Homeಮುಖಪುಟಮಧ್ಯಪ್ರದೇಶ: ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆಗೈದ ಭದ್ರತಾ ಪಡೆ

ಮಧ್ಯಪ್ರದೇಶ: ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆಗೈದ ಭದ್ರತಾ ಪಡೆ

- Advertisement -
- Advertisement -

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಲ್ಲಿ ಬುಧವಾರ (ಏ.2) ವಿಶೇಷ ಪೊಲೀಸ್ ಪಡೆ ‘ಹಾಕ್‌’ನೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತಲಾ 14 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದ್ದ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮಾಂಡ್ಲಾ ಜಿಲ್ಲೆಯ ಬಿಚಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಬುಧವಾರ ಬೆಳಿಗ್ಗೆ ನಕ್ಸಲರು ಮತ್ತು ಹಾಕ್ ಪಡೆಗಳ ನಡುವೆ ಮುಖಾಮುಖಿ ನಡೆದಿದ್ದು, ಇಬ್ಬರನ್ನು ಹತ್ಯೆಗೈದ ಬಳಿಕ ಪೊಲೀಸರು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

“ಬುಧವಾರ ಬೆಳಿಗ್ಗೆ ಮಾಂಡ್ಲಾ ಜಿಲ್ಲೆಯ ಬಿಚಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರೊಂದಿಗೆ (ಹಾಕ್ ಪಡೆ) ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ. ಅವರ ಬಳಿಯಿದ್ದ ಒಂದು ಎಸ್‌ಎಲ್‌ಆರ್ ರೈಫಲ್, ಒಂದು ರೈಫಲ್, ವೈರ್‌ಲೆಸ್ ಸೆಟ್ ಮತ್ತು ಇತರ ದಿನನಿತ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ಶೋಧ ನಡೆಯುತ್ತಿದೆ” ಎಂದು ಮಧ್ಯಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ನಕ್ಸಲರನ್ನು ಕೊಂದ ಪೊಲೀಸ್ ಸಿಬ್ಬಂದಿಯನ್ನು ಮುಖ್ಯಮಂತ್ರಿ ಮೋಹನ್ ಯಾದವ್ ಅಭಿನಂದಿಸಿದ್ದಾರೆ. ರಾಜ್ಯದಲ್ಲಿ ನಕ್ಸಲರನ್ನು ನಿರ್ಮೂಲನೆ ಮಾಡಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ.

“ಮಾಂಡ್ಲಾ ಜಿಲ್ಲೆಯಲ್ಲಿ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ತಲಾ 14 ಲಕ್ಷ ರೂಪಾಯಿ ಬಹುಮಾನ ಘೋಷಣೆಯಾಗಿದ್ದ ಇಬ್ಬರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ನಮ್ಮ ಪೊಲೀಸ್ ಪಡೆ ನಿರಂತರವಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿವೆ. ಪೊಲೀಸರು ಹತರಾದ ನಕ್ಸಲರ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜ್ಯದಿಂದ ನಕ್ಸಲರನ್ನು ನಿರ್ಮೂಲನೆ ಮಾಡಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ” ಎಂದು ಸಿಎಂ ಯಾದವ್ ಹೇಳಿದ್ದಾರೆ.

“ಕಳೆದ ಒಂದು ವರ್ಷದಲ್ಲಿ ನಾವು ವಿವಿಧ ಎನ್‌ಕೌಂಟರ್‌ಗಳಲ್ಲಿ ಹತ್ತುಕ್ಕೂ ಹೆಚ್ಚು ನಕ್ಸಲರನ್ನು ಕೊಂದಿದ್ದೇವೆ. ನಮ್ಮ ಪೊಲೀಸ್ ಸಿಬ್ಬಂದಿಯನ್ನು ನಾನು ಈ ಕಾರಣಕ್ಕೆ ಅಭಿನಂದಿಸುತ್ತೇನೆ. ಈ ಕಾರ್ಯಾಚರಣೆಯಲ್ಲಿ ನಮ್ಮ ಯಾವುದೇ ಪೊಲೀಸ್ ಸಿಬ್ಬಂದಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ” ಎಂದು ಸಿಎಂ ಯಾದವ್ ತಿಳಿಸಿದ್ದಾರೆ.

ಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್ ಕಾರಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...