Homeಮುಖಪುಟರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

ಲೋಕಸಭೆಯಲ್ಲಿ ಅಂಗೀಕಾರ ಪಡೆದ ಬಳಿಕ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು.

ಬುಧವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿತ್ತು. ಸಂಸತ್ತಿನ ಕೆಳಮನೆಯಲ್ಲಿ ಸುದೀರ್ಘ 12 ಗಂಟೆಗೂ ಹೆಚ್ಚು ಸಮಯ, ಅಂದರೆ ತಡರಾತ್ರಿ 2 ಗಂಟೆಯವರೆಗೂ ಮಸೂದೆ ಮೇಲೆ ಚರ್ಚೆ ನಡೆದು, ಬಳಿಕ ಅಂಗೀಕಾರ ಪಡೆಯಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 288 ಮತಗಳು ಮತ್ತು ವಿರುದ್ಧ 232 ಮತಗಳು ಚಲಾವಣೆಯಾಗಿವೆ.

ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ ಕಿರಣ್ ರಿಜಿಜು ಅವರು, “ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ. ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಲಾಗಿತ್ತು. ಜೆಪಿಸಿಯ ಸಮಾಲೋಚನೆಗಳ ಬಗ್ಗೆ ಸಂದೇಹಗಳು ಎದ್ದಿದ್ದರೂ, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.

ವಕ್ಫ್‌ ಆಸ್ತಿಗಳ ಸರಿಯಾದ ಬಳಕೆ ಭಾರತವನ್ನು ಅಭಿವೃದ್ದಿಯತ್ತ ಕೊಂಡಯ್ಯಲಿದೆ ಎಂದ ರಿಜಿಜು, ಕಾಂಗ್ರೆಸ್‌ ಸೇರಿದಂತೆ ಇತರ ಪ್ರತಿಪಕ್ಷಗಳಿಗೆ ಮಸೂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿಶ್ವದಲ್ಲಿಯೇ ಅತಿ ಹೆಚ್ಚು ವಕ್ಫ್‌ ಆಸ್ತಿಗಳು ಭಾರತದಲ್ಲಿದೆ. ಭಾರತೀಯ ಸೇನೆ ಮತ್ತು ರೈಲ್ವೆ ಬಳಿಕ ಅತೀ ಹೆಚ್ಚು ಆಸ್ತಿ ವಕ್ಫ್‌ ಮಂಡಳಿಗಳ ಬಳಿ ಇದೆ. ಇಷ್ಟು ಆಸ್ತಿ ಇದ್ದರೂ ಬಡ ಮುಸ್ಲಿಮರಿಗೆ ಇದರಿಂದ ಏನೂ ಪ್ರಯೋಜನ ಆಗುತ್ತಿಲ್ಲ. ಹಾಗಾಗಿ, ನಾವು ವಕ್ಫ್‌ ಆಸ್ತಿಗಳು ಮುಸ್ಲಿಂ ಸಮುದಾಯಕ್ಕೆ ಉಪಯೋಗವಾಗುವಂತೆ ಮಾಡುತ್ತಿದ್ದೇವೆ ಎಂದರು.

ಸೇನೆ ಮತ್ತು ರೈಲ್ವೆ ಆಸ್ತಿಗಳು ಸರ್ಕಾರಿ ಆಸ್ತಿಯಾಗಿದ್ದು, ಅದು ರಾಷ್ಟ್ರದ ಆಸ್ತಿ. ಆದರೆ, ವಕ್ಫ್‌ ಖಾಸಗಿ ಆಸ್ತಿ, ಇಷ್ಟು ದೊಡ್ಡ ಮಟ್ಟದಲ್ಲಿ ಖಾಸಗಿ ಆಸ್ತಿಗಳು ಇರುವಾಗ ಅದರ ಲೆಕ್ಕಾಚಾರಗಳು ಬೇಕಿದೆ. ಹಾಗಾಗಿ, ಈ ಮಸೂದೆಯನ್ನು ತರುತ್ತಿದ್ದೇವೆ ಎಂದು ಹೇಳಿದರು.

ವಕ್ಫ್‌ ತಿದ್ದುಪಡಿ ಮಸೂದೆಯು ಕೇವಲ ಬಳಕೆಯ ಕಾರಣಕ್ಕೆ ದಾಖಲೆಗಳಿಲ್ಲದೆ ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಣೆ ಮಾಡುವುದನ್ನು ತಡೆಯಲಿದೆ. ಆದಿವಾಸಿಗಳ ಆಸ್ತಿಗಳನ್ನು ವಕ್ಫ್‌ ಆಸ್ತಿ ಎನ್ನಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ವಕ್ಫ್‌ ಕಾಯ್ದೆಯ ಸೆಕ್ಷನ್ 40 ಅನ್ನು ದುರ್ಬಳಕೆ ಮಾಡಲಾಗುತ್ತಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ವಾಸಿಸುತ್ತಿರುವ ಒಂದು ಇಡೀ ಗ್ರಾಮವನ್ನೇ ವಕ್ಫ್‌ ಆಸ್ತಿ ಎನ್ನಲಾಗಿದೆ. ಇದರು ವಿರುದ್ದ ಕ್ರೈಸ್ತ ಸಮುದಾಯ ನಮಗೆ ದೂರು ನೀಡಿದೆ. ಇಂತಹ ಉದಾಹರಣೆಗಳು ಕರ್ನಾಟಕ, ಹರಿಯಾಣದಲ್ಲಿ ನಡೆದಿವೆ. ಇಂತಹ ದುರ್ಬಳಕೆಯನ್ನು ತಿದ್ದುಪಡಿ ಮಸೂದೆಯ ತಡೆಯಲಿದೆ ಎಂದು ಹೇಳಿದರು.

ಪ್ರಸ್ತುತ, ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006ರಲ್ಲಿ ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳ ಈಗಿನ ಆದಾಯ ಎಷ್ಟಿರಬಹುದು ಊಹಿಸಿ ಎಂದು ಹೇಳಿದರು.

ಈ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಸದಸ್ಯರು ಯಾವುದೇ ಗೊಂದಲಗಳಿದ್ದರೂ ಚರ್ಚೆ ನಡೆಸಬಹುದು. ನಿಮ್ಮ ಎಲ್ಲಾ ಪ್ರಶ್ನೆಗಳನ್ನು ಆಲಿಸಲು ನಾನು ಸಿದ್ದ ಎಂದು ಸಚಿವ ರಿಜಿಜು ಹೇಳಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...