Homeಮುಖಪುಟರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

ಲೋಕಸಭೆಯಲ್ಲಿ ಅಂಗೀಕಾರ ಪಡೆದ ಬಳಿಕ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಗುರುವಾರ (ಏ.3) ರಾಜ್ಯಸಭೆಯಲ್ಲಿ ಮಂಡಿಸಿದರು.

ಬುಧವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿತ್ತು. ಸಂಸತ್ತಿನ ಕೆಳಮನೆಯಲ್ಲಿ ಸುದೀರ್ಘ 12 ಗಂಟೆಗೂ ಹೆಚ್ಚು ಸಮಯ, ಅಂದರೆ ತಡರಾತ್ರಿ 2 ಗಂಟೆಯವರೆಗೂ ಮಸೂದೆ ಮೇಲೆ ಚರ್ಚೆ ನಡೆದು, ಬಳಿಕ ಅಂಗೀಕಾರ ಪಡೆಯಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 288 ಮತಗಳು ಮತ್ತು ವಿರುದ್ಧ 232 ಮತಗಳು ಚಲಾವಣೆಯಾಗಿವೆ.

ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ ಕಿರಣ್ ರಿಜಿಜು ಅವರು, “ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ನಾವು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿದ್ದೇವೆ. ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಲಾಗಿತ್ತು. ಜೆಪಿಸಿಯ ಸಮಾಲೋಚನೆಗಳ ಬಗ್ಗೆ ಸಂದೇಹಗಳು ಎದ್ದಿದ್ದರೂ, ವ್ಯಾಪಕ ಚರ್ಚೆಗಳ ನಂತರ ಮಸೂದೆಯನ್ನು ನಿನ್ನೆ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಹೇಳಿದರು.

ವಕ್ಫ್‌ ಆಸ್ತಿಗಳ ಸರಿಯಾದ ಬಳಕೆ ಭಾರತವನ್ನು ಅಭಿವೃದ್ದಿಯತ್ತ ಕೊಂಡಯ್ಯಲಿದೆ ಎಂದ ರಿಜಿಜು, ಕಾಂಗ್ರೆಸ್‌ ಸೇರಿದಂತೆ ಇತರ ಪ್ರತಿಪಕ್ಷಗಳಿಗೆ ಮಸೂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ವಿಶ್ವದಲ್ಲಿಯೇ ಅತಿ ಹೆಚ್ಚು ವಕ್ಫ್‌ ಆಸ್ತಿಗಳು ಭಾರತದಲ್ಲಿದೆ. ಭಾರತೀಯ ಸೇನೆ ಮತ್ತು ರೈಲ್ವೆ ಬಳಿಕ ಅತೀ ಹೆಚ್ಚು ಆಸ್ತಿ ವಕ್ಫ್‌ ಮಂಡಳಿಗಳ ಬಳಿ ಇದೆ. ಇಷ್ಟು ಆಸ್ತಿ ಇದ್ದರೂ ಬಡ ಮುಸ್ಲಿಮರಿಗೆ ಇದರಿಂದ ಏನೂ ಪ್ರಯೋಜನ ಆಗುತ್ತಿಲ್ಲ. ಹಾಗಾಗಿ, ನಾವು ವಕ್ಫ್‌ ಆಸ್ತಿಗಳು ಮುಸ್ಲಿಂ ಸಮುದಾಯಕ್ಕೆ ಉಪಯೋಗವಾಗುವಂತೆ ಮಾಡುತ್ತಿದ್ದೇವೆ ಎಂದರು.

ಸೇನೆ ಮತ್ತು ರೈಲ್ವೆ ಆಸ್ತಿಗಳು ಸರ್ಕಾರಿ ಆಸ್ತಿಯಾಗಿದ್ದು, ಅದು ರಾಷ್ಟ್ರದ ಆಸ್ತಿ. ಆದರೆ, ವಕ್ಫ್‌ ಖಾಸಗಿ ಆಸ್ತಿ, ಇಷ್ಟು ದೊಡ್ಡ ಮಟ್ಟದಲ್ಲಿ ಖಾಸಗಿ ಆಸ್ತಿಗಳು ಇರುವಾಗ ಅದರ ಲೆಕ್ಕಾಚಾರಗಳು ಬೇಕಿದೆ. ಹಾಗಾಗಿ, ಈ ಮಸೂದೆಯನ್ನು ತರುತ್ತಿದ್ದೇವೆ ಎಂದು ಹೇಳಿದರು.

ವಕ್ಫ್‌ ತಿದ್ದುಪಡಿ ಮಸೂದೆಯು ಕೇವಲ ಬಳಕೆಯ ಕಾರಣಕ್ಕೆ ದಾಖಲೆಗಳಿಲ್ಲದೆ ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಣೆ ಮಾಡುವುದನ್ನು ತಡೆಯಲಿದೆ. ಆದಿವಾಸಿಗಳ ಆಸ್ತಿಗಳನ್ನು ವಕ್ಫ್‌ ಆಸ್ತಿ ಎನ್ನಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ವಕ್ಫ್‌ ಕಾಯ್ದೆಯ ಸೆಕ್ಷನ್ 40 ಅನ್ನು ದುರ್ಬಳಕೆ ಮಾಡಲಾಗುತ್ತಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ವಾಸಿಸುತ್ತಿರುವ ಒಂದು ಇಡೀ ಗ್ರಾಮವನ್ನೇ ವಕ್ಫ್‌ ಆಸ್ತಿ ಎನ್ನಲಾಗಿದೆ. ಇದರು ವಿರುದ್ದ ಕ್ರೈಸ್ತ ಸಮುದಾಯ ನಮಗೆ ದೂರು ನೀಡಿದೆ. ಇಂತಹ ಉದಾಹರಣೆಗಳು ಕರ್ನಾಟಕ, ಹರಿಯಾಣದಲ್ಲಿ ನಡೆದಿವೆ. ಇಂತಹ ದುರ್ಬಳಕೆಯನ್ನು ತಿದ್ದುಪಡಿ ಮಸೂದೆಯ ತಡೆಯಲಿದೆ ಎಂದು ಹೇಳಿದರು.

ಪ್ರಸ್ತುತ, ದೇಶದಲ್ಲಿ 8.72 ಲಕ್ಷ ವಕ್ಫ್ ಆಸ್ತಿಗಳಿವೆ. 2006ರಲ್ಲಿ ಸಾಚಾರ್ ಸಮಿತಿಯು 4.9 ಲಕ್ಷ ವಕ್ಫ್ ಆಸ್ತಿಗಳಿಂದ 12,000 ಕೋಟಿ ರೂ.ಗಳ ಆದಾಯವನ್ನು ಅಂದಾಜಿಸಿದ್ದರೆ, ಈ ಆಸ್ತಿಗಳ ಈಗಿನ ಆದಾಯ ಎಷ್ಟಿರಬಹುದು ಊಹಿಸಿ ಎಂದು ಹೇಳಿದರು.

ಈ ಮಸೂದೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಸದಸ್ಯರು ಯಾವುದೇ ಗೊಂದಲಗಳಿದ್ದರೂ ಚರ್ಚೆ ನಡೆಸಬಹುದು. ನಿಮ್ಮ ಎಲ್ಲಾ ಪ್ರಶ್ನೆಗಳನ್ನು ಆಲಿಸಲು ನಾನು ಸಿದ್ದ ಎಂದು ಸಚಿವ ರಿಜಿಜು ಹೇಳಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...