Homeಮುಖಪುಟರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

ಲೋಕಸಭೆಯಲ್ಲಿ ಅಂಗೀಕಾರ ಪಡೆದ ಬಳಿಕ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು.

ಬುಧವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿತ್ತು. ಸಂಸತ್ತಿನ ಕೆಳಮನೆಯಲ್ಲಿ ಸುದೀರ್ಘ 12 ಗಂಟೆಗೂ ಹೆಚ್ಚು ಸಮಯ, ಅಂದರೆ ತಡರಾತ್ರಿ 2 ಗಂಟೆಯವರೆಗೂ ಮಸೂದೆ ಮೇಲೆ ಚರ್ಚೆ ನಡೆದು, ಬಳಿಕ ಅಂಗೀಕಾರ ಪಡೆಯಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 288 ಮತಗಳು ಮತ್ತು ವಿರುದ್ಧ 232 ಮತಗಳು ಚಲಾವಣೆಯಾಗಿವೆ.

ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ ಕಿರಣ್ ರಿಜಿಜು ಅವರು, “ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ. ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಲಾಗಿತ್ತು. ಜೆಪಿಸಿಯ ಸಮಾಲೋಚನೆಗಳ ಬಗ್ಗೆ ಸಂದೇಹಗಳು ಎದ್ದಿದ್ದರೂ, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.

ವಕ್ಫ್‌ ಆಸ್ತಿಗಳ ಸರಿಯಾದ ಬಳಕೆ ಭಾರತವನ್ನು ಅಭಿವೃದ್ದಿಯತ್ತ ಕೊಂಡಯ್ಯಲಿದೆ ಎಂದ ರಿಜಿಜು, ಕಾಂಗ್ರೆಸ್‌ ಸೇರಿದಂತೆ ಇತರ ಪ್ರತಿಪಕ್ಷಗಳಿಗೆ ಮಸೂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿಶ್ವದಲ್ಲಿಯೇ ಅತಿ ಹೆಚ್ಚು ವಕ್ಫ್‌ ಆಸ್ತಿಗಳು ಭಾರತದಲ್ಲಿದೆ. ಭಾರತೀಯ ಸೇನೆ ಮತ್ತು ರೈಲ್ವೆ ಬಳಿಕ ಅತೀ ಹೆಚ್ಚು ಆಸ್ತಿ ವಕ್ಫ್‌ ಮಂಡಳಿಗಳ ಬಳಿ ಇದೆ. ಇಷ್ಟು ಆಸ್ತಿ ಇದ್ದರೂ ಬಡ ಮುಸ್ಲಿಮರಿಗೆ ಇದರಿಂದ ಏನೂ ಪ್ರಯೋಜನ ಆಗುತ್ತಿಲ್ಲ. ಹಾಗಾಗಿ, ನಾವು ವಕ್ಫ್‌ ಆಸ್ತಿಗಳು ಮುಸ್ಲಿಂ ಸಮುದಾಯಕ್ಕೆ ಉಪಯೋಗವಾಗುವಂತೆ ಮಾಡುತ್ತಿದ್ದೇವೆ ಎಂದರು.

ಸೇನೆ ಮತ್ತು ರೈಲ್ವೆ ಆಸ್ತಿಗಳು ಸರ್ಕಾರಿ ಆಸ್ತಿಯಾಗಿದ್ದು, ಅದು ರಾಷ್ಟ್ರದ ಆಸ್ತಿ. ಆದರೆ, ವಕ್ಫ್‌ ಖಾಸಗಿ ಆಸ್ತಿ, ಇಷ್ಟು ದೊಡ್ಡ ಮಟ್ಟದಲ್ಲಿ ಖಾಸಗಿ ಆಸ್ತಿಗಳು ಇರುವಾಗ ಅದರ ಲೆಕ್ಕಾಚಾರಗಳು ಬೇಕಿದೆ. ಹಾಗಾಗಿ, ಈ ಮಸೂದೆಯನ್ನು ತರುತ್ತಿದ್ದೇವೆ ಎಂದು ಹೇಳಿದರು.

ವಕ್ಫ್‌ ತಿದ್ದುಪಡಿ ಮಸೂದೆಯು ಕೇವಲ ಬಳಕೆಯ ಕಾರಣಕ್ಕೆ ದಾಖಲೆಗಳಿಲ್ಲದೆ ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಣೆ ಮಾಡುವುದನ್ನು ತಡೆಯಲಿದೆ. ಆದಿವಾಸಿಗಳ ಆಸ್ತಿಗಳನ್ನು ವಕ್ಫ್‌ ಆಸ್ತಿ ಎನ್ನಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ವಕ್ಫ್‌ ಕಾಯ್ದೆಯ ಸೆಕ್ಷನ್ 40 ಅನ್ನು ದುರ್ಬಳಕೆ ಮಾಡಲಾಗುತ್ತಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ವಾಸಿಸುತ್ತಿರುವ ಒಂದು ಇಡೀ ಗ್ರಾಮವನ್ನೇ ವಕ್ಫ್‌ ಆಸ್ತಿ ಎನ್ನಲಾಗಿದೆ. ಇದರು ವಿರುದ್ದ ಕ್ರೈಸ್ತ ಸಮುದಾಯ ನಮಗೆ ದೂರು ನೀಡಿದೆ. ಇಂತಹ ಉದಾಹರಣೆಗಳು ಕರ್ನಾಟಕ, ಹರಿಯಾಣದಲ್ಲಿ ನಡೆದಿವೆ. ಇಂತಹ ದುರ್ಬಳಕೆಯನ್ನು ತಿದ್ದುಪಡಿ ಮಸೂದೆಯ ತಡೆಯಲಿದೆ ಎಂದು ಹೇಳಿದರು.

ಪ್ರಸ್ತುತ, ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006ರಲ್ಲಿ ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳ ಈಗಿನ ಆದಾಯ ಎಷ್ಟಿರಬಹುದು ಊಹಿಸಿ ಎಂದು ಹೇಳಿದರು.

ಈ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಸದಸ್ಯರು ಯಾವುದೇ ಗೊಂದಲಗಳಿದ್ದರೂ ಚರ್ಚೆ ನಡೆಸಬಹುದು. ನಿಮ್ಮ ಎಲ್ಲಾ ಪ್ರಶ್ನೆಗಳನ್ನು ಆಲಿಸಲು ನಾನು ಸಿದ್ದ ಎಂದು ಸಚಿವ ರಿಜಿಜು ಹೇಳಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...