Homeಮುಖಪುಟಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್...

ಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್ ಕಾರಟ್

- Advertisement -
- Advertisement -

ಹಿಂದುತ್ವ ನವ ಫ್ಯಾಸಿಸಂ ವಿರುದ್ಧ ಹೋರಾಡಲು ಮತ್ತು ಅದನ್ನು ಎದುರಿಸಲು ಶಕ್ತಿ ಮತ್ತು ದೃಢಸಂಕಲ್ಪ ಇರುವುದು ಎಡಪಕ್ಷಗಳಿಗೆ ಮಾತ್ರವಾಗಿದೆ ಎಂದು ಸಿಪಿಐ(ಎಂ) ಹಿರಿಯ ನಾಯಕ, ಪಕ್ಷದ ಸಂಚಾಲಕ ಪ್ರಕಾಶ್ ಕಾರಟ್ ಬುಧವಾರ ಹೇಳಿದ್ದಾರೆ. “ದೇಶದ ಮೇಲಿನ ಸಾಮ್ರಾಜ್ಯಶಾಹಿ ಉದ್ದೇಶಗಳ ವಿರುದ್ಧ ಹೋರಾಟವನ್ನು ಮುನ್ನಡೆಸಬಲ್ಲವರು ಎಡಪಕ್ಷಗಳು ಮಾತ್ರ” ಎಂದು ಅವರು ತಮಿಳುನಾಡಿನ ಮಧುರೈನಲ್ಲಿ ನಡೆಯುತ್ತಿರುವ ಪಕ್ಷದ 24ನೇ ರಾಷ್ಟ್ರೀಯ ಮಹಾ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಮಹಾಅಧಿವೇಶನವು ಏಪ್ರಿಲ್ 2 ರಿಂದ 6 ರವರೆಗೆ ನಡೆಯಲಿದೆ. ಎಡಪಕ್ಷಗಳಷ್ಟೆ ಹಿಂದುತ್ವದ

ಪ್ರತಿಗಾಮಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಎಲ್ಲಾ ಎಡ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಶಕ್ತಿಗಳ ಒಗ್ಗಟ್ಟಿಗೆ ಕರೆ ನೀಡಿದ ಅವರು, “ಈ ಕರೆ ಜೋರಾಗಿ ಮತ್ತು ಸ್ಪಷ್ಟವಾಗಿ ಹೋಗಲಿ: ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಮಾರ್ಗಗಳಲ್ಲಿ ನವ ಭಾರತವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. ಪ್ರಜಾಪ್ರಭುತ್ವ ಮತ್ತು ಸಮಾಜವಾದದ ಕಡೆಗೆ…” ಎಂದು ಕಾರಟ್ ಹೇಳಿದ್ದಾರೆ. ಎಡಪಕ್ಷಗಳಷ್ಟೆ ಹಿಂದುತ್ವದ

ಬಿಜೆಪಿ ವಿರುದ್ಧ ಎಲ್ಲಾ ಜಾತ್ಯತೀತ ಶಕ್ತಿಗಳ ವಿಶಾಲವಾದ ವೇದಿಕೆಗೆ ಪಕ್ಷವು ಶ್ರಮಿಸುತ್ತಿದ್ದರೂ, ಎಡಪಕ್ಷಗಳೆ ಸ್ಥಿರವಾದ ಶಕ್ತಿ ಎಡಪಕ್ಷಗಳೆ ಆಗಿದೆ. ನವ-ಉದಾರವಾದಿ ನೀತಿಗಳ ಬಗ್ಗೆ ಎಡಪಕ್ಷಗಳು ರಾಜಿಯಾಗದ ನಿಲುವಿನಿಂದಾಗಿ ಹಿಂದುತ್ವ ಮತ್ತು ಬಹುಸಂಖ್ಯಾತ ಕೋಮುವಾದದ ಎಲ್ಲಾ ಅಭಿವ್ಯಕ್ತಿಗಳ ವಿರುದ್ಧ ದೃಢವಾಗಿ ಮತ್ತು ರಾಜಿಯಾಗದಂತೆ ಹೋರಾಡಬಲ್ಲವು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಕಾರಟ್ ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ ಸಾಮಾಜಿಕ ಸಂಬಂಧಗಳ ಮೂಲ ಚೌಕಟ್ಟಾಗಿ ಜಾತಿ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಬಿಜೆಪಿ-ಆರ್‌ಎಸ್‌ಎಸ್ ಒಕ್ಕೂಟವು ಉಪ-ಜಾತಿ ಗುರುತುಗಳನ್ನು ಮೋಸದಿಂದ ಬಳಸುತ್ತಿದೆ ಎಂದು ಆರೋಪಿಸಿದ ಅವರು, ಮನುವಾದಿ ಮೌಲ್ಯಗಳನ್ನು ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕುತಂತ್ರದಿಂದ ತುಂಬಿಸಲಾಗುತ್ತಿದೆ ಎಂದು ಆರೋಪಿಸಿದದಾರೆ.

