Homeಮುಖಪುಟಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

ಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರಕ್ಕೆ 2 ವರ್ಷದ ಬಾಲಕಿ ಬಲಿ: ವರದಿ

- Advertisement -
- Advertisement -

ಹದಿನೈದು ದಿನಗಳ ಹಿಂದೆ ಆಂಧ್ರಪ್ರದೇಶದಲ್ಲಿ ಎರಡು ವರ್ಷದ ಬಾಲಕಿ ಹಕ್ಕಿ ಜ್ವರಕ್ಕೆ ಬಲಿಯಾಗಿದ್ದಾಳೆ ಎಂದು ಬುಧವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ‘ಹಿಂದೂಸ್ಥಾನ್ ಟೈಮ್ಸ್‌’ ವರದಿ ಮಾಡಿದೆ.

ಮಾರ್ಚ್ 16 ರಂದು ಶಿಶು ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ; ಪುಣೆ ಮೂಲದ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಮಾರ್ಚ್ 24 ರಂದು ಆಕೆಯ ಮಾದರಿಯನ್ನು ಪರೀಕ್ಷಿಸಿದ ನಂತರ, ಬಾಲಕಿಗೆ ಹಕ್ಕಿ ಜ್ವರ ಬಂದಿದೆ ಎಂದು ದೃಢಪಡಿಸಿದೆ. ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಮಾದರಿಗಳ ಪರೀಕ್ಷೆಯಿಂದ ಹಕ್ಕಿ ಜ್ವರವನ್ನು ದೃಢಪಡಿಸಿದೆ ಎಂದು ಅಧಿಕಾರಿ ಹೇಳಿದರು.

“ಏಮ್ಸ್-ಮಂಗಳಗಿರಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದಾಳೆ” ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೂ, ಮಗುವಿನ ಕುಟುಂಬ ಸದಸ್ಯರಿಗೆ ಹಕ್ಕಿ ಜ್ವರ ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದಾಗ, ಫೆಬ್ರವರಿ 26 ರಂದು ಬಾಲಕಿ ಹಸಿ ಕೋಳಿಯ ಸಣ್ಣ ತುಂಡನ್ನು ತಿಂದಿದ್ದಾಳೆ ಎಂದು ದೃಢೀಕರಣ ಸಿಕ್ಕಿದೆ. ಇದು ರೋಗ ಹರಡಲು ಸಂಭವನೀಯ ಕಾರಣ ಎನ್ನಲಾಗಿದೆ. ಕುಟುಂಬ ಸದಸ್ಯರು ಹೇಳುವಂತೆ, ಹುಡುಗಿ ಒಂದು ಅಥವಾ ಎರಡು ತುಂಡು ಹಸಿ ಕೋಳಿ ಮಾಂಸವನ್ನು ತಿನ್ನುತ್ತಿದ್ದಳು. ರೋಗ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲು ಆಕೆ ಒಂದು ತುಂಡು ಸೇವಿಸಿದ್ದಳು.

ಫೆಬ್ರವರಿ 28 ರಂದು ಅವಳಿಗೆ ಜ್ವರ ಮತ್ತು ಇತರ ಲಕ್ಷಣಗಳು ಕಾಣಿಸಿಕೊಂಡವು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮಾರ್ಚ್ 4 ರಂದು, ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡ ನಂತರ ಅವಳನ್ನು ಏಮ್ಸ್- ಮಂಗಳಗಿರಿಗೆ ದಾಖಲಿಸಲಾಯಿತು.

ಪಲ್ನಾಡು ಜಿಲ್ಲೆಯ ನರಸಾಪೇಟ್ ಪಟ್ಟಣದ ಬಲಿಯಾ ನಗರದಲ್ಲಿ ಹುಡುಗಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು; ತಂದೆ ಬ್ಯಾಂಕ್ ರಿಕವರಿ ಏಜೆಂಟ್ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. ಕುಟುಂಬದ ಎಲ್ಲ ಸದಸ್ಯರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವರ ದೇಃದಲ್ಲಿ ಪಕ್ಷಿ ನೆಗೆಟಿವ್ ವರದಿ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ನಿರ್ದೇಶಕ ಡಾ. ಟಿ. ದಾಮೋದರ್ ನಾಯ್ಡು, ಪಲ್ನಾಡು ಮತ್ತು ನೆರೆಯ ಜಿಲ್ಲೆಗಳಿಂದ ಯಾವುದೇ ಹಕ್ಕಿ ಜ್ವರದ ಪ್ರಕರಣ ವರದಿಯಾಗಿಲ್ಲ ಎಂದು ಹೇಳಿದರು. “ನಾವು ಈ ಪ್ರದೇಶದ ಎಲ್ಲ ಕೋಳಿ ಸಾಕಣೆ ಕೇಂದ್ರಗಳ ಭೌತಿಕ ಕಣ್ಗಾವಲು ನಡೆಸಿದ್ದೇವೆ. ಕೋಳಿಗಳಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ” ಎಂದು ಅವರು ಹೇಳಿದರು.

“ಹಸಿ ಕೋಳಿ ಮಾಂಸವನ್ನು ತಿಂದ ನಂತರ ಹುಡುಗಿಗೆ ಹಕ್ಕಿ ಜ್ವರ ಬಂದಿರಬಹುದು. ಆದರೆ, ಕುಟುಂಬವು ಬೇಯಿಸಿದ ಕೋಳಿ ಮಾಂಸವನ್ನು ಸೇವಿಸಿತ್ತು” ಎಂದು ಡಾ. ನಾಯ್ಡು ಹೇಳಿದರು. “60-70 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಹಕ್ಕಿ ಜ್ವರ ವೈರಸ್ ಬದುಕುಳಿಯುವುದಿಲ್ಲವಾದ್ದರಿಂದ, ಚೆನ್ನಾಗಿ ಬೇಯಿಸಿದ ನಂತರ ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ನಾವು ಜನರಿಗೆ ಸಲಹೆ ನೀಡುತ್ತೇವೆ” ಎಂದು ಅವರು ಹೇಳಿದರು.

ಜನರ ಹಿತದೃಷ್ಟಿಯಿಂದ ಮಾತುಕತೆಗೆ ಸಿದ್ದ: ಸಿಪಿಎಂ (ಮಾವೋವಾದಿ) ಕೇಂದ್ರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...