Homeಕರ್ನಾಟಕಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

- Advertisement -
- Advertisement -

‘ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಒಳ ಮೀಸಲಾತಿಗಾಗಿ ಸಮೀಕ್ಷೆ ನಡೆಸಲು ಮುಂದಾಗಿದ್ದು, ಅದನ್ನು ವೈಜ್ಞಾನಿಕವಾಗಿ ನಡೆಸಬೇಕು. ಸಮುದಾಯ ಯಾವುದೇ ವ್ಯಕ್ತಿ ಈ ಸಮೀಕ್ಷೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ನಾವು ಮನವಿ ಮಾಡುತ್ತಿದ್ದೇವೆ” ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಗಮೋಹನ್ ದಾಸ್ ಸಮಿತಿಯು ತನ್ನ ಪ್ರಶ್ನಾವಳಿಗಳನ್ನು ಬಹಳ ಎಚ್ಚರಿಕೆ ಹಾಗೂ ಜವಾಬ್ದಾರಿಯಿಂದ ರೂಪಿಸಬೇಕಿದೆ. ಯಾವುದಾರೂ ಒಂದು ಸಮುದಾಯವು ತನ್ನ ಜಾತಿ ಹೆಸರೇಳುವುದರಿಂದ ತಪ್ಪಿಸಿಕೊಂಡರೆ ಅಥವಾ ವ್ಯತ್ಯಾಸವಾದರೆ, ಅವರ ಮೂಲ ಜಾತಿ ಹೆಸರನ್ನು ತಿಳಿದುಕೊಂಡು ನಮೂದಿಸುವ ಹಾಗೆ ಮಾದರಿ ರೂಪಿಸಬೇಕಾಗಿರುವುದು ಬಹಳ ಮುಖ್ಯವಾದ ಅಂಶ. ಸುಪ್ರೀಂಕೋರ್ಟ್‌ ಹೇಳಿರುವಂತೆ, ಅಂತರ್ ಹಿಂದುಳಿದಿರುವಿಕೆಯನ್ನು ಸಾಬೀತು ಮಾಡಿ, ಆ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿದೆ. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಅವರು ಈ ಬಗ್ಗೆ ಹೆಚ್ಚುವರಿ ಎಚ್ಚರಿಕೆ ವಹಿಸಬೇಕು” ಎಂದು ಮನವಿ ಮಾಡಿದರು.

“ಅಲೆಮಾರಿ ಸಮುದಾಯಗಳು ಸಮೀಕ್ಷಾ ತಂಡಕ್ಕೆ ಸಿಗದೆ ಇರುವ ಸಾಧ್ಯತೆಗಳು ಹೆಚ್ಚಿವೆ. ಏಕೆಂದರೆ, ಅವರು ಸದಾ ಸಂಚಾರದಲ್ಲಿರುತ್ತಾರೆ. ಬೆಳಗ್ಗೆ ಒಂದು ಊರಿನಲ್ಲಿ ಇದ್ದರೆ, ಮಧ್ಯಾಹ್ನ ಮತ್ಯಾವುದೋ ಊರಿನಲ್ಲಿ ಇರುತ್ತಾರೆ. ಎಲ್ಲೋ ಮಲಗಿ ಮತ್ತಿನ್ನೆಲ್ಲೋ ಎದ್ದೇಳುತ್ತಾರೆ. ಅಗೋಚರ ಸ್ಥಿತಿಯಲ್ಲಿರುವ ಅಲೆಮಾರಿಗಳನ್ನು ಹೇಗೆ ಹುಡುಕುತ್ತಾರೆ ಎಂಬುದು ಮುಖ್ಯವಾಗುತ್ತದೆ. ಸ್ವಾತಂತ್ರ್ಯ ನಂತರ ಅಲೆಮಾರಿಗಳು ಕನಿಷ್ಠ ಸೌಲಭ್ಯ ಪಡೆದುಕೊಂಡಿದ್ದಾರೆ. ಹಾಗಾಗಿ, ಆ ಸಮುದಾಯಕ್ಕೆ ಸಮರ್ಪಕ ನ್ಯಾಯ ಸಿಗುವಂತೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

“ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಸರ್ಕಾರ ಹಲವಾರು ಕಾರಣಗಳನ್ನು ನೀಡಿ ಮುಂದೂಡಿದೆ. ಯಾವುದೇ ಕಾರಣಕ್ಕೂ ಮತ್ತಷ್ಟ ವಿಳಂಬ ಮಾಡಬಾರದು. ಸರ್ಕಾರ ನಿಗದಿಪಡಿಸಿರುವ 60 ದಿನಗಳ ಕಾಲಾವಧಿಯಲ್ಲಿ ಸಮೀಕ್ಷೆ ಮುಗಿಸಿ ವರದಿ ಕೊಡಬೇಕು. ಸರ್ಕಾರ ಮೀನಾಮೇಷ ಎಣಿಸದೆ ತಕ್ಷಣ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದೆ” ಎಂದರು.

40% ಕಮಿಷನ್ ಆರೋಪ ಕುರಿತ ಆಯೋಗದ ವರದಿಯಲ್ಲಿ ಇಬ್ಬರು ಮಾಜಿ ಬಿಜೆಪಿ ಶಾಸಕರ ಹೆಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...