Homeಕರ್ನಾಟಕಬೆಲೆ ಏರಿಕೆಯ ಮೂಲ ಕಾರಣೀಕರ್ತರ ವಿರುದ್ಧ ಪ್ರತಿಭಟಿಸಿದರೆ ನಮ್ಮ ಬೆಂಬಲವಿದೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ

ಬೆಲೆ ಏರಿಕೆಯ ಮೂಲ ಕಾರಣೀಕರ್ತರ ವಿರುದ್ಧ ಪ್ರತಿಭಟಿಸಿದರೆ ನಮ್ಮ ಬೆಂಬಲವಿದೆ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬೆಲೆ ಏರಿಕೆಯ ಸಮಸ್ಯೆಗೆ ಮೂಲ ಕಾರಣೀಕರ್ತರ ಬಗ್ಗೆ ಬಿಜೆಪಿ ಪ್ರತಿಭಟಿಸುವುದಾದರೆ ನಾವೂ ಬೆಂಬಲಿಸುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದ್ದು, ದೇಶದ ಎಲ್ಲಾ ಬೆಲೆಗಳ ಏರಿಕೆಯ ಹಿಂದೆ ಮೋದಿಯವರ ಆರ್ಥಿಕ ಅನೀತಿಗಳ ಮಾಸ್ಟರ್ ಸ್ಟ್ರೋಕ್‌ಗಳ ಕಾರಣವಿದೆ ಎಂದು ಅವರು ಹೇಳಿದ್ದಾರೆ.

“ಪಾಪ್ ಕಾರ್ನ್ ಮೇಲೂ GST ಹೇರಿದಾಗ, ಮಕ್ಕಳ ಪುಸ್ತಕ, ಪೆನ್ಸಿಲ್ ಗಳಲ್ಲೂ ತೆರಿಗೆ ಲೂಟಿ ಮಾಡಿದಾಗ, 43,500 ಕೋಟಿ ಕನಿಷ್ಠ ಠೇವಣಿ ದಂಡವನ್ನು ವಸೂಲಿ ಮಾಡಿದಾಗ, ಜೀವ ವಿಮೆಗೂ 18% ಜಿಎಸ್ಟಿ ಲೂಟಿ ಮಾಡಿದಾಗ, GST ಕಾರಣಕ್ಕಾಗಿ ಸಣ್ಣ ಉದ್ದಿಮೆಗಳು ಬಾಗಿಲು ಮುಚ್ಚಿದಾಗ, ಉದ್ಯೋಗ ಕಡಿತವಾದಾಗ,
ಭಾರತೀಯರ ಖರೀದಿ ಸಾಮರ್ಥ್ಯ ಕುಸಿದು, ಬದುಕು ಬರ್ಬರವಾದಾಗ ಬಿಜೆಪಿ ಸ್ನೇಹಿತರಿಗೆ ಜನಾಕ್ರೋಶ ಕಾಣಲಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಬಿಜೆಪಿ ನಾಯಕರಿಗೆ ನಿಜಕ್ಕೂ ಜನರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪನೀರ್, ಮೊಸರು ಸೇರಿದಂತೆ ಎಲ್ಲಾ ಆಹಾರ ಪದಾರ್ಥಗಳ ಮೇಲಿನ GST ತೆರವು ಮಾಡಿಸಲಿ. ಪೆಟ್ರೋಲ್, ಡೀಸೆಲ್ ಮೇಲಿನ ದರ ಇಳಿಸಿ ಕಚ್ಚಾ ತೈಲದ ಬೆಲೆ ಇಳಿಕೆಯ ಲಾಭವನ್ನು ಜನರಿಗೆ ವರ್ಗಾಯಿಸುವಂತೆ ಆಗ್ರಹಿಸಲಿ. ಎಟಿಎಂ ಶುಲ್ಕ, ಕನಿಷ್ಠ ಠೇವಣಿ ದಂಡಗಳನ್ನು ತೆರವು ಮಾಡಿಸಲಿ.” ಎಂದು ಅವರು ಹೇಳಿದ್ದಾರೆ.

“ಬಿಜೆಪಿಯವರು ಜನಾಕ್ರೋಶ ಪ್ರತಿಭಟನೆ ಮಾಡುವ ಮುನ್ನ ತಮ್ಮ ಆರೆಸ್ಸೆಸ್‌ ಆಕ್ರೋಶದ ಬಗ್ಗೆ ಮಾತನಾಡಲಿ. ದೇಶದಲ್ಲಿನ ಆದಾಯ ಅಸಮಾನತೆ, ನಿರುದ್ಯೋಗ, ಬಡತನ, ದೂರದೃಷ್ಟಿ ಇಲ್ಲದ ಕೇಂದ್ರ ಸರ್ಕಾರದ ನೀತಿಗಳನ್ನು ಆರೆಸ್ಸೆಸ್‌ ಕಟುವಾಗಿ ಟೀಕಿಸಿತ್ತು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅರಿವಿದೆಯೇ?” ಎಂದು ಅವರು ಹೇಳಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮೋದಿ ಸರ್ಕಾರದ ವಿರುದ್ಧ 2022ರಲ್ಲಿ ಆರೆಸ್ಸೆಸ್ ನೀಡಿದ್ದ ಹೇಳಿಕೆಯ ವರದಿಯ ಚಿತ್ರವನ್ನು ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಗೆ ಈ ಬಗ್ಗೆ ಅರಿವಿಲ್ಲ ಎಂದಾದರೆ ಕೇಶವಕೃಪಾಕ್ಕೆ ತೆರಳಿ “ಆರೆಸ್ಸೆಸ್ಸ್‌ ಆಕ್ರೋಶ”ದ ಬಗ್ಗೆ ತಿಳಿದುಕೊಂಡು ರಾಜ್ಯದ ಜನತೆಗೆ ಉತ್ತರಿಸುವ ದಮ್ಮು ತಾಕತ್ತು ಪ್ರದರ್ಶಿಸಲಿ ಎಂದು ಹೇಳಿದ್ದಾರೆ. ಬೆಲೆ ಏರಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...