“ಮಹಿಳೆಯರು, ದಲಿತರು ಮತ್ತು ಆದಿವಾಸಿಗಳ ಹಕ್ಕುಗಳ ಮೇಲೆ ದಾಳಿ ಮಾಡುವ ಮನುವಾದಿ-ಪಿತೃಪ್ರಭುತ್ವ ವ್ಯವಸ್ಥೆಯ ವಿರುದ್ಧದ ಹೋರಾಟವು ಹಿಂದುತ್ವ ಶಕ್ತಿಗಳ ವಿರುದ್ಧದ ಹೋರಾಟದ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದ್ದಾರೆ. ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರಟ್ ಅವರು ಸೀತಾರಾಮ್ ಯಚೂರಿ ಅವರ ನಿಧನದ ನಂತರ ಮಧ್ಯಂತರವಾಗಿ ಪಕ್ಷದ ಸಂಚಾಲಕರಾಗಿ ಆಯ್ಕೆಯಾಗಿದ್ದರು.

ತಮ್ಮ ಪಕ್ಷ ಮತ್ತು ಎಡಪಂಥೀಯರು ಅನೇಕ ಹೋರಾಟಗಳನ್ನು ನಡೆಸುತ್ತಿದ್ದರೂ, ಆ ಹೋರಾಟಗಳಲ್ಲಿ ಭಾಗವಹಿಸುವ ಜನಸಾಮಾನ್ಯರಿಗೆ ಪ್ರತಿಗಾಮಿ ಮತ್ತು ವಿಭಜಕ ಹಿಂದುತ್ವ ಕೋಮುವಾದದ ವಿರುದ್ಧ ತಿಳಿಸಿದರೆ ಮಾತ್ರ ಅವರು ರಾಜಕೀಯೀಕರಣಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕದ ಸಾಮ್ರಾಜ್ಯಶಾಹಿಯು ಆರ್ಥಿಕ ಮತ್ತು ವ್ಯಾಪಾರಿ ಯುದ್ಧಗಳು ಮತ್ತು ಮಿಲಿಟರಿ ಹಸ್ತಕ್ಷೇಪಗಳ ಮೂಲಕ ಪ್ರಪಂಚದಾದ್ಯಂತದ ದೇಶಗಳ ಮೇಲೆ ಹೊಸ ದಾಳಿಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ. “ಸಿಪಿಐ(ಎಂ) ಮತ್ತು ಎಡಪಂಥೀಯರು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟಗಳನ್ನು ಸಕ್ರಿಯವಾಗಿ ಮುನ್ನಡೆಸಲು ಮತ್ತು ಮೋದಿ ಸರ್ಕಾರದ ಸಾಮ್ರಾಜ್ಯಶಾಹಿ ಪರ ನೀತಿಗಳನ್ನು ಬಹಿರಂಗಪಡಿಸಲು ಇದು ಸುಸಮಯ” ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ)ನ ಸ್ವತಂತ್ರ ಬಲವನ್ನು ಹೇಗೆ ಹೆಚ್ಚಿಸುವುದು ಎಂಬ ಪ್ರಮುಖ ವಿಷಯವನ್ನು ಪಕ್ಷದ ಅಧಿವೇಶನವು ಚರ್ಚಿಸುತ್ತದೆ ಎಂದು ಕಾರಟ್ ಹೇಳಿದ್ದಾರೆ. “ಇಡೀ ದೇಶವನ್ನು ತೆಗೆದುಕೊಂಡರೆ, ಪಕ್ಷವನ್ನು ತಳಮಟ್ಟದಲ್ಲಿ ನಿರ್ಮಿಸಲು ಮತ್ತು ಪಕ್ಷದ ಸಂಘಟನೆಯ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ವರ್ಗ ಮತ್ತು ಸಾಮೂಹಿಕ ವಿಷಯಗಳ ಕುರಿತು ಸ್ಥಳೀಯ ಹೋರಾಟಗಳನ್ನು ಪ್ರಾರಂಭಿಸಲು ಯೋಜಿತ ಪ್ರಯತ್ನ ಇರಬೇಕು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...