. ಮಸೂದೆಯ ನಿಬಂಧನೆಗಳು ಮತ್ತು ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ್ದಾರೆ. ನಾಯ್ಡು ಅವರು ಮುಸ್ಲಿಂ ಗುಂಪುಗಳೊಂದಿಗೆ ತಮಗೆ ಯಾವುದು ಸ್ವೀಕಾರಾರ್ಹ ಮತ್ತು ಯಾವುದು ಸ್ವೀಕಾರಾರ್ಹವಲ್ಲ ಎಂಬುದನ್ನು ನೋಡಲು ಮಾತುಕತೆ ನಡೆಸಿದ್ದಾರೆ.

ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸುವುದಕ್ಕೆ ಟಿಡಿಪಿಯ ವಿರೋಧವು, ‘ವಕ್ಫ್ ಕಾಯ್ದೆಯಲ್ಲಿನ ಬದಲಾವಣೆಗಳು ಆಂಧ್ರ ಪ್ರದೇಶದ ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಪಕ್ಷವು ನೀಡಿದ ಭರವಸೆ ಎಂದು ಪರಿಗಣಿಸಬೇಕು. ನಾವು ಬೆಂಬಲಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಪ್ರಯೋಜನಕಾರಿಯಾದ ಪ್ರಗತಿಪರ ಬದಲಾವಣೆಗಳು ಮಾತ್ರ ಟಿಡಿಪಿ ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಕಳೆದ ಮಾರ್ಚ್‌ನಲ್ಲಿ ನಡೆದ ಇಫ್ತಾರ್‌ ಸಂಗಮದಲ್ಲಿ ಟಿಡಿಪಿ ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಭರವಸೆ ನೀಡಿದ್ದರು. ತಮ್ಮ ಸರ್ಕಾರ ವಕ್ಫ್ ಆಸ್ತಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾಯ್ಡು ಹೇಳಿದ್ದರು. ಟಿಡಿಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ದೊರಕಿದೆ. ಎನ್‌ಡಿಎ ಅಧಿಕಾರದಲ್ಲಿದ್ದರೆ ಮುಸ್ಲಿಮರು ಅಭಿವೃದ್ದಿಯಾಗುತ್ತಾರೆ ಎಂದಿದ್ದರು.

ಆಂಧ್ರದಲ್ಲಿ ಟಿಡಿಪಿಗೆ ಮುಸ್ಲಿಮರು ನಿರ್ಣಾಯಕ ಮತಬ್ಯಾಂಕ್ ಆಗಿದ್ದಾರೆ.

ವಕ್ಫ್ (ತಿದ್ದುಪಡಿ) ಮಸೂದೆಯ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ವಿವಿಧ ವಕ್ಫ್ ಮಂಡಳಿಗಳಿಗೆ ಸಲಹೆ ನೀಡುವ ಕೇಂದ್ರ ವಕ್ಫ್ ಕೌನ್ಸಿಲ್ ಮುಸ್ಲಿಮೇತರ ಸದಸ್ಯರನ್ನು ಹೊಂದಬಹುದು.
ವಕ್ಫ್‌ ಇಲಾಖೆಯ ಉಸ್ತುವಾರಿ ವಹಿಸುವ ಕೇಂದ್ರ ಸಚಿವರು ಕೌನ್ಸಿಲ್‌ನ ಪದನಿಮಿತ್ತ ಅಧ್ಯಕ್ಷರಾಗಿರುತ್ತಾರೆ.

ಪ್ರಸ್ತುತ ವಕ್ಫ್‌ ಕಾಯ್ದೆಯ ಪ್ರಕಾರ ಎಲ್ಲಾ ಕೌನ್ಸಿಲ್ ಸದಸ್ಯರು ಮುಸ್ಲಿಮರಾಗಿರಬೇಕು ಮತ್ತು ಕನಿಷ್ಠ ಇಬ್ಬರು ಮಹಿಳಾ ಸದಸ್ಯರು ಇರಬೇಕು. ಆದರೆ, ತಿದ್ದುಪಡಿ ಮಸೂದೆಯು ಸಂಸದರು, ಮಾಜಿ ನ್ಯಾಯಾಧೀಶರು ಮತ್ತು ಕಾಯ್ದೆಯ ಪ್ರಕಾರ ಪರಿಷತ್ತಿಗೆ ನೇಮಕಗೊಂಡ ಗಣ್ಯ ವ್ಯಕ್ತಿಗಳು ಮುಸ್ಲಿಮರಾಗಿರಬೇಕಾಗಿಲ್ಲ ಎಂದು ಹೇಳುತ್ತದೆ.

ತಿದ್ದುಪಡಿ ಮಸೂದೆಯಲ್ಲಿ ಸೂಚಿಸಲಾದ ಇತರ ಬದಲಾವಣೆಗಳಲ್ಲಿ ವಕ್ಫ್‌ ಕಾಯ್ದೆಯ ಹೆಸರನ್ನು “ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ-1995″ ಎಂದು ಮರುನಾಮಕರಣ ಮಾಡುವುದು ಸೇರಿದೆ.

ವಕ್ಫ್ ಮಂಡಳಿಗಳು, ಆಸ್ತಿಗಳ ನಿರ್ವಹಣೆ ಮತ್ತು ದಕ್ಷತೆಯನ್ನು ಸುಧಾರಿಸುವ, ಪರಿಣಾಮಕಾರಿ ಆಡಳಿತದ ಜೊತೆಗೆ ಸಬಲೀಕರಣ ಮತ್ತು ಅಭಿವೃದ್ಧಿಯನ್ನು ಒತ್ತಿಹೇಳುವ ವಿಶಾಲ ಉದ್ದೇಶ ಇದರ ಹಿಂದೆ ಇದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಲ್ಲದೆ, ಯಾವುದಾದರು ಆಸ್ತಿಯನ್ನು ‘ವಕ್ಫ್‌’ ಆಸ್ತಿ ಎಂದು ಪ್ರತಿಪಾದಿಸಿದರೆ, ಜಿಲ್ಲಾಧಿಕಾರಿ ಅದರ ಮಾಲೀಕತ್ವವನ್ನು ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಜಿಲ್ಲಾಧಿಕಾರಿ ಒಂದು ವೇಳೆ ವಕ್ಫ್ ಎಂದು ಹೇಳಲಾದ ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ಹೇಳಿದರೆ, ಅದನ್ನು ಸರ್ಕಾರ ಕಂದಾಯ ಇಲಾಖೆಯ ಅಡಿಯಲ್ಲಿ ನೋಂದಾಯಿಸುತ್ತದೆ” ಎಂದು ತಿದ್ದುಪಡಿ ಮಸೂದೆ ಹೇಳುತ್ತದೆ. ಮಾಲೀಕತ್ವ ನಿರ್ಣಯದ ಪ್ರಕ್ರಿಯೆ ಪ್ರಸ್ತುತ ವಕ್ಫ್‌ ಟ್ರಿಬ್ಯೂನಲ್‌ನಲ್ಲಿ ನಡೆಯುತ್ತಿದೆ.

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...