Homeಮುಖಪುಟವಕ್ಫ್ ಮಸೂದೆ ವಿರುದ್ಧ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ: ಸ್ಟಾಲಿನ್ ಘೋಷಣೆ

ವಕ್ಫ್ ಮಸೂದೆ ವಿರುದ್ಧ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದೆ: ಸ್ಟಾಲಿನ್ ಘೋಷಣೆ

- Advertisement -
- Advertisement -

ಲೋಕಸಭೆಯಲ್ಲಿ ವಕ್ಫ್ ಮಸೂದೆ (ತಿದ್ದುಪಡಿ) ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ತಮ್ಮ ಪಕ್ಷವು ಮಸೂದೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಿದೆ ಗುರುವಾರ ಹೇಳಿದ್ದಾರೆ. ಮಸೂದೆ ಅಂಗೀಕಾರದ ವಿರುದ್ಧ ಪ್ರತಿಭಟಿಸಿ ಡಿಎಂಕೆ ಮತ್ತು ಅದರ ಮಿತ್ರ ಪಕ್ಷಗಳ ಸದಸ್ಯರು ಗುರುವಾರ ವಿಧಾನಸಭೆ ಕಲಾಪದಲ್ಲಿ ಕಪ್ಪು ಬ್ಯಾಡ್ಜ್ ಧರಿಸಿ ಭಾಗವಹಿಸಿದ್ದರು.

ಕಳೆದ ವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ನೆನಪಿಸಿಕೊಂಡ ಸ್ಟಾಲಿನ್, “2025 ರ ಮಾರ್ಚ್ 27 ರಂದು ಕೇಂದ್ರ ಸರ್ಕಾರವು ವಕ್ಫ್ ಮಸೂದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಬಿಜೆಪಿ ಹೊರತುಪಡಿಸಿ, ಉಳಿದ ಎಲ್ಲಾ ಸದಸ್ಯರು ಅದನ್ನು ಬೆಂಬಲಿಸಿದರು” ಎಂದು ಹೇಳಿದ್ದಾರೆ.

ವಕ್ಫ್ ಮಸೂದೆ (ತಿದ್ದುಪಡಿ) ದೇಶದಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಬಹುದು ಮತ್ತು ಮುಸ್ಲಿಂ ಸಮುದಾಯದ ಮೇಲೆ ಪರಿಣಾಮ ಬೀರಬಹುದು ಎಂದು ಒತ್ತಿ ಹೇಳಿದ ಸ್ಟಾಲಿನ್, “ನಾವು ನಿರ್ಣಯವನ್ನು ಅಂಗೀಕರಿಸಿದ್ದೇವೆ ಮತ್ತು ಬಹುಪಾಲು ರಾಜಕೀಯ ಪಕ್ಷಗಳು ಅದನ್ನು ವಿರೋಧಿಸಿದರೂ, ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇದು ಅತ್ಯಂತ ಖಂಡನೀಯ.” ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಮಸೂದೆಯ ವಿರುದ್ಧ 232 ಮತಗಳು ಮತ್ತು ಅದನ್ನು ಬೆಂಬಲಿಸಿದ 288 ಮತಗಳನ್ನು ಎತ್ತಿ ತೋರಿಸಿದ ಸಿಎಂ ಸ್ಟಾಲಿನ್, ಮಸೂದೆಯ ಪರವಾಗಿ ಹೆಚ್ಚಿನ ಜನರು ಮತ ಚಲಾಯಿಸಿದರೂ, ವಿರೋಧಿಸಿದ 232 ಸದಸ್ಯರು ಸಾಮಾನ್ಯ ಸಂಖ್ಯೆಯಲ್ಲ ಎಂದು ಹೇಳಿದ್ದಾರೆ. “ಈ ಮಸೂದೆಯನ್ನು ಕೇವಲ ವಿರೋಧಿಸಬಾರದು, ಸಂಪೂರ್ಣವಾಗಿ ಹಿಂಪಡೆಯಬೇಕು ಎಂಬುದು ನಮ್ಮ ನಿಲುವು” ಎಂದು ಅವರು ಹೇಳಿದ್ದಾರೆ.

ಬಹುಪಾಲು ಪಕ್ಷಗಳ ವಿರೋಧದ ಹೊರತಾಗಿಯೂ ಮತ್ತು ಕೆಲವೇ ಕೆಲವು ಸಮ್ಮಿಶ್ರ ಪಕ್ಷಗಳ (ಬಿಜೆಪಿಯ) ಬೆಂಬಲದೊಂದಿಗೆ ಬೆಳಗಿನ ಜಾವ 2 ಗಂಟೆಗೆ ಮಸೂದೆಯನ್ನು ಅಂಗೀಕರಿಸುವುದು ಸಂವಿಧಾನದ ಮೇಲಿನ “ದಾಳಿ” ಎಂದು ಅವರು ಬಣ್ಣಿಸಿದ್ದಾರೆ. “ಈ ನಡೆಯು ಕೋಮು ಸಾಮರಸ್ಯವನ್ನು ಕದಡುತ್ತದೆ” ಎಂದು ಹೇಳಿದ ಅವರು, ಇದಕ್ಕಾಗಿಯೇ ತಾನು ಮತ್ತು ಇತರ ಸದಸ್ಯರು ಕಪ್ಪು ಬ್ಯಾಡ್ಜ್ ಧರಿಸಿದ್ದಾಗಿ ವಿವರಿಸಿದ್ದಾರೆ.

ಮಸೂದೆಯು ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ನಾಶಪಡಿಸುತ್ತದೆ ಮತ್ತು ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯಾಗಿ ಪರಿಣಮಿಸುತ್ತದೆ ಎಂದು ಆರೋಪಿಸಿದ ಅವರು, ತಮಿಳುನಾಡು ಅದರ ವಿರುದ್ಧ ಹೋರಾಟ ನಡೆಸಲಿದ್ದು, ಅದರಲ್ಲಿ ತಮಿಳುನಾಡು ಗೆಲ್ಲುತ್ತದೆ ಎಂದು ಅವರು ಘೋಷಿಸಿದ್ದಾರೆ. “ನಾವು ಕಾನೂನು ಕ್ರಮಗಳ ಮೂಲಕ ಮಸೂದೆಯನ್ನು ತಡೆಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...