Homeಅಂತರಾಷ್ಟ್ರೀಯಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

- Advertisement -
- Advertisement -

ಈ ಹಿಂದೆ ಹೇಳಿದಂತೆ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಶ್ವೇತ ಭವನದ ರೋಸ್ ಗಾರ್ಡನ್‌ನಲ್ಲಿ ನಡೆದ ‘ಮೇಕ್ ಅಮೆರಿಕ ವೆಲ್ದಿ ಅಗೈನ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ವಿವಿಧ ದೇಶಗಳು ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕ ಮತ್ತು ಅದಕ್ಕೆ ಪ್ರತಿಯಾಗಿ ಅಮೆರಿಕ ಘೋಷಣೆ ಮಾಡಿದ ಸುಂಕದ ಚಾರ್ಟ್‌ ಪ್ರದರ್ಶಿಸಿದ್ದಾರೆ.

ಪ್ರತಿಸುಂಕ ವಿಧಿಸಿದ ನಿನ್ನೆಯ ದಿನವನ್ನು (ಏ.2) ‘ಅಮೆರಿಕದ ವಿಮೋಚನಾ ದಿನ’ (US Libaration Day)ಎಂದು ಕರೆದ ಟ್ರಂಪ್, “2025ರ ಏಪ್ರಿಲ್ 2ನ್ನು ಅಮೆರಿಕದ ಕೈಗಾರಿಕೆಗಳು ಮರುಹುಟ್ಟು ಪಡೆದ ದಿನವನ್ನಾಗಿ ಸದಾ ನೆನಪಿಸಿಕೊಳ್ಳಬೇಕು. ಅಮೆರಿಕದ ಭವಿಷ್ಯದ ಪುನರುತ್ಥಾನದ ದಿನ, ಅಮೆರಿಕವನ್ನು ಮತ್ತೆ ಸಮೃದ್ಧ ರಾಷ್ಟ್ರವನ್ನಾಗಿಸುವುದನ್ನು ಪ್ರಾರಂಭ ಮಾಡಿದ ದಿನ. ನಾವು ದೇಶವನ್ನು ಸಮೃದ್ಧ, ಉತ್ತಮ ಹಾಗೂ ಸಂಪದ್ಭರಿತ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ದಶಕಗಳಿಂದ ಹತ್ತಿರದ-ದೂರದ, ಶತ್ರು-ಮಿತ್ರ ಎಲ್ಲಾ ರಾಷ್ಟ್ರಗಳು ಅಮೆರಿಕವನ್ನು ಲೂಟಿಗೈದಿವೆ. ನಮಗೆ ಅನ್ಯಾಯ ಮಾಡಿವೆ ಎಂದ ಟ್ರಂಪ್, ಇಂತಹ ವ್ಯಾಪಾರ ಅಸಮಾನತೆ ಮುಂದುವರಿಯಲು ಈ ಹಿಂದಿನ ಅಮೆರಿಕನ್ ನಾಯಕರನ್ನು ಕಾರಣರಾಗಿದ್ದಾರೆ” ಎಂದು ದೂಷಿಸಿದ್ದಾರೆ.

ಜಾಗತಿಕ ಸುಂಕ ವ್ಯವಸ್ಥೆಯಲ್ಲಿ ತುಂಬಾ ವ್ಯತ್ಯಾಸವಿದೆ ಎಂದು ಆರೋಪಿಸಿದ ಟ್ರಂಪ್, “ಮೋಟಾರ್‌ ಸೈಕಲ್‌ಗಳ ಆಮದಿನ ಮೇಲೆ ಅಮೆರಿಕ ಶೇಕಡ 2.4ರಷ್ಟು ಸುಂಕ ವಿಧಿಸಿದರೆ, ಥೈಲ್ಯಾಂಡ್, ಶೇ.60, ಭಾರತ ಶೇ.70, ವಿಯೆಟ್ನಾಂ ಶೇ.75ರಷ್ಟು ಹಾಗೂ ಇತರ ದೇಶಗಳು ಇದಕ್ಕಿಂತಲೂ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ವಿವರಿಸಿದ್ದಾರೆ.

ಆಟೋ ಮೊಬೈಲ್ ಉದ್ಯಮದಲ್ಲಿನ ಸುಂಕ ವ್ಯತ್ಯಾಸದ ಬಗ್ಗೆ ಉಲ್ಲೇಖಿಸಿದ ಟ್ರಂಪ್, “ಅಮೆರಿಕ ವಿದೇಶಿ ನಿರ್ಮಿತ ವಾಹನಗಳ ಆಮದಿನ ಮೇಲೆ ಶೇ.2.5ರಷ್ಟು ಮಾತ್ರ ಸುಂಕ ವಿಧಿಸುತ್ತಿದೆ. ಆದರೆ, ಯುರೋಪಿಯನ್ ದೇಶಗಳು ಶೇ. 10ರಷ್ಟು ಸುಂಕ ವಿಧಿಸುತ್ತಿವೆ. ಅವರು ಶೇ. 20ರಷ್ಟು ವ್ಯಾಟ್‌ ಕೂಡ ವಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯಾವ ದೇಶದ ಮೇಲೆ ಎಷ್ಟು ಪ್ರತಿ ಸುಂಕ?..ಇಲ್ಲಿದೆ ಪಟ್ಟಿ 
 

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ: ಬೆಳಗಿನ ಜಾವ 1.15ಕ್ಕೆ ನಡೆದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...